• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಚಾಮರಾಜನಗರದಲ್ಲಿ ಮಳೆ ಅವಾಂತರ ಶಾಸಕ ಪುಟ್ಟರಂಗಶೆಟ್ಟಿಗೆ ಜೈ ಎಂದು ಜನರ ಆಕ್ರೋಶ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಚಾಮರಾಜನಗರ > ಚಾಮರಾಜನಗರದಲ್ಲಿ ಮಳೆ ಅವಾಂತರ ಶಾಸಕ ಪುಟ್ಟರಂಗಶೆಟ್ಟಿಗೆ ಜೈ ಎಂದು ಜನರ ಆಕ್ರೋಶ
ಇತರೆಚಾಮರಾಜನಗರ

ಚಾಮರಾಜನಗರದಲ್ಲಿ ಮಳೆ ಅವಾಂತರ ಶಾಸಕ ಪುಟ್ಟರಂಗಶೆಟ್ಟಿಗೆ ಜೈ ಎಂದು ಜನರ ಆಕ್ರೋಶ

admin
Last updated: 2023/05/31 at 4:41 AM
admin
Share
2 Min Read
SHARE

ಚಾಮರಾಜನಗರ: ನಗರದಲ್ಲಿ ಮಂಗಳವಾರ ಸುರಿದ ಭಾರಿ ಮಳೆಗೆ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಅವಾಂತರ ಸೃಷ್ಟಿಸಿದ್ದು, ವಾಹನ ಸವಾರರು ಪರದಾಡುವಂತಯಿತು.

ರಾಜ ಕಾಲುವೆ ಉಕ್ಕಿಹರಿದು ರಸ್ತೆಯಲ್ಲಿ ನೀರು ನಿಂತಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಮೊಣಕಾಲುವರೆಗೆ ನಿಂತಿದ್ದ ನೀರಿನಲ್ಲಿ ಸಿಕ್ಕಿಹಾಕಿಕೊಂಡ ದ್ವಿಚಕ್ರ ವಾಹನ ಸವಾರರಲ್ಲಿ ಕೆಲವರು ಆಯತಪ್ಪಿ ಬಿದ್ದರು. ಇದರಲ್ಲಿ ಮಹಿಳೆಯರೂ ಒಬ್ಬರಿದ್ದರು.
ಹಲವು ದಿನಗಳ ನಂತರ ಮಂಗಳವಾರ ಮಧ್ಯಾಹ್ನ ನಗರದಲ್ಲಿ ಭರ್ಜರಿ ಮಳೆಯಾಯಿತು. ಮಧ್ಯಾಹ್ನ 2.55ಕ್ಕೆ ಶುರುವಾರ ವರ್ಷಧಾರೆ, ಗಾಳಿ, ಗುಡುಗು ಸಹಿತ 3.35ರವರೆಗೆ ಸುರಿಯಿತು.

ಮಳೆಗೆ ಚರಂಡಿ ರಸ್ತೆಯಲ್ಲಿ ಭಾರಿ ಪ್ರಮಾಣದಲ್ಲಿ ನೀರು ಹರಿಯಿತು. ಹಲವು ದಿನಗಳಿಂದ ಬಿಸಿಲಿನ ಝಳಕ್ಕೆ ಬಸವಳಿದಿದ್ದ ಜನರು ಕೊಂಚ ನಿರಾಳರಾದರು.
ಭಾರಿ ಮಳೆಯಿಂದಾಗಿ ಬಿ.ರಾಚಯ್ಯ ಜೋಡಿ ರಸ್ತೆ, ಭುವನೇಶ್ವರಿ ವೃತ್ತದ ಬಳಿಯ ತ್ಯಾಗರಾಜ ರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ನೀರು ಕಟ್ಟಿ ನಿಂತು ಜನರು ಕಿರಿ ಕಿರಿ ಅನುಭವಿಸಿದರು.

ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಜಿಲ್ಲಾಡಳಿತ ಭವನದ ಗೇಟಿನ ಮುಂಭಾಗ ಎಂದಿನ ಸಮಸ್ಯೆ ಮಂಗಳವಾರವೂ ಮರುಕಳಿಸಿತು. ರಸ್ತೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಚರಂಡಿ ನಿರ್ಮಾಣವಾಗದಿರುವುದರಿಂದ ಭಾರಿ ಪ್ರಮಾಣದಲ್ಲಿ ಹರಿದ ನೀರು ರಸ್ತೆಗೆ ಉಕ್ಕಿತು. ಇದಲ್ಲದೇ ರಸ್ತೆಯ ಮೂಲಕ ಹಾದು ಹೋಗುವ ರಾಜ ಕಾಲುವೆಯ ಕೊಳಚೆ ನೀರು ಕೂಡ ರಸ್ತೆಗೆ ಉಕ್ಕಿ ಅವಾಂತರ ಸೃಷ್ಟಿಯಾಯಿತು.

