• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಜನರ ಸಮಸ್ಯೆ ಪರಿಹಾರ ಮಾಡಿ ನೂತನ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಪಾಠ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಬೆಂಗಳೂರು ನಗರ > ಜನರ ಸಮಸ್ಯೆ ಪರಿಹಾರ ಮಾಡಿ ನೂತನ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಪಾಠ
ಜಿಲ್ಲೆಬೆಂಗಳೂರು ನಗರರಾಜಕೀಯರಾಜ್ಯರಾಜ್ಯಧರ್ಮ ಎಕ್ಸ್‌ಕ್ಲೂಸಿವ್

ಜನರ ಸಮಸ್ಯೆ ಪರಿಹಾರ ಮಾಡಿ ನೂತನ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಪಾಠ

admin
Last updated: 2023/06/26 at 9:08 AM
admin
Share
3 Min Read
SHARE

– ಬೆವರು-ಶ್ರಮ ಸಂಸ್ಕೃತಿಗೆ ಅಸಹ್ಯ ಪಡದವರನ್ನು ಜನ ಗೌರವಿಸಿ ಗೆಲ್ಲಿಸುತ್ತಾರೆ

– ಜನಪರ ನಿಲುವು, ಜನಪರ ಭಾಷೆ, ವಿಷಯ ತಜ್ಞತೆ, ಅಧ್ಯಯನಶೀಲತೆ, ಸಿದ್ಧತೆ ಮತ್ತು ತರಬೇತಿ ಪ್ರತಿ ಶಾಸಕರಿಗೆ ಅತ್ಯಗತ್ಯ

– ಜನಪರ ಕಾಳಜಿ ಇಲ್ಲದವರು ಆಕಸ್ಮಿಕವಾಗಿ ಒಮ್ಮೆ ಗೆಲ್ಲಬಹುದು ಅಷ್ಟೆ

– ಬರಿ ಹಣ ಮತ್ತು ಧಿಮಾಕು, ಅಧಿಕಾರ ಮದದಿಂದ ರಾಜಕಾರಣ ಮಾಡಲು ಸಾಧ್ಯವಿಲ್ಲ

– ಒಮ್ಮೆಯಾದರೂ ವಿಧಾನಸೌಧದ ಮೆಟ್ಟಿಲು ಹತ್ತಬೇಕು ಎನ್ನುವ ತವಕ ಬಹಳ ಶಾಸಕರಿಗೆ ಇರತ್ತೆ. ಅವರಲ್ಲಿ ಹಲವರು ಅಧಿವೇಶನಗಳಲ್ಲಿ ಇರುವುದೇ ಇಲ್ಲ.

ಬೆಂಗಳೂರು : ಸಂಸದೀಯ ಪ್ರಜಾಪ್ರಭುತ್ವದ ದೇಗುಲ ವಿಧಾನಸಭೆ. ಇಲ್ಲಿ ಜನರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರಸ್ತಾಪಿಸಿ ಪರಿಹಾರ ಪಡೆದುಕೊಳ್ಳುವ ಮನಸ್ಥಿತಿ ಬೆಳೆಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾದ ಶಾಸಕರುಗಳ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಯಾರು ಸಂವಿಧಾನವನ್ನು ಓದಿ ಅರ್ಥ ಮಾಡಿಕೊಳ್ಳುವುದಿಲ್ಲವೋ ಅವರು ಉತ್ತಮ ಶಾಸಕರಾಗಲು, ಸಂಸದರಾಗಲು ಸಾಧ್ಯವಿಲ್ಲ. ಆದ್ದರಿಂದ ಮೊದಲು ಸಂವಿಧಾನವನ್ನು ಓದಿ ಅದರ ಮೂಲಭೂತ ತತ್ವ ಮತ್ತು ಉದ್ದೇಶಗಳನ್ನು ಅರಿತುಕೊಳ್ಳಿ. ಸದನದ ನಿಯಮಾವಳಿಗಳನ್ನು ನಾವೇ ಮಾಡಿದ್ದೇವೆ. ಅದನ್ನು ಸರಿಯಾಗಿ ಓದಿ ಅರ್ಥ ಮಾಡಿಕೊಂಡರೆ ಜನರ ಸಮಸ್ಯೆಗಳನ್ನು ನಿಯಮಬದ್ದವಾಗಿ ಸದನದ ಮುಂದೆ ಮಂಡಿಸಬಹುದು ಎಂದರು.

