ಹುಬ್ಬಳ್ಳಿ: ನನಗೆ ಬಿಜೆಪಿ ಟಿಕೆಟ್ ಕೈ ತಪ್ಪಲು ಸಂತೋಷ್ ಕಾರಣ ಎಂದು ಜಗದೀಶ್ ಶೆಟ್ಟರ್ ಬಹಿರಂಗಪಡಿಸಿದ್ದಾರೆ ಹೇಳಿದ್ದಾರೆ
ಧಿಡೀರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶೆಟ್ಟರ್ ನನ್ನ ವಿರುದ್ಧ ಪಿತೂರಿ ನಡೆದಿದೆ ಇದಕ್ಕೆಲ್ಲಾ ಸಂತೋಷ್ ಕಾರಣ, ನನಗೆ ಟಿಕೆಟ್ ಕೈ ತಪ್ಪಲು ಅವರೇ ಕಾರಣ ಸ್ಕ್ರೀನಿಂಗ್ ಕಮಿಟಿಯಲ್ಲಿ ನನ್ನ ಹೆಸರಿತ್ತು, ನಂತರ ಈ ವ್ಯಕ್ತಿ ಟಿಕೆಟ್ ತಪ್ಪಿಸಿದ್ದಾರೆ ಎಂದು ಕಿಡಿಕಾರಿದರು.
ಬಿಜೆಪಿಯ ಕೆಲ ನಾಯಕರಿಂದ ನಾನು ನೋವು ಅನುಭವಿಸಿದ್ದೇನೆ. ಬಿಜೆಪಿಯಲ್ಲಿ ಹಲವು ದಿನಗಳಿಂದ ವೇದನೆ ಅನುಭವಿಸಿದ್ದೇನೆ. ಅಧಿಕಾರದ ಲಾಲಾಸೆ ಎಂದು ಟೀಕೆ ಮಾಡುತ್ತಿದ್ದಾರೆ. ಬೊಮ್ಮಾಯಿ ಸರ್ಕಾರದಲ್ಲಿ ನಾನು ಮಂತ್ರಿಯಾಗಲಿಲ್ಲ. ನಾನು ಸಿಎಂ ಆಗಿದ್ದಾಗ ಒಳ್ಳೆಯ ಕೆಲಸ ಮಾಡಿದ್ದೇನೆ. ನನ್ನ ಆಡಳಿತವನ್ನ ಸಿದ್ದರಾಮಯ್ಯ ಕೂಡ ಹೊಗಳಿದ್ದಾರೆ. ಸಿಎಂ ಆಗಿದ್ದಾಗ ರೈತರ ಸಾಲಮನ್ನಾ ಮಾಡಿದ್ದೇನೆ. ದಿನಗೂಲಿ ನೌಕರರನ್ನ ಖಾಯಂ ಮಾಡಿದ್ದೇನೆ. ಎಲ್ಲಾ ಜವಾಬ್ದಾರಿಯನ್ನ ನಿಭಾಯಿಸಿದ್ದೇನೆ ಎಂದು ತಿಳಿಸಿದರು.