• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಜೂ.9 ರಂದು ಚಿತ್ರಮಂದಿರಗಳಲ್ಲಿ ‘ದರ್ಬಾರ್‌’
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಜೂ.9 ರಂದು ಚಿತ್ರಮಂದಿರಗಳಲ್ಲಿ ‘ದರ್ಬಾರ್‌’
ಜಿಲ್ಲೆಮೈಸೂರುಸಿನಿಮಾ

ಜೂ.9 ರಂದು ಚಿತ್ರಮಂದಿರಗಳಲ್ಲಿ ‘ದರ್ಬಾರ್‌’

Arjun Gowda
Last updated: 2023/05/26 at 9:52 AM
Arjun Gowda
Share
3 Min Read
SHARE

ಮೈಸೂರು : ಹೊಸ ಪ್ರತಿಭೆಗಳಿಂದ ಕೂಡಿರುವ ದರ್ಬಾರ್ ಚಲನಚಿತ್ರವೂ ಇದೇ ಜೂನ್ 9ರಂದು ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಸಾಹಿತ್ಯಗಾರರದ ವಿ. ಮನೋಹರ್ ತಿಳಿಸಿದರು.

ಇಂದು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತಾನಾಡಿದ ಅವರು ದರ್ಬಾರ್ ಚಿತ್ರ ಪ್ರಚಾರವನ್ನು ಮೈಸೂರುನಲ್ಲಿ ಮಾಡುತ್ತಿದ್ದು. ಈ ಚಿತ್ರ ದಲ್ಲಿ ಹಲವಾರು ಕಲಾ ಬಳಗ ಹಾಗೂ ರಂಗ ಕಲಾವಿದರ ತಂಡ ವನ್ನು ಹೊಂದಿದ್ದು, ಸಂತೋಷ್ ಕಾಮಿಡಿ ಕಿಲಾಡಿ ಅವರು ಈ ಚಿತ್ರದಲ್ಲಿ ಬಾಗಿಯಾಗಿದ್ದು ನಿರ್ದೇಶಕರು ಆದ ಸತೀಶ್ ಅವರ ಪರಿಚಯವಾಗಿತ್ತು ಮಾತನಾಡುತ್ತ ಒಂದು ಒಳ್ಳೆಯ ಕಥೆಯನ್ನು ತಿಳಿಸಿದ್ದರು ನಾನು ಪತ್ರಕರ್ತನಾಗಿ kartonist ಆಗಿ ಕೆಲಸ ಮಾಡಿರುವೆ ನನಗೆ ಒಳ್ಳೆಯ ಸಿನಿಮಾ ಮಾಡಬೇಕು ಎಂಬ ಮನೋಭಾವನೆ ಇತ್ತು ಆದರೆ ಆಗಿರಲಿಲ್ಲ. ಈ ಸಿನಿಮಾದಲ್ಲಿ 7 ಚರಣಗಳ ಹಾಡನ್ನು ಒಂದಿದೆ ನಾನು ಸಹಾ ಸಾಹಿತ್ಯ ಹಾಗೂ ನಿರ್ಮಾಪಕರಾಗಿ ಸೇವೆ ಮಾಡಲು ಅವಕಾಶವನ್ನು ಸಿಕ್ಕಿದ್ದೇ ಎಂದು ಹೇಳಿದರು.

ರಂಗಿತರಂಗ, ಒಂದು ಮೊಟ್ಟೆಯ ಕಥೆ,ಯು- ಟರ್ನ್, ಕೆಜಿಎಫ್, ಕಾಂತಾರದಂತಹ ಕೆಲವು ಚಿತ್ರಗಳು ಜನರ ಮನಸ್ಸನ್ನು ಗೆದ್ದವು. ಹೊಸಬರು ಮಾಡುವ ಹೊಸ ಪ್ರಯೋಗಗಳನ್ನು ಜನರು ಇಷ್ಟಪಟ್ಟಿದ್ದಾರೆ. ಅವುಗಳಲ್ಲಿ ಕಥೆಗೆ ಹೆಚ್ಚಿನ ಪ್ರಾಮುಖ್ಯತೆ ಇದ್ದುದರಿಂದ ಜನರು ಆ ಚಿತ್ರಗಳತ್ತ ಆಕರ್ಷಿತರಾದರು. ಇಂತಹ ಏರಿಳಿತಗಳು ಕನ್ನಡ ಚಿತ್ರರಂಗದಲ್ಲಿ ಉಂಟಾಗುತ್ತಿರುತ್ತವೆ ಎಂದರು.

