• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಲಕ್ನೋ ವಿರುದ್ಧ ಗೆದ್ದು ಬೀಗಿದ ರೋಹಿತ್ ಪಡೆ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಕ್ರೀಡೆ > ಲಕ್ನೋ ವಿರುದ್ಧ ಗೆದ್ದು ಬೀಗಿದ ರೋಹಿತ್ ಪಡೆ
ಕ್ರೀಡೆ

ಲಕ್ನೋ ವಿರುದ್ಧ ಗೆದ್ದು ಬೀಗಿದ ರೋಹಿತ್ ಪಡೆ

admin
Last updated: 2023/05/25 at 1:47 AM
admin
Share
3 Min Read
SHARE

ಆಕಾಶ್‌ ಮಧ್ವಾಲ್‌ ಮಾರಕ ಬೌಲಿಂಗ್‌ ದಾಳಿ ಹಾಗೂ ಸಂಘಟಿತ ಬ್ಯಾಟಿಂಗ್‌ ಪ್ರದರ್ಶನದಿಂದ ಮುಂಬೈ ಇಂಡಿಯನ್ಸ್‌ ತಂಡವು, ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ‌ 81 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

ಮೇ 26 ರಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ 2ನೇ ಎಲಿಮಿನೇಟರ್‌ ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್‌ ವಿರುದ್ಧ ಸೆಣಸಲಿದೆ. ಇನ್ನೂ ಕಳಪೆ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಲಕ್ನೋ ಸೂಪರ್‌ ಜೈಂಟ್ಸ್‌ ಸೋತು ನಿರಾಸೆ ಅನುಭವಿಸಿದೆ.
ಕಳೆದ ವರ್ಷದ ಐಪಿಎಲ್‌ ಆವೃತ್ತಿ ಪ್ರವೇಶಿಸಿದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡ 2ನೇ ಬಾರಿಯೂ ಮೊದಲ ಎಲಿಮಿನೇಟರ್‌ ಪಂದ್ಯದಲ್ಲೇ ಸೋತು ಹೊರನಡೆದಿದೆ. 2022ರ ಆವೃತ್ತಿಯಲ್ಲಿ ಆರ್‌ಸಿಬಿ ವಿರುದ್ಧ ಮೊದಲ ಎಲಿಮಿನೇಟರ್‌ ಪಂದ್ಯದಲ್ಲಿ ಸೋತಿತ್ತು.

ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ ನಡೆದ ಮೊದಲ ಎಲಿಮಿನೇಟರ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಇಂಡಿಯನ್ಸ್‌ 8 ವಿಕೆಟ್‌ ನಷ್ಟಕ್ಕೆ 182 ರನ್‌ ಗಳಿಸಿತ್ತು. ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಲಕ್ನೋ ಸೂಪರ್‌ ಜೈಂಟ್ಸ್‌ ಕಳಪೆ ಬ್ಯಾಟಿಂಗ್‌ ಪ್ರದರ್ಶನದಿಂದ 16.3 ಓವರ್‌ಗಳಲ್ಲೇ 101 ರನ್‌ಗಳಿಗೆ ಸರ್ವಪತನಕಂಡಿತು.ಚೇಸಿಂಗ್‌ ಆರಂಭಿಸಿದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದಲ್ಲಿ ಮುಂಬೈ ಬೌಲರ್‌ಗಳ ದಾಳಿಗೆ ತರಗೆಲೆಗಳಂತೆ ವಿಕೆಟ್‌ ಉದುರಿತು. ಪವರ್‌ ಪ್ಲೇ ನಲ್ಲಿ ವಿಕೆಟ್‌ ಕಳೆದುಕೊಂಡ ಹೊರತಾಗಿಯೂ ಉತ್ತಮ ರನ್‌ ಕಲೆಹಾಕಿತ್ತು. ಬಳಿಕ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ಗಳ ಕಳಪೆ ಪ್ರದರ್ಶನದಿಂದ ಮುಂಬೈ ಎದುರು ಮಂಡಿಯೂರಬೇಕಾಯಿತು.