ಸಂವಿಧಾನಕ್ಕೆ ವಿರುದ್ಧವಾದ ಕಾನೂನು-ಕಾಯ್ದೆಗಳನ್ನು ಮಾಡಲು ಸಾಧ್ಯವಿಲ್ಲ. ಆದ್ದರಿಂದ ಸಂವಿಧಾನದ ಓದು ಅತ್ಯಗತ್ಯ ಎಂದರು.

ಬಸವಣ್ಣನವರ ಬಜೆಟ್

ಶಾಸಕರು ಸಂಸದರು ಬಜೆಟ್ ಅಂದರೆ ಏನೆಂದು ಅರ್ಥ ಮಾಡಿಕೊಳ್ಳಬೇಕು. 12ನೇ ಶತಮಾನದಲ್ಲಿ ಕಾಯಕಯೋಗಿ ಬಸವಣ್ಣನವರು ಬಜೆಟ್ ಬಗ್ಗೆ ಹೇಳಿದ್ದಾರೆ. ಕಾಯಕ ಮತ್ತು ದಾಸೋಹ ಬಜೆಟ್ ನ ಪ್ರಮುಖ ಸಂಗತಿಗಳು. ಕಾಯಕ ಅಂದರೆ ಉತ್ಪಾದನೆ, ದಾಸೋಹ ಅಂದರೆ ಹಂಚಿಕೆ. ಬಜೆಟ್ ಅಂದರೆ ಇಷ್ಟೆ, ಎಲ್ಲಿಂದ ಉತ್ಪಾದನೆ ಬರುತ್ತದೆ ಅದನ್ನು ಸಮಾಜದ ಯಾರಿಗೆ ಹಂಚುತ್ತೇವೆ ಎನ್ನುವುದೇ ಬಜೆಟ್ ನ ಮೌಲ್ಯ ಎಂದು ವಿವರಿಸಿದರು.

ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ವಿಧಾನ‌ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ, ವಸತಿ ಸಚಿವರಾದ ಜಮೀರ್ ಅಹಮದ್ ಖಾನ್, ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರು ಉಪಸ್ಥಿತರಿದ್ದರು.

ಬಾಕ್ಸ್
ನೂರು ಕುರಿ ಎಣಿಸಕ್ಕೆ ಬಾರದವನು

ನಾನು ಮೊದಲ ಬಾರಿ ಹಣಕಾಸು ಸಚಿವನಾದಾಗ “ನೂರು ಕುರಿ ಎಣಿಸಲು ಬಾರದವನು ಬಜೆಟ್ ಹೇಗೆ ಮಾಡ್ತಾರೆ?” ಎಂದು ಪತ್ರಿಕೆಯೊಂದು ಟೀಕಿಸಿತ್ತು. ಟೀಕೆಯನ್ನು ನಾನು ಸವಾಲಾಗಿ ಸ್ವೀಕರಿಸಿ ನಿರಂತರ ವಿಷಯ ತಜ್ಞರ ಜತೆ ಚರ್ಚಿಸಿ ಬಜೆಟ್ ಮಂಡಿಸಿದೆ. ಮರುದಿನ “THE HINDU” ಪತ್ರಿಕೆ ನನ್ನ ಬಜೆಟ್ ಅನ್ನು ಅತ್ಯುತ್ತಮ ಎಂದು ಶ್ಲಾಘಿಸಿ ಸಂಪಾದಕೀಯ ಬರೆಯಿತು. ಹೀಗಾಗಿ ಜ್ಞಾನ ದಾಹ ಮತ್ತು ಅಧ್ಯಯನಶೀಲತೆಯನ್ನು ಬೆಳೆಸಿಕೊಳ್ಳಿ ಎಂದು ತಮ್ಮದೇ ಉದಾಹರಣೆ ಮೂಲಕ ಶಾಸಕರಿಗೆ ತಿಳಿ ಹೇಳಿದರು.