ಯುವ ನಿರ್ದೇಶಕರು ಹಾಗೂ ನಿರ್ಮಾಪಕರು ಸದಭಿರುಚಿಯ ಚಿತ್ರಗಳನ್ನು ನಿರ್ಮಿಸಲು ಒಲವು ತೋರಿದರೆ ಚಿತ್ರರಂಗ ಇನ್ನಷ್ಟು ಬೆಳೆಯಲು ಸಾಧ್ಯ ಆಗುತ್ತದೆ. ಹಣ ಮಾಡುವುದಕ್ಕೆ ಚಿತ್ರವನ್ನು ನಿರ್ಮಿಸುವುದಾದರೆ ಅವುಗಳಿಗೆ ಉಳಿಗಾಲ ಇರುವುದಿಲ್ಲ ಎಂದು ಹೇಳಿದರು.

ಹಾಗೆಯೆ ಉತ್ತಮ ಚಿತ್ರಗಳಿಗೆ ಅತ್ಯುತ್ತಮ ಹಾಡುಗಳನ್ನು ಬರೆಯುವ ಪ್ರತಿಭಾವಂತ ಸಾಹಿತಿಗಳು ಈಗಲೂ ಇದ್ದಾರೆ. ಆದರೆ ಚಿತ್ರದ ಸನ್ನಿವೇಶಕ್ಕೆ ಪೂರಕ ಆಗುವಂತಹ ಹಾಡುಗಳನ್ನು ರಚಿಸುವ ಅವಕಾಶಗಳು ಅವರಿಗೆ ಸಿಗುತ್ತಿಲ್ಲ ಎಂದರು.
ಜಯಂತ್ ಕಾಯ್ಕಿಣಿ, ಕವಿರಾಜ್, ನಾಗೇಂದ್ರ ಪ್ರಸಾದ್ ಸೇರಿದಂತೆ ಅನೇಕ ಸಾಹಿತಿಗಳಿದ್ದಾರೆ. ಪ್ರಸ್ತುತ ಸಂಗೀತ ನಿರ್ದೇಶಕರು ನೀಡುವ ರೆಡಿಮೇಡ್ ಟ್ಯೂನ್‌ಗಳಿಗೆ ಸಾಹಿತ್ಯ ಬರೆಯುವಂತಹ ಸನ್ನಿವೇಶ ಸೃಷ್ಟಿ ಆಗಿದೆ. ಅಂತಹ ಸಾಮರ್ಥ್ಯ ಕೂಡ ಜಯಂತ್ ಕಾಯ್ಕಿಣಿ ಅವರಲ್ಲಿದೆ. ಆದರೆ ಕಥೆಗೆ ಹೊಂದಿಕೊಂಡಂತೆ ಮೂಡಿ ಬರುವ ಸಾಹಿತ್ಯ ಹೆಚ್ಚು ಸತ್ವಯುತ ಆಗಿರುತ್ತದೆ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಸುಮಾರು 23 ವರ್ಷಗಳ ನಂತರ ನಾನು ಮತ್ತೆ ಸಿನಿಮಾ ನಿರ್ದೇಶನಕ್ಕೆ ಕೈ ಹಾಕಿದ್ದೇನೆ.ಅದಕ್ಕೆ ಕಾರಣ ಈ ಸಿನಿಮಾದ ನಟ ಸತೀಶ್‌. “ಇಂದ್ರ ಧನುಷ್‌’ ಸಿನಿಮಾದ ನಂತರ ನಾನೂ ಸೀರಿಯಲ್, ಸಂಗೀತ ನಿರ್ದೇಶನ ಅಂತ ಬ್ಯುಸಿಯಾಗುತ್ತಾ ಹೋದೆ. ಹಾಗಾಗಿ ಅಂದುಕೊಂಡಂತೆ ಸಿನಿಮಾ ನಿರ್ದೇ ಶನ ಮಾಡಲು ಸಾಧ್ಯವಾಗಲಿಲ್ಲ.ಇನ್ನು ಸಿನಿಮಾರಂಗಕ್ಕೆ ಬರೋಕೂ ಮುನ್ನ ನಾನು ಕೆಲ ದಿನಪತ್ರಿಕೆಗಳಿಗೆ ಕಾರ್ಟೂನ್‌ ಬರೆಯುತ್ತಿದ್ದೆ. ಆಗಿಂದಲೇ ನಾನು ರಾಜಕೀಯದ ಬಗ್ಗೆ ತಿಳಿದುಕೊಂಡಿದ್ದೆ. ಇದೇ ಕಂಟೆಂಟ್‌ ಇಟ್ಟುಕೊಂಡು ಸಿನಿಮಾ ಮಾಡಬೇಕು ಎಂದುಕೊಡಿದ್ದೆ. ಈಗ ಅದಕ್ಕೆ ಅವಕಾಶ ಸಿಕ್ಕಿದ್ದು, ರಾಜಕೀಯ ವಿಡಂಭನೆಯ ಕಥೆಯನ್ನು “ದರ್ಬಾರ್‌’ ಸಿನಿಮಾದ ಮೂಲಕ ಪ್ರೇಕ್ಷಕರ ಮುಂದೆ ತರುತ್ತಿದ್ದೇವೆ’ ಎಂದು ಕಥಾಹಂದರದ ವಿವರಣೆ ನೀಡಿದರು.

