• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಪ್ರಜಾಪ್ರಭುತ್ವದ ಹಬ್ಬದಲ್ಲಿ ಎಲ್ಲರೂ ಭಾಗವಹಿಸಿ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಪ್ರಜಾಪ್ರಭುತ್ವದ ಹಬ್ಬದಲ್ಲಿ ಎಲ್ಲರೂ ಭಾಗವಹಿಸಿ
ಜಿಲ್ಲೆಮೈಸೂರುರಾಜ್ಯ

ಪ್ರಜಾಪ್ರಭುತ್ವದ ಹಬ್ಬದಲ್ಲಿ ಎಲ್ಲರೂ ಭಾಗವಹಿಸಿ

Arjun Gowda
Last updated: 2023/04/30 at 3:05 PM
Arjun Gowda
Share
4 Min Read
SHARE

ಮತದಾನದ ಬಗ್ಗೆ ನಿರ್ಲಕ್ಷ್ಯ ಬೇಡ, ಪ್ರತಿಯೊಬ್ಬರೂ ತಪ್ಪದೇ ಮತ ಚಲಾಯಿಸಿ : ಡಾ.ಕೆ.ವಿ.ರಾಜೇಂದ್ರ

ಮೈಸೂರು : ನೈತಿಕ ಮತದಾನ ನಮ್ಮೆಲ್ಲರ ಹಕ್ಕು ಹಾಗೂ ಜವಾಬ್ದಾರಿ. ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬ ಆಚರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ೨೦೨೩ರ ಅಂಗವಾಗಿ ನಮ್ಮ ನಡೆ ಮತಗಟ್ಟೆಯ ಕಡೆ ಎಂಬ ಧ್ಯೇಯದೊಂದಿಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಒಂಟಿಕೊಪ್ಪಲಿನ ಮಾತೃ ಮಂಡಳಿ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಧ್ವಜಾರೋಹಣ, ಪ್ರತಿಜ್ಞಾ ವಿಧಿ ಬೋಧನೆ ಹಾಗೂ ಮತದಾನ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ೧೮ ವಯಸ್ಸು ತುಂಬಿದ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವಂತೆ ಹಾಗೂ ನೈತಿಕ ಮತದಾನ ನಡೆಯುವಂತೆ ಇಡೀ ರಾಜ್ಯದಾದ್ಯಂತ ನಮ್ಮ ನಡೆ ಮತಗಟ್ಟೆಯ ಕಡೆ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿವೆ ಎಂದರು.

ಗ್ರಾಮೀಣ ಪ್ರದೇಶಗಳಿಗೆ ಹೋಲಿಕೆ ಮಾಡಿದರೆ ನಗರ ಪ್ರದೇಶಗಳಲ್ಲಿ ಕಡಿಮೆ ಪ್ರಮಾಣದಲ್ಲಿ ಮತದಾನವಾಗುತ್ತಿದ್ದು, ಸುಶಿಕ್ಷಿತರಲ್ಲಿಯೇ ಮತದಾನದ ಮಹತ್ವದ ಬಗ್ಗೆ ಅರಿವಿಲ್ಲದಿರುವುದು ಹಾಗೂ ಮತದಾನ ಮಾಡುವಲ್ಲಿ ನಿರ್ಲಕ್ಷ್ಯವಿರುವುದು ಸರಿಯಲ್ಲ. ಜಿಲ್ಲೆಯಲ್ಲಿ ೨೦೦೯೫ ಮತಗಟ್ಟೆಗಳಿದ್ದು ಎಲ್ಲ ಮತಗಟ್ಟೆಗಳಲ್ಲೂ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಹತ್ತಿರದ ನಿಮ್ಮ ಮತಗಟ್ಟೆಗೆ ಭೇಟಿ ನೀಡಿ ಅಲ್ಲಿರುವ ಸೌಲಭ್ಯಗಳನ್ನು ನೀವು ಪರೀಕ್ಷಿಸಬಹುದು ಮತ್ತು ನೀವೇ ಚುನಾವಣಾ ರಾಯಭಾರಿಯಾಗಿ ಮತ್ತಷ್ಟು ಮತದಾರರಿಗೆ ಮತದಾನದ ಮಹತ್ವವನ್ನು ಸಾರಬಹುದು ಎಂದರು.

