• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: IPL 2023 : ರಾಜಸ್ಥಾನ್‌ಗೆ 4 ವಿಕೆಟ್‌ಗಳ ರೋಚಕ ಜಯ : ಪ್ಲೇ ಆಫ್ ರೇಸ್‌ನಲ್ಲಿ ಉಳಿದ ರಾಯಲ್ಸ್‌!
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಕ್ರೀಡೆ > IPL 2023 : ರಾಜಸ್ಥಾನ್‌ಗೆ 4 ವಿಕೆಟ್‌ಗಳ ರೋಚಕ ಜಯ : ಪ್ಲೇ ಆಫ್ ರೇಸ್‌ನಲ್ಲಿ ಉಳಿದ ರಾಯಲ್ಸ್‌!
ಕ್ರೀಡೆ

IPL 2023 : ರಾಜಸ್ಥಾನ್‌ಗೆ 4 ವಿಕೆಟ್‌ಗಳ ರೋಚಕ ಜಯ : ಪ್ಲೇ ಆಫ್ ರೇಸ್‌ನಲ್ಲಿ ಉಳಿದ ರಾಯಲ್ಸ್‌!

Arjun Gowda
Last updated: 2023/05/19 at 7:05 PM
Arjun Gowda
Share
3 Min Read
SHARE

ಧರ್ಮಶಾಲಾ : ಯುವ ಬ್ಯಾಟರ್‌ಗಳಾದ ಯಶಸ್ವಿ ಜೈಸ್ವಾಲ್‌ (50) ಮತ್ತು ದೇವದತ್ ಪಡಿಕ್ಕಲ್ (51) ಅವರ ಮನಮೋಹಕ ಅರ್ಧಶತಕಗಳ ಬಲದಿಂದ ಚೇತರಿಸಿದ ರಾಜಸ್ಥಾನ್ ರಾಯಲ್ಸ್‌ ತಂಡ ಪಂಜಾಬ್ ಕಿಂಗ್ಸ್‌ ಎದುರು 4 ವಿಕೆಟ್‌ಗಳ ರೋಚಕ ಜಯ ದಾಖಲಿಸಿ, ಐಪಿಎಲ್ 2023 ಟೂರ್ನಿಯ ಪ್ಲೇ ಆಫ್ ರೇಸ್‌ನಲ್ಲಿ ಜೀವಂತವಾಗಿ ಉಳಿದುಕೊಂಡಿದೆ. 14 ಪಂದ್ಯಗಳಿಂದ ಒಟ್ಟಾರೆ 14 ಅಂಕ ಕಲೆಹಾಕಿರುವ ರಾಜಸ್ಥಾನ್ ರಾಯಲ್ಸ್‌ ಸದ್ಯ ಅಂಕಪಟ್ಟಿಯ 5ನೇ ಸ್ಥಾನದಲ್ಲಿದೆ. ಮುಂದಿ ಘಟ್ಟಕ್ಕೆ ಕಾಲಿಡಬೇಕಾದರೆ, ತನಗೆ ಪ್ರತಿಸ್ಪರ್ಧಿಯಾಗಿರುವ ತಂಡಗಳು ಸೋಲಲಿ ಎಂದು ಆರ್‌ಆರ್‌ ಪ್ರಾರ್ಥಿಸುವಂತ್ತಾಗಿದೆ.

ಪಂಜಾಬ್‌ ವಿರುದ್ಧ ಗೆಲುವು ಸಾಧಿಸುವ ಮೂಲಕ 14 ಅಂಕ ಪಡೆದು +0.148 ರನ್‌ರೇಟ್‌ನೊಂದಿಗೆ 5ನೇ ಸ್ಥಾನಕ್ಕೆ ಜಿಗಿದಿದೆ. ಒಂದು ವೇಳೆ ಭಾನುವಾರದ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಮುಂಬೈ ತಂಡಗಳು ಸೋತರೇ ರಾಜಸ್ಥಾನ್‌ ರಾಯಲ್ಸ್‌ಗೆ ಪ್ಲೇ ಆಫ್‌ ತಲುಪುವ ಅವಕಾಶ ಸಿಗಲಿದೆ.

ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕಿಂಗ್ಸ್‌ ಪಂಜಾಬ್‌ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 187 ರನ್‌ ಗಳಿಸಿತ್ತು. ಬೃಹತ್‌ ಮೊತ್ತದ ಗುರಿ ಪಡೆದ ರಾಜಸ್ಥಾನ್‌ ರಾಯಲ್ಸ್‌ 19.4 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 189 ರನ್‌ ಗಳಿಸಿ ಗೆಲುವು ಸಾಧಿಸಿತು.

ಕೊನೆಯ 4 ಓವರ್‌ಗಳಲ್ಲಿ ರಾಜಸ್ಥಾನ್‌ಗೆ 39 ರನ್‌ಗಳ ಅಗತ್ಯವಿತ್ತು. 17ನೇ ಓವರ್‌ನಲ್ಲಿ 6 ರನ್‌, 18ನೇ ಓವರ್‌ನಲ್ಲಿ 14 ರನ್‌ ಹಾಗೂ 19ನೇ ಓವರ್‌ನಲ್ಲಿ 11 ರನ್‌ ಸೇರ್ಪಡೆಯಾಯಿತು. ಈ ವೇಳೆ ಸ್ಫೋಟಕ ಆಟವಾಡುತ್ತಿದ್ದ ಶಿಮ್ರಾನ್‌ ಹೆಟ್ಮೇಯರ್‌ 28 ಎಸೆತಗಳಲ್ಲಿ ಭರ್ಜರಿ 46 ರನ್‌ (4 ಬೌಂಡರಿ, 3 ಸಿಕ್ಸ್‌) ಚಚ್ಚಿ ಔಟಾದರು. ಕೊನೆಯ 6 ಎಸೆತಗಳಲ್ಲಿ 9 ರನ್‌ ಬೇಕಿದ್ದಾಗ. ಮೊದಲ 3 ಎಸೆತಗಳಲ್ಲಿ 4 ರನ್‌ ಸೇರ್ಪಡೆಯಾಯಿತು. 4ನೇ ಎಸೆತದಲ್ಲಿ ಕ್ರೀಸ್‌ ತೆಗೆದುಕೊಂಡ ಧ್ರುವ್‌ ಜುರೆಲ್‌ ಸಿಕ್ಸ್‌ ಬಾರಿಸುವ ಮೂಲಕ ಜಯ ತಂದುಕೊಟ್ಟರು.

ಚೇಸಿಂಗ್‌ ಆರಂಭಿಸಿದ ರಾಜಸ್ಥಾನ್ ರಾಯಲ್ಸ್‌ ಮೊದಲ ವಿಕೆಟ್‌ ಕಳೆದುಕೊಂಡರೂ 2 ವಿಕೆಟ್‌ಗೆ ಉತ್ತಮ ಆರಂಭ ಪಡೆಯಿತು. 2ನೇ ವಿಕೆಟ್‌ಗೆ ಜೊತೆಯಾದ ದೇವದತ್‌ ಪಡಿಕಲ್‌ ಹಾಗೂ ಯಶಸ್ವೀ ಜೈಸ್ವಾಲ್‌ ಭರ್ಜರಿ ಅರ್ಧ ಶತಕ ಸಿಡಿಸಿ ಔಟಾದರು.

ಜೈಸ್ವಾಲ್‌ 36 ಎಸೆತಗಳಲ್ಲಿ 8 ಬೌಂಡರಿಗಳೊಂದಿಗೆ 50 ರನ್‌ ಗಳಿಸಿದರು. ಈ ಮೂಲಕ 14 ಲೀಗ್‌ ಪಂದ್ಯಗಳಲ್ಲಿ 600 ರನ್‌ ಪೂರೈಸಿದರು. ಪಡಿಕಲ್‌ 30 ಎಸೆತಗಳಲ್ಲಿ 51 ರನ್‌ (3 ಸಿಕ್ಸರ್‌, 5 ಬೌಂಡರಿ) ಚಚ್ಚಿದರು. ಕೊನೆಯ ಪಂದ್ಯದಲ್ಲೂ ನಾಯಕ ಸಂಜು ಸ್ಯಾಮ್ಸನ್‌ ಕೇವಲ 2 ರನ್‌ ಗಳಿಸಿ ನಿರಾಸೆ ಮೂಡಿಸಿದರು. ರಿಯಾನ್‌ ಪರಾಗ್‌ 12 ಎಸೆತಗಳಲ್ಲಿ 2 ಸಿಕ್ಸರ್‌, 1 ಬೌಂಡರಿಯೊಂದಿಗೆ 20 ರನ್‌ ಗಳಿಸುವ ಮೂಲಕ ತಂಡಕ್ಕೆ ಇನ್ನಷ್ಟು ರನ್‌ ಕೊಡುಗೆ ನೀಡಿದರು.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಪಂಜಾಬ್‌ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ಯಾಮ್‌ ಕರ್ರನ್‌, ಜಿತೇಶ್‌ ಶರ್ಮಾ ಹಾಗೂ ಶಾರೂಖ್‌ ಖಾನ್‌ ಬ್ಯಾಟಿಂಗ್‌ ನೆರವಿನಿಂದ 187 ರನ್‌ಗಳ ಬೃಹತ್‌ ಮೊತ್ತ ಪೇರಿಸಿತು.