“ದರ್ಬಾರ್‌’ ಸಿನಿಮಾ ಶುರುವಾದ ನಂತರ ಕೋವಿಡ್‌ ಹೆಚ್ಚಾಯಿತು. ಆ ಭಯದಲ್ಲಿಯೇ ಸಿನಿಮಾದ ಶೂಟಿಂಗ್‌ ಕಂಪ್ಲೀಟ್‌ ಮಾಡಿದೆವು. ಮದ್ದೂರು ಬಳಿಯ ಹಳ್ಳಿಯೊಂದರಲ್ಲಿ ಸಿನಿಮಾದ ಬಹುತೇಕ ಶೂಟಿಂಗ್‌ ನಡೆಸಲಾಗಿದೆ. ಈ ಹಿಂದೆ “ದಿಲ್ದಾರ್‌’ ಸಮಯದಿಂದಲೂ ಸ್ನೇಹಿತರಾಗಿದ್ದ ಸತೀಶ್‌ ಈ ಕಥೆ ಹೇಳಿದರು. ಅದರಲ್ಲೂ ಪಾಲಿಟಿಟ್ಸ್‌ ಇತ್ತು. ಇವತ್ತಿನ ರಾಜಕೀಯವನ್ನು ವ್ಯಂಗ್ಯವಾಗಿ ಹೇಳುವ ಸಬ್ಜೆಕ್ಟ್ ಈ ಸಿನಿಮಾದಲ್ಲಿದೆ’ ಎಂದ ವಿ. ಮನೋಹರ್‌ ಅವರು ದರ್ಬಾರ್ ಸಿನಿಮಾ ಜೂನ್ 9 ರಂದು ತೆರೆಕಾಣುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ರಾಜಗುರು ನಾಗೇಂದ್ರ, ಬೆಂಗಳೂರು, ಶಿವಬಾಲಾಜಿ, ಬಸವರಾಜ ಗೌಡ, ಬಲ ಶಂಕರ, ಮಂಜುನಾಥ್ ಜೈ ಶಂಕರ್, ನಾಯಕ ಸತೀಶ್ ಹಾಜರಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Entertainment
Arjun Gowda May 26, 2023
Share this Article
Facebook Twitter Whatsapp Whatsapp LinkedIn Copy Link
Previous Article ಕೀರ್ತಿ ಅನಿರುಧ್ ಅವರಿಗೆ ಪ್ರತಿಷ್ಠಿತ ಆರ್ಯಭಟ ಪ್ರಶಸ್ತಿ
Next Article ಮೈಸೂರಿಗೆ ಒಲಿದ ಎರಡು ಮಂತ್ರಿಗಿರಿ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?