ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ
ಹನೂರು ತಾಲ್ಲೂಕಿನ ಮಾರ್ಟಳ್ಳಿಯ ಪಾಳಿಮೇಡು ಗ್ರಾಮದಲ್ಲಿ ಸಂತ ಅಂತೋನಿಯವರ ವಾರ್ಷಿಕ ಹಬ್ಬ ವಿಜೃಂಭಣೆಯಿಂದ ಆಚರಿಸಲಾಯಿತು.
ಹಬ್ಬದ ಅಂಗವಾಗಿ ಸಂಜೆ ಧ್ವಜಾರೋಹನ ಮಾಡಿ ದಿವ್ಯ ಬಲಿಪೂಜೆ ಫಾ ಕ್ರಿಸ್ಟೋಫರ್ ಕ್ಲಾರೆಟ್ ಹಾಗೂ ಇನ್ನಿತರ ಗುರುಗಳಿಂದನೆರವೇರಿಸಲಾಯಿತು.
ಹಬ್ಬದ ದಿನ ಬೆಳಿಗ್ಗೆ 11 ಗಂಟೆಗೆ ಗುರುಗಳಿಂದ ದಿವ್ಯ ಬಲಿಪೂಜೆ ನೆರವೇರಿಸಲಾಯಿತು.
ನಂತರ ಭವ್ಯ ತೇರಿನ ಮೆರವಣಿಗೆ ಮಾಡುವ ಮೂಲಕ ಕ್ರೈಸ್ತರು ಸಂಭ್ರಮಿಸಿದರು.
ಈ ವೇಳೆ ಭಕ್ತಾದಿಗಳು ಪ್ರಾರ್ಥನೆ ಹಾಗೂ ಸ್ತುತಿಗೀತೆಗಳನ್ನು ಹಾಡಿದರು.ನಂತರ ಬಂದಿದ್ದ ಎಲ್ಲಾ ಭಕ್ತಾದಿಗಳಿಗೂ ಊಟದ ವ್ಯವಸ್ಥೆ ಮಾಡಲಾಯಿತು.
ಈ ಸಂದರ್ಭದಲ್ಲಿ ಧರ್ಮಕೇಂದ್ರದ ಗುರುಗಳಾದ ಫಾ ಕ್ರಿಸ್ಟೋಫರ್ ,ಫಾ ಸಂತಿಯಾಗು ,ಫಾ ಸಿಲುವೈನಾಥನ್ ,ಫಾ ಪ್ರಕಾಶ್ ,ಹಾಗೂ ಇನ್ನಿತರ ಗುರುಗಳು ಉಪಸ್ಥಿತರಿದ್ದರು.