ಮೈಸೂರು : ಬಿಜೆಪಿಗೆ ಆಡಳಿತ ವಿರೋಧಿ ಅಲೆ ಇತ್ತು.
ಆ ವಿರೋಧಿ ಅಲೆಯ ಜೊತೆಗೆ ನಮ್ಮ ಗ್ಯಾರೆಂಟಿಯನ್ನು ನೋಡಿ ಜನ ಕಾಂಗ್ರೆಸ್ ಗೆ ಬಹುಮತ ಕೊಟ್ಟಿದ್ದಾರೆ.
ಈಗ ಬಿಜೆಪಿ ತಮ್ಮ ಆಡಳಿತ ವಿರೋಧಿ ವೈಫಲ್ಯವನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ಮೇಲೆ ಉಗುಳು ಅಚ್ಚುವ ಕೆಲಸವನ್ನು ಮಾಡುತ್ತಿದೆ ಎಂದು ಸಚಿವ ಡಾ. ಹೆಚ್.ಸಿ ಮಹದೇವಪ್ಪ ಹೇಳಿದರು.
ಬಿಜೆಪಿ ಅವಧಿಯಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿತ್ತು.
ಜನರು ಅತೀವ ಸಂಕಷ್ಟದಲ್ಲಿದ್ದರು.
ಇದರಿಂದ ಬಿಜೆಪಿ ರಾಜ್ಯದಲ್ಲಿ ತಿರಸ್ಕೃತವಾಗಿದೆ.
ಈ ಚರ್ಚೆಯನ್ನು ಮರೆ ಮಾಚಲು ಕಾಂಗ್ರೆಸ್ ನ ಗ್ಯಾರೆಂಟಿ ಕಾರ್ಡ್ ವಿಚಾರವನ್ನು ದೊಡ್ಡದು ಮಾಡುತ್ತಿದ್ದಾರೆ.
ಇನ್ನೂ ಸರ್ಕಾರ ಕುಳಿತೇ ಇಲ್ಲ.
ಅಷ್ಟು ತರಾತುರಿಯಲ್ಲಿ ಗ್ಯಾರೆಂಟಿಗಳ ಅನುಷ್ಟಾನಕ್ಕೆ ಬಿಜೆಪಿಯವರು ಒತ್ತಾಯ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.
ಬಿಜೆಪಿಯ ಈ ತಂತ್ರ ಜನರಿಗೂ ಅರ್ಥವಾಗುತ್ತಿದೆ.
ಮೋದಿಯವರು 2014ರಲ್ಲಿ ಕೊಟ್ಟ ಭರವಸೆ ಈಡೇರಿದೆಯಾ?15 ಲಕ್ಷ ಹಣ ಜನರ ಖಾತೆಗೆ ಬಂದಿದೆಯಾ?ಬಿಜೆಪಿಯವರು ಮೊದಲು ಇದಕ್ಕೆ ಉತ್ತರ ಕೊಡಲಿ.ನಾವು ಗ್ಯಾರೆಂಟಿಯ ಬಗ್ಗೆ ಜನರಿಗೆ ಏನು ಹೇಳಿದ್ದೆವೋ ಅದನ್ನು ಮಾಡುತ್ತೇವೆ.
ಸಿಎಂ ಈ ವಿಚಾರದಲ್ಲಿ ಸಭೆಗಳನ್ನು ನಡೆಸುತ್ತಿದ್ದಾರೆ ಶೀಘ್ರವೇ ಎಲ್ಲವನ್ನೂ ಜಾರಿ ಮಾಡುತ್ತೇವೆ ಎಂದು
ಸಚಿವ ಡಾ ಹೆಚ್ ಸಿ ಮಹದೇವಪ್ಪ ತಿಳಿಸಿದರು