ಮೈಸೂರು : ನಮ್ಮ ಸಚಿವ ಸಂಪುಟ ಒಗ್ಗಟ್ಟಾಗಿದೆ.
ನನಗೆ ಯಾವ ಖಾತೆ ಅಂತ ಏನೂ ಬೇಸರವಿಲ್ಲ
ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಅಷ್ಟೇ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿದರು.
ನಗರದ ಜಲದರ್ಶಿನಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಎಸ್ಸಿ ,ಎಸ್ಟಿ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನೇ ನೀಡಿಲ್ಲ.
ವಿದ್ಯಾರ್ಥಿಗಳು ಪ್ರವೇಶ ಶುಲ್ಕ ಕಟ್ಟಲು ಪರದಾಡುತ್ತಿದ್ದಾರೆ.
ಇದನ್ನು ನಾವು ಮುಂದಿನ ದಿನಗಳಲ್ಲಿ ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದರು.
ಸುಳ್ಳನ್ನೇ ಸತ್ಯ ಮಾಡುವಂತಹ ಕೆಲಸವನ್ನು ನಾವು ಮಾಡಲ್ಲ.ನಾವೇನು ಮಾಡಿದ್ದೇವೆ ಅದನ್ನು ನಾವು ಹೇಳುತ್ತೇವೆ.ನಾವು ರಾಜ್ಯದ ಜನರನ್ನು, ಸಮಾಜವನ್ನು ಕಟ್ಟುವ ಕೆಲಸ ಮಾಡಿದರೆ ಬಿಜೆಪಿಯವರು ಒಡೆಯುವ ಕೆಲಸ ಮಾಡುತ್ತಾರೆ.ಬಿಜೆಪಿಯವರು ಸೋತು ಹತಾಶರಾಗಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ.
ನಮ್ಮ ಬದ್ಧತೆಯನ್ನು ಪ್ರಶ್ನೆ ಮಾಡುವ ನೈತಿಕತೆ ಬಿಜೆಪಿಯವರಿಗಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಸಚಿವ ಹೆಚ್ ಸಿ ಮಹದೇವಪ್ಪ ಕಿಡಿಕಾರಿದರು