ಇನ್ನೂ ಕೆಲ ಭಾಗದಲ್ಲಿ ವಾಸಿಸುವ ಮಧ್ಯಮ ಸಂಪರ್ಕವಿಲ್ಲದ ಜನರಿಗೆ ಚುನಾವಣೆಯ ದಿನಾಂಕ ಹಾಗೂ ಚುನಾವಣಾ ಮಹತ್ವ ತಿಳಿದಿರುವುದಿಲ್ಲ. ಅಂತಹ ಜನರಿಗೆ ಮಾಹಿತಿ ತಲುಪಿಸುವುದು ಕೇವಲ ಜಿಲ್ಲಾಡಳಿತದ ಜವಾಬ್ದಾರಿ ಮಾತ್ರವಲ್ಲ ಇದರಲ್ಲಿ ಸಮುದಾಯದವರ ಪಾತ್ರವೂ ಇದೆ. ನಗರದ ಕೆಲವು ಭಾಗಗಳಲ್ಲಿ ಶೇ.೪೦ ಅಥವಾ ೫೦ರಷ್ಟು ಮಾತ್ರ ಮತದಾನವಾಗುತ್ತದೆ. ಮತದಾನ ಮಾಡುವಲ್ಲಿ ಅಸಡ್ಡೆ ಹಾಗೂ ಬೇಜವಾಬ್ದಾರಿ ಬೇಡ. ಅಧಿಕಾರಿಗಳೆಲ್ಲರೂ ಬಹಳ ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ. ಅನೈತಿಕ ಪ್ರಚಾರಗಳನ್ನು ತಡೆಯುವಲ್ಲಿ ಜಿಲ್ಲಾಡಳಿತ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ. ಜಾತಿ, ಮತ, ಧರ್ಮ ಹಾಗೂ ಭಾಷೆಗಳ ತಾರತಮ್ಯವಿಲ್ಲದೆ ಮತದಾನ ಮಾಡಿ. ದೇಶದಲ್ಲಿ ಪ್ರಧಾನಮಂತ್ರಿಯಿಂದ ಹಿಡಿದು ಜನಸಾಮಾನ್ಯರವರೆಗೂ ಎಲ್ಲರ ಮತಕ್ಕೂ ಒಂದೇ ಮೌಲ್ಯ. ಜವಾಬ್ದಾರಿಯುತ ಸರ್ಕಾರದ ಆಯ್ಕೆಯಲ್ಲಿ ನಿಮ್ಮ ಹಕ್ಕನ್ನ ಚಲಾಯಿಸಿ ಎಂದು ಕರೆ ನೀಡಿದರು.

ಚುನಾವಣಾ ಅಕ್ರಮಗಳನ್ನು ತಡೆಯಲು ಸಿ-ವಿಜಿಲ್ ಆಪ್ ಮೂಲಕ ದೂರು ದಾಖಲಿಸಿ. ಪ್ರಜ್ಞಾವಂತ ಮತದಾರರಾಗಿ ಚುನಾವಣಾ ಅಕ್ರಮಗಳನ್ನು ತಡೆಯುವಲ್ಲಿ ಭಾರತೀಯ ಚುನಾವಣಾ ಆಯೋಗದ ಕಣ್ಣು ಕಿವಿಗಳು ನೀವಾಗಬೇಕು. ಚುನಾವಣಾ ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಬೇಕಾದ ಅಭ್ಯರ್ಥಿಗಳ ಮಾಹಿತಿ ಪಡೆಯಲು ಅವಕಾಶವಿದೆ. ಅಭ್ಯರ್ಥಿಯ ವೈಯಕ್ತಿಕ ಮಾಹಿತಿ, ಅವರ ಸಾಧನೆ ಹಾಗೂ ಚಾರಿತ್ರ್ಯಗಳಗೆ ಮಾಹಿತಿ ಪಡೆದು ಸೂಕ್ತ ವ್ಯಕ್ತಿಗೆ ಮತ ಚಲಾಯಿಸಬಹುದು ಎಂದರು.

ತಮ್ಮ ಬಾರಿಗೆ ಮತದಾನ ಮಾಡುತ್ತಿರುವ ನವ ಮತದಾರರಿಗೆ ಶುಭಾಶಯಗಳು ತಿಳಿಸಿದ ಅವರು, ಆಧಾರ್ ಕಾರ್ಡ್, ಪಾಸ್‌ಪೋರ್ಟ್, ಪಾನ್ ಕಾರ್ಡ್, ವೋಟರ್ ಐಡಿ ಕಾರ್ಡ್ ಅಥವಾ ಇನ್ಯಾವುದೇ ದಾಖಲಾತಿಗಳನ್ನು ತೆಗೆದುಕೊಂಡು ಮತದಾನ ಮಾಡಬಹುದಾಗಿದೆ. ಈ ಬಾರಿ ಶೇ.೯೦ರಷ್ಟು ಮತದಾನವಾಗಬೇಕು. ನಗರ ಪ್ರದೇಶಗಳಲ್ಲಿ ಶೇ.೭೫ರಷ್ಟು ಮತದಾನದ ನಿರೀಕ್ಷೆಯಲ್ಲಿದ್ದೇವೆ. ಎಲ್ಲಾ ಯುವ ಮತದಾರರು ನಿಮ್ಮ ಹಕ್ಕು ಹಾಗೂ ಮತವನ್ನು ನೈತಿಕವಾಗಿ ಚಲಾಯಿಸಿ ಎಂದು ತಿಳಿಸಿದರು.

