• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ರಾಜಪಥದಲ್ಲಿ ಮೋದಿ ಪವರ್ ಶೋ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಬೆಂಗಳೂರು ನಗರ > ರಾಜಪಥದಲ್ಲಿ ಮೋದಿ ಪವರ್ ಶೋ
ಜಿಲ್ಲೆಬೆಂಗಳೂರು ನಗರಮೈಸೂರುರಾಜಕೀಯರಾಜ್ಯ

ರಾಜಪಥದಲ್ಲಿ ಮೋದಿ ಪವರ್ ಶೋ

Arjun Gowda
Last updated: 2023/04/30 at 3:26 PM
Arjun Gowda
Share
4 Min Read
SHARE

ಮತ ಶಿಕಾರಿ ಮಾಡಿದ ಪ್ರಧಾನಿ, ಮೈಸೂರು ಭಾಗದಲ್ಲಿ ಬಿಜೆಪಿಗೆ ಬೂಸ್ಟರ್

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾನುವಾರ ಗೋಧೋಳಿ ಸಮಯದಲ್ಲಿ ಅಬ್ಬರದ ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಮೈಸೂರು ಭಾಗದಲ್ಲಿ ಬಿಜೆಪಿಗೆ ಬೂಸ್ಟರ್ ನೀಡಿದರು.

ರಾಜ್ಯದಲ್ಲಿ ಬಿಜೆಪಿಯನ್ನು ಶತಾಯಗತಾಯ ಅಧಿಕಾರಕ್ಕೆ ತರಲೇಬೇಕೆಂದು ಪಣತೊಟ್ಟಿರುವ ಪ್ರಧಾನಿ ಮೋದಿ ೪ ಕಿ.ಮೀ ರೋಡ್ ಶೋ ನಡೆಸಿ ಮತ ಶಿಕಾರಿ ಮಾಡಿದರು. ಜಿಲ್ಲೆಯ ೧೧ ವಿಧಾನಸಭಾ ಕ್ಷೇತ್ರಗಳನ್ನು ಗಮನದಲ್ಲಿರಿಸಿಕೊಂಡು ಮೋದಿ ನಡೆಸಿದ ಪವರ್ ಶೋಗೆ ಜನರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು. ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಬಲ ತುಂಬಿರುವ ಜತೆಗೆ ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ರಣೋತ್ಸಾಹ ಮೂಡಿಸಿತು. ಗನ್‌ಹೌಸ್ ಸರ್ಕಲ್‌ನಿಂದ ಆರಂಭವಾದ ಮೋದಿ ಶೋ, ಕಾಪೋರೇಷನ್ ಸರ್ಕಲ್, ಸಿಟಿ ಬಸ್ ನಿಲ್ದಾಣ, ಕೆ.ಆರ್.ಸರ್ಕಲ್, ಸಯ್ಯಾಜಿ ರಾವ್ ರಸ್ತೆ, ಆಯುರ್ವೇದ ಸರ್ಕಲ್, ಮಿಲೀನಿಯಂ ಸರ್ಕಲ್‌ನಲ್ಲಿ ಸಾಗಿ ಅಂತ್ಯವಾಯಿತು. ಬಳಿಕ ಕಾರಿನಲ್ಲಿ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ ದೆಹಲಿಗೆ ವಾಪಸ್ಸಾದರು. ಮೋದಿಯೊಂದಿಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ರಾಮದಾಸ್ ಇದ್ದರು.