ಲಕ್ನೋ ತಂಡದ ಪರ ಮಾರ್ಕಸ್‌ ಸಗ್ಟೋಯ್ನಿಸ್‌ 40 ರನ್‌ (27 ಎಸೆತ, 5 ಬೌಂಡರಿ, 1 ಸಿಕ್ಸರ್‌), ಕೈಲ್‌ ಮೇಯರ್ಸ್‌ 18 ರನ್‌, ದೀಪಕ್‌ ಹೂಡಾ 15 ರನ್‌ ಗಲಿಸಿದ್ದು ಬಿಟ್ಟರೆ ಉಳಿದ ಯಾರೊಬ್ಬರೂ ಕ್ರೀಸ್‌ನಲ್ಲಿ ದೃಢವಾಗಿ ನಿಲ್ಲದ ಕಾರಣ ಲಕ್ನೋ ಹೀನಾಯ ಸೋಲನುಭವಿಸಿತು.
ಅನಿಲ್‌ ಕುಂಬ್ಳೆ ದಾಖಲೆ ಸರಿಗಟ್ಟಿದ ಮಧ್ವಾಲ್‌:
ಮುಂಬೈ ಇಂಡಿಯನ್ಸ್‌ ಪರ ಮಾರಕ ಬೌಲಿಂಗ್‌ ದಾಳಿ ನಡೆಸಿದ ಆಕಾಶ್‌ ಮಧ್ವಾಲ್‌ 3.3 ಓವರ್‌ಗಳಲ್ಲಿ 5 ರನ್‌ ನೀಡಿ 5 ವಿಕೆಟ್‌ ಉಡೀಸ್‌ ಮಾಡಿದರು. ಈ ಮೂಲಕ ಅನಿಲ್‌ ಕುಂಬ್ಳೆ ದಾಖಲೆ ಸರಿಗಟ್ಟಿದರು. ಕೇಪ್‌ಟೌನ್‌ನಲ್ಲಿ ನಡೆದ 2009ರ ಐಪಿಎಲ್‌ ಆವೃತ್ತಿಯಲ್ಲಿ ಕುಂಬ್ಳೆ 3.1 ಓವರ್‌ಗಳಲ್ಲಿ 5 ರನ್‌ ನೀಡಿ 5 ವಿಕೆಟ್‌ ಪಡೆದಿದ್ದರು. ಇದೀಗ ಆಕಾಶ್‌ ಮಧ್ವಾಲ್‌ 3.3 ಓವರ್‌ಗಳಲ್ಲಿ 5 ರನ್‌ ನೀಡಿ 5 ವಿಕೆಟ್‌ ಪಡೆದಿದ್ದಾರೆ. ಚಿರ್ಸ್‌ ಜೋರ್ಡನ್‌ ಹಾಗೂ ಪಿಯೂಷ್‌ ಚಾವ್ಲಾ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಇಂಡಿಯನ್ಸ್‌ ಉತ್ತಮ ಆರಂಭ ಪಡೆದುಕೊಂಡಿತ್ತು. ಆರಂಭಿಕರು ಹೆಚ್ಚಿನ ರನ್‌ ಕಲೆಹಾಕುವಲ್ಲಿ ವಿಫಲವಾದರೂ 3ನೇ ವಿಕೆಟ್‌ಗೆ ಕ್ಯಾಮರೂನ್‌ ಗ್ರೀನ್‌ ಹಾಗೂ ಸೂರ್ಯಕುಮಾರ್‌ ಜೋಡಿ 38 ಎಸೆತಗಳಲ್ಲಿ 66 ರನ್‌ ಬಾರಿಸಿತ್ತು. ಇವರಿಬ್ಬರ ಆಟದಿಂದ ಮುಂಬೈ ಮೊದಲ 10 ಓವರ್‌ಗಳಲ್ಲಿ 98 ರನ್‌ ಗಳಿಸಿತ್ತು. ಬಳಿಕ ಸೂರ್ಯ ಹಾಗೂ ಗ್ರೀನ್‌ ಔಟಾಗುತ್ತಿದ್ದಂತೆ ರನ್‌ ವೇಗ ಕಳೆದುಕೊಂಡ ಮುಂಬೈ ತಂಡ ಮುಂದಿನ 10 ಓವರ್‌ಗಳಲ್ಲಿ ಕೇವಲ 84 ರನ್‌ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು.