ಜಿತೇಶ್‌ ಶರ್ಮಾ 44 ರನ್‌ (28 ಎಸೆತ, 3 ಸಿಕ್ಸ್‌, 3 ಬೌಂಡರಿ) ಗಳಿಸಿದರೆ, ಶಾರೂಖ್‌ ಖಾನ್‌ 41 ರನ್‌ (23 ಎಸೆತ, 2 ಸಿಕ್ಸರ್‌, 4 ಬೌಂಡರಿ), ಸ್ಯಾಮ್‌ ಕರ್ರನ್‌ 49 ರನ್‌ (31 ಎಸೆತ, 4 ಬೌಂಡರಿ, 2 ಸಿಕ್ಸ್‌) ಗಳಿಸಿ ಅಜೇಯರಾಗುಳಿದರು. ನಾಯಕ ಶಿಖರ್‌ ಧವನ್‌ 17 ರನ್‌, ಅಥರ್ವ್‌ ಟೈಡೆ 19 ರನ್‌ ಕೊಡುಗೆ ನೀಡಿದರು.

ರಾಜಸ್ಥಾನ್‌ ಪರ ನವದೀಪ್‌ ಸೈನಿ 4 ಓವರ್‌ಗಳಲ್ಲಿ 40 ರನ್‌ ನೀಡಿ 3 ವಿಕೆಟ್‌ ಕಿತ್ತರೆ, ಟ್ರೆಂಟ್‌ ಬೋಲ್ಟ್‌ ಹಾಗೂ ಆಡಂ ಜಂಪಾ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

You Might Also Like

ಇಂದು ಪ್ಲೇಆಫ್‌ ಪಂದ್ಯ, ಆರ್‌ಸಿಬಿ -ಮುಂಬೈ ಇಂಡಿಯನ್ಸ್ ಮುಖಾಮುಖಿ

ಕಾವೇರಿಗಾಗಿ ಕರ್ನಾಟಕ ಬಂದ್ ಗೆ ಮೈಸೂರು ತಮಿಳು ಸಂಘದ ಬೆಂಬಲ

ಹೊಸ ಹೊಳಲು ಗ್ರಾಮದಲ್ಲಿ ಹಸುಗಳ ಮೇಲೆ ಹುಲಿ ದಾಳಿ

ಯಡಿಯೂರಪ್ಪ ಬಾಯಿಯಿಂದ ಬಂದಿದೆ ಎಂದ್ರೆ ಸತ್ಯ ಎಂದರ್ಥ – ಶಾಸಕ ಶ್ರೀವತ್ಸ

ಮೈಸೂರು ಜಿಲ್ಲಾ ಪತ್ರಕರ್ತರ ಕ್ರೀಡಾಕೂಟ ದಿಲೀಪ್ ಚೌಡಳ್ಳಿ ಭರ್ಜರಿ ಬ್ಯಾಟಿಂಗ್ ಅಧ್ಯಕ್ಷರ ಇಲೆವೆನ್ ತಂಡಕ್ಕೆ ರೋಚಕ ಜಯ

Arjun Gowda May 19, 2023
Share this Article
Facebook Twitter Whatsapp Whatsapp LinkedIn Copy Link
Previous Article 2,000 ರೂ. ನೋಟ್‌ ಬ್ಯಾನ್‌
Next Article ನಾರಾಯಣ ನೇತ್ರಾಲಯದ ಪ್ರಖ್ಯಾತ ನೇತ್ರ ತಜ್ಞ ಡಾ.ಭುಜಂಗ ಶೆಟ್ಟಿ ಹೃದಯಾಘಾತದಿಂದ ನಿಧನ!
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?