ಸಾಂಪ್ರದಾಯಿಕ ಸ್ವಾಗತ : ಸಂಜೆ ೬ಗಂಟೆಗೆ ನಗರದ ಒವೆಲ್ ಮೈದಾನದಲ್ಲಿ ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಮೋದಿ, ರಾಧಾಕೃಷ್ಣನ್ ಅವೆನ್ಯೂ ರಸ್ತೆ, ಜೆಎಲ್‌ಬಿ ರಸ್ತೆ, ಚಾಮರಾಜ ಜೋಡಿ ರಸ್ತೆ ಮೂಲಕ ಕಾರಿನಲ್ಲಿ ಬಿಗಿ ಭದ್ರತೆಯೊಂದಿಗೆ ರೋಡ್ ಶೋ ಆರಂಭ ಸ್ಥಳವಾದ ಗನ್‌ಹೌಸ್‌ಗೆ ಬಂದರು. ಮೋದಿ ಅವರನ್ನು ಸಾಂಪ್ರದಾಯಿಕ ದಿರಿಸಿನಲ್ಲಿದ್ದ ಯುವಕ-ಯುವತಿಯರು ಸ್ವಾಗತಿಸಿದರು. ಬಳಿಕ ಮೋದಿ ಅವರಿಗೆ ವಿಶೇಷ ಉಡುಗೊರೆ ನೀಡಲಾಯಿತು. ನಂತರ ವಿಶೇಷ ವಾಹನವೇರಿದ ಮೋದಿ ರೋಡ್ ಶೋ ಆರಂಭಿಸಿದರು. ರಸ್ತೆಯ ಉದ್ದಕ್ಕೂ ನೆರೆದಿದ್ದ ಸಾವಿರಾರು ಮಂದಿ ತಮ್ಮ ನೆಚ್ಚಿನ ನಾಯಕನ ಮೇಲೆ ಹೂ ಮಳೆಗರೆದರು. ಜನರತ್ತ ಮೋದಿ ಕೈ ಬೀಸುತ್ತಿದ್ದಂತೆ ಶಿಳ್ಳೆ, ಚಪ್ಪಾಳೆ, ಹರ್ಷೋದ್ಗಾರ ಮುಗಿಲುಮುಟ್ಟಿತ್ತು.
ರಾಜಮಾರ್ಗ ಕೇಸರಿಮಯ: ಮೋದಿ ರೋಡ್ ಶೋ ಸಾಗಿದ ಮಾರ್ಗದ ಇಕ್ಕೆಲದಲ್ಲಿ ಬಿಜೆಪಿ ಬಾವುಟ ಬಾವುಟ ರಾರಾಜಿಸಿದ್ದಲ್ಲದೇ, ಇಡೀ ರಾಜಮಾರ್ಗ ಸಂಪೂರ್ಣ ಕೇಸರಿಮಯವಾಗಿ ಮಾರ್ಪಟ್ಟಿತ್ತು. ಬುಲೆಟ್ ಪ್ರೂಫ್ ವಾಹನದಲ್ಲಿ ಸುಮಾರು ೪ ಕಿಮೀ ರೋಡ್ ಶೋ ನಡೆಸಿದ ನರೇಂದ್ರ ಮೋದಿಯವರನ್ನು ಕಂಡ ಜನಸಮೂಹ ಮೋದಿ ಮೋದಿ ಎಂಬ ಘೋಷಣೆ ಮೊಳಗಿಸಿತು. ಈ ವೇಳೆ ಬಿಜೆಪಿ ಪಾಳಯದಲ್ಲಿ ಸಂಭಮ ಮನೆ ಮಾಡಿತ್ತು.
ಹಿರಿಯರಿಗೆ ಪ್ರತ್ಯೇಕ ವ್ಯವಸ್ಥೆ: ಮೋದಿಯವರ ರೋಡ್ ಶೋ ವೀಕ್ಷಿಸಲು ಆಗಮಿಸಿದ್ದ ಹಿರಿಯ ನಾಗರಿಕರಿಗೆ ೫ ಸ್ಥಳಗಳಲ್ಲಿ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿತ್ತು. ಕಾಡಾ ಕಚೇರಿ ಆವರಣ, ಡಿ.ಬನುಮಯ್ಯ ಕಾಲೇಜು ಬಳಿ, ಚಿಕ್ಕಗಡಿಯಾರ ವೃತ್ತ, ಹಳೇ ಆರ್‌ಎಂಸಿ ವೃತ್ತ ಹಾಗೂ ಹೈವೇ ಸರ್ಕಲ್ ಸೇರಿದಂತೆ ೫ ಕಡೆ ಹಿರಿಯ ನಾಗರೀಕರು ಕುಳಿತುಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿತ್ತು.

