• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ತಿರುಮಕೂಡಲು ನರಸೀಪುರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ !
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ತಿರುಮಕೂಡಲು ನರಸೀಪುರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ !
ಮೈಸೂರುರಾಜಕೀಯ

ತಿರುಮಕೂಡಲು ನರಸೀಪುರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ !

admin
Last updated: 2023/04/04 at 9:57 AM
admin
Share
2 Min Read
SHARE

ಟಿ.ನರಸೀಪುರ : ತ್ರಿವೇಣಿ ಸಂಗಮದಲ್ಲಿ ಈ ಬಾರಿ ಕಾಂಗ್ರೆಸ್ ಬಿಜೆಪಿ ಜೆಡಿಎಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು ಈ ಬಾರಿಯ ಚುನಾವಣೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ನಿಂದ ಈಗಾಗಲೇ ಮಾಜಿ ಸಚಿವ ಹೆಚ್.ಸಿ ಮಹದೇವಪ್ಪಗೆ ಟಿಕೆಟ್ ಘೋಷಣೆಯಾಗಿದ್ದು, ಜೆಡಿಎಸ್ ನಿಂದ ಹಾಲಿ ಶಾಸಕ ಅಶ್ವಿನ್ ಕುಮಾರ್ ಅಖಾಡದಲ್ಲಿದ್ದಾರೆ. ಬಿಜೆಪಿಯಿಂದ ಇನ್ನೂ ಟಿಕೆಟ್ ಘೋಷಣೆಯಾಗಬೇಕಿದ್ದು ಬಹುತೇಕ ಹೊಸ ಮುಖ ವೈದ್ಯ ರೇವಣ್ಣಗೆ ಬಿಜೆಪಿ ಮಣೆ ಹಾಕುವ ಸಾಧ್ಯತೆಯಿದೆ.

ಕಳೆದ ಬಾರಿ ಚುನಾವಣೆಯನ್ನು ಗಮನಿಸಿದರೆ ಮಹದೇವಪ್ಪ ಎದುರು ಅಶ್ವಿನ್ ಕುಮಾರ್ ಗೆದ್ದು ಬಿಗಿದ್ದರು. ಬಿಜೆಪಿ ಅಭ್ಯರ್ಥಿ ಶಂಕರ್ ಟಿಕೆಟ್ ಘೋಷಣೆಯ ಬಳಿಕ ಕ್ಷೇತ್ರದಲ್ಲಿ ಮಾಯವಾಗಿ ಬಿಜೆಪಿಯ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಬಾರಿ ಕಳೆದ ಬಾರಿಯ ಸೋಲಿಗೆ ಪ್ರತೀಕಾರ ಎಂಬಂತೆ ಮಹದೇವಪ್ಪ ಈಗಾಗಲೇ ತಮ್ಮ ಅವಧಿಯಲ್ಲಿ ಮಾಡಿದ ಅಭಿವೃದ್ದಿ ಕೆಲಸಗಳನ್ನು ಜನರ ಮುಂದೆ ಇಡುತ್ತಾ ಮತದಾರ ಮನಸ್ಸನ್ನು ಸೆಳೆಯುತ್ತಿದ್ದಾರೆ. ಒಂದೆಡೆ ಅಭಿವೃದ್ದಿಯ ಕೆಲಸ ಜೊತೆ ಅನುಕಂಪದ ಅಲೆಯು ಮಹದೇವಪ್ಪ ಕೈಹಿಡಿಯುವ ಸಾಧ್ಯತೆಯೂ ಇದೆ ಎಂದು ಕ್ಷೇತ್ರದ ಮತದಾರ ಪ್ರಭುಗಳು ಮಾತನಾಡುತ್ತಿದ್ದಾರೆ.

ಕಳೆದ ಬಾರಿ ಕೆಲ ತಪ್ಪಿನಿಂದಾಗಿ ಮಹದೇವಪ್ಪ ಚುನಾವಣೆಯಲ್ಲಿ ಸೋತಿರಬಹುದು, ಆದರೆ ಈ ಬಾರಿ ಕ್ಷೇತ್ರದ ಜನರು ಮಹದೇವಪ್ಪ ಕೈ ಬಲ ಪಡಿಸುತ್ತಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಹೇಳುತ್ತಿದ್ದಾರೆ. ಇದಕ್ಕೆ ಪೂರಕ ಎಂಬಂತೆ ಮಹದೇವಪ್ಪ ಎಲ್ಲಾ ಸಮುದಾಯದ ನಾಯಕರನ್ನು ಬೇಟಿ ಮಾಡಿ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ. ಇನ್ನೊಂದೆಡೆ ಹಾಲಿ ಶಾಸಕ ಅಶ್ವಿನಿ ಈಗಾಗಲೇ ಕ್ಷೇತ್ರದಲ್ಲಿ ಬಿಡುಬಿಟ್ಟು ಪ್ರಚಾರ ಕಾರ್ಯ ಹಾಗೂ ಸಭೆಗಳಲ್ಲಿ ಜನರನ್ನು ಸಂಘಟಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