ಸಂವಿಧಾನ ಇಲ್ಲದಿದ್ದರೆ ಸಿ.ಟಿ.ರವಿ, ಈಶ್ವರಪ್ಪ ಶಾಸಕರಾಗಲು ಸಾಧ್ಯವಿರಲಿಲ್ಲ

ನಾನು, ನನ್ನಂಥವರು ಶಾಸಕರಾಗಲು, ಮುಖ್ಯಮಂತ್ರಿ ಆಗಲು ಡಾ.ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಕಾರಣ. ಸಂವಿಧಾನ ಇಲ್ಲದಿದ್ದರೆ ಸಿ.ಟಿ.ರವಿ, ಕೆ.ಎಸ್.ಈಶ್ವರಪ್ಪ, ನಾನು ಎಲ್ಲೋ ಕುರಿ, ಹಸು ಕಾಯುತ್ತಾ ಇರಬೇಕಾಗಿತ್ತು. ಆದ್ದರಿಂದ ಸಂವಿಧಾನದ ಮೌಲ್ಯ ಅರಿತುಕೊಳ್ಳಿ ಎಂದು ಮುಖ್ಯಮಂತ್ರಿ ಮನವರಿಕೆ ಮಾಡಿಸಿದರು.

ವಾಟಾಳ್ ಮಾಡೆಲ್
ವಾಟಾಳ್ ನಾಗರಾಜ್ ಅವರು ಒಬ್ಬ ಮಾದರಿ ಶಾಸಕರಾಗಿದ್ದರು. ಅಧಿವೇಶನದ ಬೆಲ್ ಆಗುತ್ತಿದ್ದಂತೆ ಸದನದ ಒಳಗೆ ಬಂದು ಕೂರುತ್ತಿದ್ದರು. ಅಧಿವೇಶನ ಮುಗಿಯುವವರೆಗೂ ಅಲುಗಾಡದೆ ಕೂರುತ್ತಿದ್ದರು. ಇದನ್ನು ಪ್ರತಿಯೊಬ್ಬರೂ ಪಾಲಿಸಿ ಎಂದು ಸೂಚಿಸಿದರು.

ಭಾಷಣದ ಹೈಲೈಟ್ಸ್

  • ಬಂದೆ ಪುಟ್ಟ-ಹೋದೆ ಪುಟ್ಟ ಅಂತಾಗಬೇಡಿ.
  • ಶಾಂತವೇರಿ ಗೋಪಾಲಗೌಡರನ್ನು ಇವತ್ತಿಗೂ ಇಡಿ ನಾಡು ಯಾಕೆ ಸ್ಮರಿಸುತ್ತದೆ ಎನ್ನುವುದನ್ನು ಅರ್ಥಮಾಡಿಕೊಳ್ಳಿ
  • 224 ಶಾಸಕರುಗಳಲ್ಲಿ ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದವರು 70 ಮಂದಿ.
  • ಮಾಜಿ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ ಅವರು, ಮಾಜಿ ಸಚಿವ ಜನಾರ್ದನರೆಡ್ಡಿ ಅವರು ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದ್ದಾರೆ.
  • ರಾಜ್ಯದ ಮೊದಲ ಬಜೆಟ್ ಕೇವಲ 21 ಕೋಟಿ 3 ಲಕ್ಷ ಇತ್ತು.
  • ಈಗಿನ ಬಜೆಟ್ 3 ಲಕ್ಷದ 9 ಸಾವಿರ ಕೋಟಿ ಆಗಿದೆ.
  • ಬಡವರ ಮತ್ತು ಮಧ್ಯಮ ವರ್ಗದವರ ಅನುಕೂಲಕ್ಕೆ ಘೋಷಣೆ ಮಾಡಿರುವ ಐದು ಗ್ಯಾರಂಟಿಗಳಿಗೆ 50 ಸಾವಿರ ಕೋಟಿಯಷ್ಟು ಹಣ ಬೇಕಾಗುತ್ತದೆ.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: bjp congress jds dkshivakumar siddaramiah Yadiyurappa darshandruva hdkumaraswamy
admin June 26, 2023
Share this Article
Facebook Twitter Whatsapp Whatsapp LinkedIn Copy Link
Previous Article ಶಾಲಾ ಮಕ್ಕಳಿದ್ದ ಆಟೋ ಪಲ್ಟಿ 10ಕ್ಕೂ ಹೆಚ್ಚು ಮಕ್ಕಳಿಗೆ ಗಾಯ
Next Article ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಸರ್ಜಾ ಮದುವೆ ಫಿಕ್ಸ್ !?
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?