ಮೈಸೂರು : ಮೈಸೂರಿನ ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ. ಅಭಿವೃದ್ಧಿಗಾಗಿ ಸಿಎಂ ಸಿದ್ದರಾಮಯ್ಯ, ಪ್ರತಾಪ್ ಸಿಂಹ ರ ಸಹಕಾರವನ್ನು ಕೇಳುತ್ತೇನೆ.
ಮುಂದಿನ ದಿನಗಳಲ್ಲಿ ಅವರನ್ನು ಭೇಟಿ ಮಾಡಿ ಅಭಿವೃದ್ಧಿ ಬಗ್ಗೆ ಚರ್ಚಿಸುತ್ತೇನೆ. ಮೈಸೂರು ಪ್ರವಾಸಿ ತಾಣವಾಗಿರುವ ಕಾರಣ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆಧ್ಯತೆ ನೀಡಬೇಕು.
ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಯದುವೀರ್ ಒಡೆಯರ್ ಹೇಳಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರಿನ ಪಾರಂಪರಿಕ ಕಟ್ಟಡಗಳ ನಗರವಾಗಿದೆ.
ಆಗಾಗಿ ದೇವರಾಜ, ಲ್ಯಾನ್ಸ್ ಡೌನ್ ಕಟ್ಟಡಗಳನ್ನ ನೆಲಸಮ ಮಾಡುವ ಅವಶ್ಯಕತೆ ಇಲ್ಲ.
ಅಗೆಯೇ ಅದನ್ನ ಸಂರಕ್ಷಣೆ ಮಾಡುತ್ತೇವೆ.
ಮೈಸೂರು ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಕೈಗಾರಿಕೆಗಳ ಅಭಿವೃದ್ಧಿ ಮಾಡುತ್ತೇವೆ.
ಈಗಾಗಲೇ ಕುವೆಂಪುನಗರದಲ್ಲಿ ನನ್ನ ಕಚೇರಿ ತೆರೆಯಲಾಗಿದೆ.. ಸಾರ್ವಜನಿಕರು ನನ್ನ ಅಧಿಕೃತ ಕಚೇರಿಯಲ್ಲಿ ನನ್ನನ್ನು ಭೇಟಿ ಮಾಡಬಹುದು.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸಿವ ವಿಚಾರ.
ಗ್ಯಾರಂಟಿ ಯೋಜನೆಗಳಿಂದಲೇ ಅವರು ಅಧಿಕಾರಕ್ಕೆ ಬಂದಿದ್ದಾರೆ.. ಆಗಾಗಿ ಗ್ಯಾರಂಟಿ ಯೋಜನೆ ಮುಂದುವರೆಸುವುದು ಸೂಕ್ತ. ಆದರೆ ಮುಂದುವರೆಸಬೇಕೋ ಬೇಡವೋ ಎಂಬುದು ಅವರಿಗೆ ಬಿಟ್ಟ ವಿಚಾರ ಎಂದರು