೫ ವರ್ಷಗಳಲ್ಲಿ ಕ್ಷೇತದ ಮತದಾರನ ಮನಸ್ಸು ಅರಿತು ಶಕ್ತಿ ಮೀರಿ ಕೆಲಸ ಮಾಡಿದ್ದೇನೆ. ಈ ಬಾರಿಯೂ ಜನರು ನನ್ನನೆ ಬೆಂಬಲಿಸುತ್ತಾರೆ. ಕುಮಾರಸ್ವಾಮಿಯವರ ಪಂಚರತ್ನ ಯಾತ್ರೆ ಯಶಸ್ವಿಯಾಗಿದೆ ಹಾಗಾಗಿ ಗೆಲುವು ನನ್ನದೇ ಎಂದು ಅಶ್ವಿನ್ ಕುಮಾರ್ ಸಭೆಗಳಲ್ಲಿ ಜನರನ್ನು ಹುರಿದುಂಬಿಸುವ ಕೆಲಸ ಮಾಡುತ್ತಿದ್ದಾರೆ. ಸರಳ ಸಜ್ಜನಿಕೆಯ ಶಾಸಕ ಎಂದೇ ಗುರುತಿಸಿಕೊಂಡಿರುವ ಅಶ್ವಿನ್ ಎರಡನೇ ಬಾರಿ ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ.

ಬಿಜೆಪಿಯಿಂದ ಟಿಕೆಟ್ ಬಯಸಿ ತಮ್ಮ ವೈದ್ಯಕೀಯ ವೃತ್ತಿಗೆ ರಾಜೀನಾಮೆ ನೀಡಿರುವ ಡಾಕ್ಟರ್ ರೇವಣ್ಣ, ನೆನ್ನೆ ಇನ್ನೂ ಅಧಿಕೃತವಾಗಿ ಬಿಜೆಪಿ ಸೇರುವ ಮೂಲಕ ಟಿಕೆಟ್ ಗೆ ಇನ್ನೂ ಹತ್ತಿರವಾಗಿದ್ದಾರೆ. ಕ್ಷೇತ್ರದ್ಯಾಂತ ತನ್ನ ವೈದ್ಯಕೀಯ ವೃತ್ತಿಯಲ್ಲಿ ಹೆಸರು ಮಾಡಿರುವ ರೇವಣ್ಣ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಅಲ್ಲದೆ ಸರಳ ಹಾಗೂ ತಮ್ಮ ನಿಸ್ವಾರ್ಥ ಸೇವೆಗೆ ಹೆಸರುವಾಸಿಯಾಗಿದ್ದು, ತಮ್ಮ ಒಳ್ಳೆಯ ಗುಣಕ್ಕೆ ಹಾಗೂ ಹೊಸ ಮುಖಕ್ಕೆ ಜನರು ಮತ ನೀಡುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಅಲ್ಲದೆ ಬಿಜೆಪಿ ಕಾರ್ಯಕರ್ತರು ಕೂಡ ಈ ಬಾರಿ ಶತಯಾಗತಾಯ ಕಮಲ ಅರಳಿಸಲು ಅಭ್ಯರ್ಥಿ ಘೋಷಣೆಗೆ ಕಾದು ಕುಳಿತಿದ್ದಾರೆ.

ಈ ಕ್ಷೇತ್ರದಲ್ಲಿ ಈವರೆಗೂ 15 ಚುನಾವಣೆ ಆಗಿದ್ದು, 8 ಬಾರಿ ಕಾಂಗ್ರೆಸ್ , 3 ಬಾರಿ ಜನತಾ ಪಕ್ಷ, 2 ಬಾರಿ ಜೆಡಿಎಸ್ ಹಾಗೂ ತಲಾ ಒಂದೊಂದು ಬಾರಿ ಜನತಾದಳ, ಬಿಜೆಪಿ ಗೆಲುವು ಸಾಧಿಸಿದೆ. ಕಳೆದ ಬಾರಿ ಜೆಡಿಎಸ್ ನ ಅಶ್ವಿನ್ ಕುಮಾರ್ 83,929 ವೋಟ್, ಕಾಂಗ್ರೆಸ್ ನಿಂದ ಮಹದೇವಪ್ಪ 55,451 ವೋಟ್,ಬಿಜೆಪಿಯ ಶಂಕರ್ 11,812 ಮತಗಳನ್ನು ಪಡೆದಿದ್ದರು. ಅಶ್ವಿನ್ ಕುಮಾರ್ 28,324 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು

ಒಟ್ಟು ಮತದಾರ ಸಂಖ್ಯೆ – 2,02,756 ಪುರುಷ ಮತದಾರರು – 1,00,394 ಮಹಿಳೆ ಮತದಾರರು – 1,02,357 ಒಟ್ಟು ಮತಗಟ್ಟೆಗಳು – 227

ಆನಂದ್ ಕೆ.ಎಸ್

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: election2023, Politics, t.narasipura
admin April 4, 2023
Share this Article
Facebook Twitter Whatsapp Whatsapp LinkedIn Copy Link
Previous Article ಬೇಸಿಗೆಗೆ ಬೆಸ್ಟ್ ಪುಡ್ ಏನು ಗೊತ್ತಾ ?
Next Article ಚುನಾವಣಾ ಪ್ರಕ್ರಿಯೆಯಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ – ಡಾ.ಕೆ ವಿ ರಾಜೇಂದ್ರ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?