ಪೊಲೀಸ್ ಬಿಗಿ ಬಂದೋಬಸ್ತ್ : ಮೋದಿ ರೋಡ್ ಶೋ ಹಿನ್ನೆಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿತ್ತು. ಎಸ್‌ಪಿಜಿ ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಗರದ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ರೋಡ್ ಶೋ ವೇಳೆ ಹೆಜ್ಜೆ ಹೆಜ್ಜೆಗೂ ಪೊಲೀಸರು ನಿಗಾ ವಹಿಸಿದ್ದರು. ಜಿ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅವರ ನೇತೃತ್ವದಲ್ಲಿ ಸಾವಿರಾರು ಪೊಲೀಸ್ ಸಿಬ್ಬಂದಿ ಹಾಗೂ ಅರೆಸೇನಾ ಪಡೆ ಯೋಧರು ಬಂದೋಬಸ್ತ್ ಕರ್ತವ್ಯ ನಿರ್ವಹಿಸಿದರು. ಆಯಕಟ್ಟಿನ ಜಾಗಗಳ ಕಟ್ಟಡಗಳ ಮೇಲೂ ಪೊಲೀಸರು ಗಸ್ತಿನಲ್ಲಿದ್ದರು. ರೋಡ್ ಶೋ ನಡೆಸಲಿರುವ ಮಾರ್ಗದ ಎರಡು ಬದಿಯಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು. ಸಾರ್ವಜನಿಕರು ದಾಟಿ ಹೊರಬರದಂತೆ ಕಬ್ಬಿಣದ ಜಾಲರಿ ಅಳವಡಿಸಲಾಗಿತ್ತು.

ಮೋದಿಗೆ ವಿಶೇಷ ಉಡುಗೊರೆ : ನಗರದ ಓವೆಲ್ ಮೈದಾನದ ಹೆಲಿಪ್ಯಾಡ್‌ಗೆ ಸಂಜೆ ಬಂದಿಳಿದ ಮೋದಿ, ಜೆಎಲ್‌ಬಿ ರಸ್ತೆ, ರಾಮಸ್ವಾಮಿ ವೃತ್ತ, ಚಾಮರಾಜ ಜೋಡಿ ರಸ್ತೆ ಮಾರ್ಗವಾಗಿ ಗನ್‌ಹೌಸ್ ವೃತ್ತಕ್ಕೆ ಆಗಮಿಸಿದರು. ಈ ವೇಳೆ ಅವರಿಗೆ ಮೈಸೂರಿನ ವೀಳ್ಯದೆಳೆ, ಶ್ರೀಗಂಧ, ಗಂಧದ ಕಡ್ಡಿ, ಮೈಸೂರು ರೇಷ್ಮೆ, ಮೈಸೂರು ಪಾಕ್, ಮಲ್ಲಿಗೆ ಹೂ ಉಡುಗೊರೆ ನೀಡಲಾಯಿತು.

