• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಮನೆಯಿಂದಲೇ ಮತದಾನ : ಉತ್ತಮ ಸ್ಪಂದನೆ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಮನೆಯಿಂದಲೇ ಮತದಾನ : ಉತ್ತಮ ಸ್ಪಂದನೆ
ಜಿಲ್ಲೆಮೈಸೂರುರಾಜ್ಯ

ಮನೆಯಿಂದಲೇ ಮತದಾನ : ಉತ್ತಮ ಸ್ಪಂದನೆ

Arjun Gowda
Last updated: 2023/04/30 at 3:19 PM
Arjun Gowda
Share
2 Min Read
SHARE

ಮೈಸೂರು : ೮೦ ವರ್ಷ ಮೇಲ್ಪಟ್ಟವರು ಹಾಗೂ ಅಂಗವೈಕಲ್ಯದಿಂದ ಬಳಲುತ್ತಿರುವವರಿಗೆ ಅನುಕೂಲ ಮಾಡಿಕೊಡಲೆಂದು ಇದೇ ಮೊದಲ ಬಾರಿಗೆ ಮನೆಯಿಂದಲೇ ಮತದಾನ ನಡೆಸುವ ಪ್ರಕ್ರಿಯೆ ಆರಂಭಗೊಂಡಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೇ ೬ರವರೆಗೂ ಮತದಾನಕ್ಕೆ ಅವಕಾಶವಿದೆ.

ಜಿಲ್ಲೆಯಲ್ಲಿ ೮೦ ವರ್ಷ ಮೇಲ್ಪಟ್ಟ ೮೫,೫೧೪ ಹಿರಿಯ ಮತದಾರರಿದ್ದು, ೩೦,೮೮೩ ಅಂಗವಿಕಲರಿದ್ದಾರೆ. ೮೦ ವರ್ಷ ಮೇಲ್ಪಟ್ಟವರ ಪೈಕಿ ೨,೪೦೭ ಮಂದಿ ಹಾಗೂ ಅಂಗವಿಕಲರ ಪೈಕಿ ೪೦೨ ಮಂದಿ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡುವಂತೆ ಚುನಾವಣಾ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಅರ್ಜಿ ನೀಡಿದವರ ಮನೆಗಳಿಗೆ ಶನಿವಾರವೇ ಚುನಾವಣಾ ಅಧಿಕಾರಿಗಳು ಭೇಟಿ ನೀಡಿ ಮತದಾನ ಪ್ರಕ್ರಿಯೆಗೆ ಚಾಲನೆ ನೀಡಿದರು. ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಎಲ್ಲ ರಾಜಕೀಯ ಪಕ್ಷಗಳಿಗೂ ತಿಳಿಸುವ ವ್ಯವಸ್ಥೆ ಮಾಡಲಾಗುತ್ತದೆ.

ಜಿಲ್ಲೆಯಲ್ಲಿ ೧೩೫ ಚುನಾವಣಾ ತಂಡಗಳು ಪ್ರಕ್ರಿಯೆಯಲ್ಲಿ ತೊಡಗಿಸಿ ಕೊಂಡಿದ್ದು, ೧೧ ಕ್ಷೇತ್ರಗಳಿಗೆ ೧೫೮ ವಿವಿಧ ಮಾರ್ಗಗಳ ಮೂಲಕ ತೆರಳಲಿದ್ದಾರೆ. ವಯಸ್ಸಿನ ಕಾರಣದಿಂದ, ಅನಾರೋಗ್ಯಕ್ಕೆ ತುತ್ತಾದವರಿಗೆ ಈ ಅವಕಾಶ ಸಿಗಲಿದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಐವರ ತಂಡ: ಐವರು ಸದಸ್ಯರುಳ್ಳ ತಂಡವನ್ನು ಜಿಲ್ಲಾಡಳಿತ ನಿಯೋಜಿಸಿದೆ. ಮೂವರು ಚುನಾವಣಾ ಸಿಬ್ಬಂದಿ, ಒಬ್ಬ ವಿಡಿಯೊಗ್ರಾಫರ್, ಪೊಲೀಸ್ ಕಾನ್‌ಸ್ಟೆಬಲ್ ಇರಲಿದ್ದು ಸಂಪೂರ್ಣ ಪ್ರಕ್ರಿಯೆ ವಿಡಿಯೊ ರೆಕಾರ್ಡ್ ಮಾಡಲಾಗುತ್ತದೆ. ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡುವ ಮಾಹಿತಿಯನ್ನು ಮತದಾರರಿಗೂ ಎಸ್‌ಎಂಎಸ್ ಮೂಲಕ ಮುಂಚಿತವಾಗಿ ತಿಳಿಸಲಾಗುತ್ತದೆ.

ಮನೆಗೆ ಭೇಟಿ ನೀಡಿದ ತಕ್ಷಣ ತಂಡವು ಮತದಾರರ ಗುರುತಿನ ಚೀಟಿ ಪರಿಶೀಲಿಸಿ, ೧೨ಡಿ ಅರ್ಜಿಯನ್ನು ನೀಡಿ ಒಪ್ಪಿಗೆ ಪತ್ರ ಪಡೆದುಕೊಳ್ಳುತ್ತದೆ. ನಂತರ ಮತ ಚೀಟಿಯನ್ನು ನೀಡಿ, ಗೋಪ್ಯ ಮತದಾನ ನಡೆಸಿ, ಕವರ್‌ನಲ್ಲಿ ಇಡಲಾಗುತ್ತದೆ. ತುರ್ತು ಸಂದರ್ಭದ ನಿಮಿತ್ತ ಮತದಾರ ಹೊರಹೋಗಿದ್ದರೆ, ಎರಡನೇ ಬಾರಿ ಅವಕಾಶ ನೀಡಲಾಗುತ್ತದೆ. ಆಗಲೂ ಸಿಗದಿದ್ದರೆ, ಮತ್ತೆ ಮತದಾರರ ಮನೆಗೆ ಸಿಬ್ಬಂದಿ ಭೇಟಿ ನೀಡುವುದಿಲ್ಲ.
ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಿದ ಆಯೋಗದ ನಿರ್ಧಾರಕ್ಕೆ ಹಿರಿಯ ನಾಗರಿಕರು ಸಂತಸ ವ್ಯಕ್ತಪಡಿಸಿದರು.

ಮೈಸೂರಿನ ಕೆ.ಆರ್.ಮೊಹಲ್ಲಾದ ಪದ್ಮಮ್ಮ ಅವರು ಅನಾರೋಗ್ಯದಿಂದ ಓಡಾಡಲು ಸಾಧ್ಯವಾಗುತ್ತಿರಲಿಲ್ಲ. ಮತ ಚಲಾಯಿಸಲು ಮತಗಟ್ಟೆಗೆ ತೆರಳಲು ಪ್ರಯಾಸ ಪಡಬೇಕಾಗಿತ್ತು. ಮನೆಯಿಂದ ಮತದಾನಕ್ಕೆ ಅವಕಾಶ ಸಿಕ್ಕಿರುವುದು ತುಂಬಾ ಸಹಾಯವಾಯಿತು ಎಂದು ಕುಟುಂಬದ ಸದಸ್ಯರು ಖುಷಿಪಟ್ಟರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

Arjun Gowda April 30, 2023
Share this Article
Facebook Twitter Whatsapp Whatsapp LinkedIn Copy Link
Previous Article ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಗೆಲುವು
Next Article ಸಿದ್ದರಾಮಯ್ಯ ವರುಣದಲ್ಲಿ ಗೆದ್ದು ತೋರಿಸಲಿ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?