ಮುಂಬೈ ಪರ ಕ್ಯಾಮರೂನ್‌ ಗ್ರೀನ್‌ 41 ರನ್‌ (23 ಎಸತೆ, 6 ಬೌಂಡರಿ, 1 ಸಿಕ್ಸರ್), ಸೂರ್ಯಕುಮಾರ್‌ ಯಾದವ್‌ 33 ರನ್‌ (20 ಎಸೆತ, 2 ಬೌಂಡರಿ, 2 ಸಿಕ್ಸ್‌ರ್‌), ತಿಲಕ್‌ ವರ್ಮಾ 26 ರನ್‌, ನೇಹಾಲ್‌ ವಧೇರಾ 23 ರನ್‌, ರೋಹಿತ್‌ ಶರ್ಮಾ 11 ರನ್‌, ಇಶಾನ್‌ ಕಿಶನ್‌ 15 ರನ್‌ ಗಳಿಸಿದರು. ಈಗಾಗಲೇ ಪೈನಲ್ ಪ್ರವೇಶ ಮಾಡಿರುವ ಚೈನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗುಜರಾತ್ ಮುಂಬೈ ಇಬ್ಬರಲ್ಲಿ ಯಾರು ಪೈನಲ್ ನಲ್ಲಿ ಸೆಣಸಾಟ ನಡೆಸುತ್ತಾರೆ ಕಾದು ನೋಡಬೇಕಿದೆ.

You Might Also Like

ಇಂದು ಪ್ಲೇಆಫ್‌ ಪಂದ್ಯ, ಆರ್‌ಸಿಬಿ -ಮುಂಬೈ ಇಂಡಿಯನ್ಸ್ ಮುಖಾಮುಖಿ

ಕಾವೇರಿಗಾಗಿ ಕರ್ನಾಟಕ ಬಂದ್ ಗೆ ಮೈಸೂರು ತಮಿಳು ಸಂಘದ ಬೆಂಬಲ

ಹೊಸ ಹೊಳಲು ಗ್ರಾಮದಲ್ಲಿ ಹಸುಗಳ ಮೇಲೆ ಹುಲಿ ದಾಳಿ

ಯಡಿಯೂರಪ್ಪ ಬಾಯಿಯಿಂದ ಬಂದಿದೆ ಎಂದ್ರೆ ಸತ್ಯ ಎಂದರ್ಥ – ಶಾಸಕ ಶ್ರೀವತ್ಸ

ಮೈಸೂರು ಜಿಲ್ಲಾ ಪತ್ರಕರ್ತರ ಕ್ರೀಡಾಕೂಟ ದಿಲೀಪ್ ಚೌಡಳ್ಳಿ ಭರ್ಜರಿ ಬ್ಯಾಟಿಂಗ್ ಅಧ್ಯಕ್ಷರ ಇಲೆವೆನ್ ತಂಡಕ್ಕೆ ರೋಚಕ ಜಯ

TAGGED: ipl mumbaiindians lacknowsupergaints cricket rohitsharma krunalpandya
admin May 25, 2023
Share this Article
Facebook Twitter Whatsapp Whatsapp LinkedIn Copy Link
Previous Article ಕೇಸರಿ ಕಂಡರೆ ಯಾಕೆ ಕೋಪ ? ಲೋಕ ಸಭೆ ಚುನಾವಣೆಯಲ್ಲಿ ಜನರೇ ಕಾಂಗ್ರೆಸ್ ಪಕ್ಷಕ್ಕೆ ಉತ್ತರ ಕೊಡ್ತಾರೆ – ವಿಜಯೇಂದ್ರ
Next Article ಅಶ್ವಥ್ ನಾರಾಯಣ್ ವಿರುದ್ಧ FIR ದಾಖಲು
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?