ಕಲಾತಂಡಗಳ ಮೆರುಗು
ಜಿಲ್ಲೆಯ ವಿವಿಧ ೨೫ ಕಲಾತಂಡಗಳು ರೋಡ್ ಶೋನಲ್ಲಿ ಭಾಗವಹಿಸಿ ಕಲಾ ಮೆರಗು ಹೆಚ್ಚಿಸಿದವು. ಜೆಎಸ್‌ಎಸ್ ಮಹಾವಿದ್ಯಾಪೀಠ ವೃತ್ತದಲ್ಲಿ ನಾದಸ್ವರ ಕಲಾತಂಡ ಹಾಗೂ ಪೂರ್ಣ ಕುಂಭ ಹೊತ್ತಿದ್ದ ಮಹಿಳೆಯರು ಗಮನ ಸೆಳೆದರು. ಭರತ ನಾಟ್ಯ ಕಲಾವಿದರ ತಂಡ ಹೆಜ್ಜೆ ಹಾಕಿತು. ಮೈಸೂರು ಪೇಟ ಧರಿಸಿದ್ದ ಪುರುಷರು, ಮೈಸೂರು ರೇಷ್ಮೆ ಸೀರೆಯುಟ್ಟ ಮಹಿಳೆಯರು ಹೆಜ್ಜೆಹಾಕಿ ಗಮನ ಸೆಳೆದರು. ಸಂಸ್ಕೃತ ಪಾಠಶಾಲೆ ಬಳಿ ಸ್ಯಾಕ್ಸ್ ಫೋನ್ ವಾದಕರ ತಂಡ, ಪಾಲಿಕೆ ಮುಂದೆ ಗಾರುಡಿಗೊಂಬೆ, ನಗರ ಬಸ್ ನಿಲ್ದಾಣದ ಬಳಿ ಪೂಜಾ ಕುಣಿತ, ಕೆ.ಆರ್.ವೃತ್ತದಲ್ಲಿ ನಗಾರಿ, ಡೊಳ್ಳು ಕುಣಿತ ತಂಡಗಳು, ದೇವರಾಜ ಮಾರುಕಟ್ಟೆ ಬಳಿ ಸೋಮನ ಕುಣಿತ, ಬನ್ನಿಮಂಟಪದಲ್ಲಿ ಪಟದ ಕುಣಿತ, ವೀರಗಾಸೆ, ಹೈವೇ ವೃತ್ತದಲ್ಲಿ ಕಂಸಾಳೆ ತಂಡಗಳು ರೋಡ್ ಶೋನಲ್ಲಿ ಜೊತೆಗೂಡಿ ರಂಗೇರಿಸಿದವು.

ಲಕ್ಷಾಂತರ ಜನ ಭಾಗಿ
ದಸರಾ ಜಂಬೂಸವಾರಿ ಮಾರ್ಗದಲ್ಲಿ ರೋಡ್ ಶೋ ನಡೆಸಿದ ಮೋದಿ ನೋಡಲು ರಸ್ತೆಯ ಇಕ್ಕೆಲಗಳಲ್ಲಿ ಲಕ್ಷಾಂತರ ಜನ ನೆರೆದಿದ್ದರು. ನಗರದ ಕೃಷ್ಣರಾಜ, ಚಾಮರಾಜ ಹಾಗೂ ನರಸಿಂಹರಾಜ ಕ್ಷೇತ್ರಗಳ ಜನರಲ್ಲದೆ ಜಿಲ್ಲೆಯ ವಿವಿಧೆಡೆಯಿಂದ ಜನರು ಜಮಾಯಿಸಿದ್ದರು. ರಾಜಮಾರ್ಗದಲ್ಲಿ ಜಮಾಯಿಸಿದ ಕಾರ್ಯಕರ್ತರು ಹಾಗೂ ಬೆಂಬಲಿಗರಲ್ಲಿ ಸಂಚಲನ ಮೂಡಿಸಿದರು. ಹಲವರು ತಮ್ಮ ಮೊಬೈಲ್ ಕ್ಯಾಮೆರಾಗಳಲ್ಲಿ ಮೋದಿ ಚಿತ್ರಗಳನ್ನು ಸೆರೆ ಹಿಡಿದರು. ಇನ್ನೂ ಕೆಲವರು ಮೋದಿ ಮೋದಿ ಎಂದು ಕೂಗು ಹಾಕಿದರು. ಯುವಕರು, ಯುದ್ಧರು, ಮಹಿಳೆಯರೆನ್ನದೆ ಎಲ್ಲಾ ವಯೋಮಾನದವರು ಮೋದಿ ನೋಡಲು ಮುಗಿಬಿದ್ದರು. ಕೆಲವರು ಕಟ್ಟಡವೇರಿ ರೋಡ್ ವೀಕ್ಷಿಸಿದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

Arjun Gowda April 30, 2023
Share this Article
Facebook Twitter Whatsapp Whatsapp LinkedIn Copy Link
Previous Article ಸಿದ್ದರಾಮಯ್ಯ ವರುಣದಲ್ಲಿ ಗೆದ್ದು ತೋರಿಸಲಿ
Next Article ಮೋದಿ ನೇತೃತ್ವದಲ್ಲಿ ದೇಶ ಅಭಿವೃದ್ಧಿ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?