ಉಡುಪಿ : ಮುಂಗಾರು ಮಳೆ ಅಬ್ಬರಕ್ಕೆ ಕರಾವಳಿಯಲ್ಲಿ ಎರಡು ಜೀವಗಳು ಬಲಿಯಾಗಿದೆ. ಉಡುಪಿ ಜಿಲ್ಲೆಯ ಕಾಪು ಸಮೀಪದ ಮಜೂರು ಎಂಬಲ್ಲಿ ಚಲಿಸುತ್ತಿದ್ದ ಎರಡು ಆಟೋರಿಕ್ಷಾದ ಮೇಲೆ ಮರ ಬಿದ್ದು ಇಬ್ಬರು ಸಾವನ್ನಪ್ಪಿರುವ ಧಾರುಣ ಘಟನೆ ಗುರುವಾರ ರಾತ್ರಿ ನಡೆದಿದೆ.
ಕಾಪು ಕಡೆಯಿಂದ ಶಿರ್ವಾ ಕಡೆಗೆ ಮತ್ತು ಶಿರ್ವಾದಿಂದ ಕಾಪು ಕಡೆಗೆ ಪಯಣಿಸುತ್ತಿದ್ದ ಎರಡು ರಿಕ್ಷಾದ ಮೇಲೆ ಮರ ಬಿದ್ದ ಪರಿಣಾಮ ಕಾಪುವಿನಿಂದ ಶಿರ್ವ ಕಡೆಗೆ ತೆರಳುತ್ತಿದ್ದ ಪುಷ್ಪಾ(45) ಹಾಗೂ ಅವರ ಮೈದುನ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಶರೀಫ್ ಹಾಗೂ ದಿನೇಶ್ ಎಂಬವರ ರಿಕ್ಷಾದ ಮೇಲೆ ಮರ ಬಿದ್ದಿದೆ. ದುರಂತದಲ್ಲಿ ಅದೃಷ್ಟವಶಾತ್ ಎರಡೂ ಆಟೋಗಳ ಚಾಲಕರು ಹಾಗೂ ಇತರ ಪ್ರಯಾಣಿಕರು ಪಾರಾಗಿದ್ದು, ಆಟೋ ರಿಕ್ಷಾ ಸಂಪೂರ್ಣ ಹಾನಿಗೀಡಾಗಿದೆ.