ನಂತರ ಮತದಾನ ಕುರಿತಾದ ಜಾಗೃತಿ ಗೀತೆಗಳು, ಭರತನಾಟ್ಯ ಹಾಗೂ ಜಾಗೃತಿ ಬೀದಿ ನಾಟಕಗಳು ಜರುಗಿದವು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ಪಾರಂಪರಿಕ ಇಲಾಖೆಯ ಆಯುಕ್ತ ದೇವರಾಜು, ನಗರ ಪಾಲಿಕೆಯ ಕಾರ್ಯನಿರ್ವಾಹಕ ಇಂಜಿನಿಯರ್ ಆದ ನಾಗರಾಜು, ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ ಕೃಷ್ಣಂರಾಜು ಸೇರಿದಂತೆ ಇತರರು ಭಾಗವಹಿಸಿದ್ದರು.


ನಮ್ಮ ನಡೆ ಮತಗಟ್ಟೆ ಕಡೆ
ಮತದಾರರನ್ನು ಮತಗಟ್ಟೆಗೆ ಸೆಳೆಯುವ ನಿಟ್ಟಿನಲ್ಲಿ ಚುನಾವಣಾ ಆಯೋಗದಿಂದ ಸಾಕಷ್ಟು ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇದರ ಅಂಗವಾಗಿ ಮತಗಟ್ಟೆಗಳಲ್ಲಿ ನಮ್ಮ ನಡೆ ಮತಗಟ್ಟೆ ಕಡೆ ಎಂಬ ಶೀರ್ಷಿಕೆಯಡಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಸಲಾಗಿದೆ ಎಂದು ತಾಲೂಕು ಚುನಾವಣಾಧಿಕಾರಿ ರುಚಿ ಬಿಂದಾಲ್ ತಿಳಿಸಿದರು.

ನಮ್ಮ ನಡೆ ಮತಗಟ್ಟೆಯ ಕಡೆ ಶೀರ್ಷಿಕೆಯಡಿ ತಾಲ್ಲೂಕಿನ ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ತಾಲ್ಲೂಕಿನ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಸಿದ್ಧಗೊಂಡಿರುವ ಸಖಿ ಮತಗಟ್ಟೆ ಬಳಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಮೇ.೧೦ರಂದು ಮತ ಹಾಕಲು ನಿರಾಸಕ್ತಿ ತೋರದೆ, ಕಡ್ಡಾಯವಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವಂತೆ ಈ ಮೂಲಕ ತಿಳಿಸಿದರು.
ಬಳಿಕ, ಕಾಲೇಜು ಆವರಣದಿಂದ ಕೋಟೆ ವೃತ್ತದವರೆಗೂ ಕಡ್ಡಾಯ ಮತದಾನ ಕುರಿತು ಮಾಹಿತಿ ತಿಳಿಸುವುದರೊಂದಿಗೆ ವೃತ್ತದ ಬಳಿ ಮಾನವ ಸರಪಳಿ ಮಾಡಿ, ಮೇ.೧೦ರಂದು ಕಡ್ಡಾಯ ಮತದಾನ ಮಾಡುವಂತೆ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.

ಈ ವೇಳೆ ಸಹಾಯಕ ಚುನಾವಣಾಧಿಕಾರಿಯವರಾದ ತಹಶೀಲ್ದಾರ್ ಎಸ್.ಯು.ಅಶೋಕ್, ಬಿ.ಕೆ.ಮನು, ತಾಲೂಕು ಯೋಜನಾಧಿಕಾರಿ ರಾಜೇಶ್, ಎನ್‌ಆರ್‌ಎಲ್‌ಎಂ ತಾಲೂಕು ಯೋಜನಾ ವ್ಯವಸ್ಥಾಪಕ ಮಂಜುಳಾ ನರಗುಂದ್, ಸೂಪರ್ ವೈಸರ್ ಆದ ಭಾನು ಫರ್ಹಾದ್, ನಗರಸಭೆ ಇಂಜಿನಿಯರ್ ಆದ ರೂಪಾ, ಐಇಸಿ ಸಂಯೋಜಕರು ಸೇರಿದಂತೆ ನಗರಸಭೆ ಹಾಗೂ ತಾಲ್ಲೂಕು ಪಂಚಾಯಿತಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

Arjun Gowda April 30, 2023
Share this Article
Facebook Twitter Whatsapp Whatsapp LinkedIn Copy Link
Previous Article ಮೋದಿ ಅವ್ರೆ ಭ್ರಷ್ಟ ಬಿಜೆಪಿ ಪಕ್ಷವನ್ನು ಸರಿಪಡಿಸಿ : ಎಂ.ಎಲ್.ಸಿ ವಿಶ್ವನಾಥ್
Next Article ಅಭಿವೃದ್ಧಿಗೆ ಮತ ನೀಡಿ : ಶ್ರೀನಿವಾಸ್ ಪ್ರಸಾದ್
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?