ಬಸವೇಶ್ವರ ಚಿತ್ರಮಂದಿರ, ಇಂದಿರಾ ಕ್ಯಾಂಟೀನ್‌, ಜಿಲ್ಲಾಡಳಿತ ಭವನದ ಗೇಟ್‌, ಹೋಟೆಲ್‌ ಅಧ್ಯಕ್ಷ ಸೇರಿದಂತೆ ಇತರೆ ಮಳಿಗೆಗಳ ಮುಂಭಾಗ ಕೆರೆಯಂತೆ ನೀರು ನಿಂತಿತ್ತು. ಪಾದಚಾರಿಗಳು, ವಾಹನ ಸವಾರರು ಅದರಲ್ಲೂ ವಿಶೇಷವಾಗಿ ದ್ವಿಚಕ್ರವಾಹನಸವಾರರು ತೀವ್ರ ತೊಂದರೆ ಅನುಭವಿಸಿದರು. ಜಿಲ್ಲಾಡಳಿತ, ನಗರಸಭೆ ಸ್ಥಳೀಯ ಶಾಸಕರು ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವಾಹನಗಳು ದೀರ್ಘ ಸಮಯ ನಿಂತಿದ್ದರಿಂದ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಯಿತು. ನೀರಿನಲ್ಲಿ ಸಿಕ್ಕಿಹಾಕಿಕೊಂಡಿದ್ದ ದ್ಚಿಚಕ್ರವಾಹನ ಸವಾರೊಬ್ಬರು, ಶಾಸಕ ಪುಟ್ಟರಂಗಶೆಟ್ಟಿಯವರಿಗೆ ಜೈಕಾರ ಹಾಕಿ ಆಕ್ರೋಶ ಹೊರಹಾಕಿದರು.ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು: ನಗರದಾದ್ಯಂತ ಅರ್ಧ ಗಂಟೆ ಭಾರಿ ಮಳೆಯಾಗಿದ್ದರಿಂದ ತ್ಯಾಗರಾಜ ರಸ್ತೆ ಸೇರಿದಂತೆ ತಗ್ಗುಪ್ರದೇಶಗಳಿಗೆ ನೀರು ನುಗ್ಗಿತು.

ತ್ಯಾಗರಾಜರಸ್ತೆಯಲ್ಲಿ ಸಂಗ್ರಹವಾದ ಮಳೆ ನೀರು ಚರಂಡಿಗೆ ಸರಾಗವಾಗಿ ಹೋಗದೆ ಇರುವುದರಿಂದ ಆ ರಸ್ತೆಯಲ್ಲಿರುವ ಹಳೆಯ ಅಂಗಡಿಗಳಿಗೆ ನೀರು ನುಗ್ಗಿತು. ಮಾಲೀಕರು ನೀರನ್ನು ಹೊರ ಹಾಕಬೇಕಾದ ಪರಿಸ್ಥಿತಿ ಉಂಟಾಯಿತು. ಜೋಡಿ ರಸ್ತೆ ಅಭಿವೃದ್ಧಿಯಾದಾಗಿನಿಂದ ಮಳೆಗಾಲದಲ್ಲಿ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ನೀರು ನಿಲ್ಲುವುದು ಜನರು ಪರದಾಡುವುದು ಮುಗಿಯದ ಕಥೆಯಂತಾಗಿದೆ.

ಇನ್ನು ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಜನರು ಶಾಪ ಹಾಕಿದ್ದಾರೆ. ಅಲ್ಲದೆ ಸಮಸ್ಯೆಗಳನ್ನು ಕಂಡು ಕಾಣದಂತೆ ಇರುವ ಜಿಲ್ಲಾಡಳಿತ ಏನು ಮಾಡುತ್ತಿದೆ ಎಂದು ಸಾರ್ವಜಿಕರು ಪ್ರಶ್ನೆ ಮಾಡುತ್ತಿದ್ದಾರೆ

You Might Also Like

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಖಂಡಿಸಿ ಚಾ.ನಗರದಲ್ಲಿ ಬಿಜೆಪಿ ಪ್ರತಿಭಟನೆ

ಕಲುಷಿತ ನೀರು ಕುಡಿದು 7 ಜನ ಅಸ್ವಸ್ಥ ಮಧುವನಹಳ್ಳಿಯಲ್ಲಿ ಘಟನೆ

ಚಾಮರಾಜನಗರದಲ್ಲಿ ಭರ್ಜರಿ ಮಳೆ

ಚಾಮರಾಜನಗರ ಮೈಸೂರು ಎರಡನ್ನೂ ಗೆಲ್ತೀವಿ – ಸಚಿವ ವೆಂಕಟೇಶ್

TAGGED: bjp congress jds dkshivakumar siddaramiah Yadiyurappa puttarangashetty chamarajanagar
admin May 31, 2023
Share this Article
Facebook Twitter Whatsapp Whatsapp LinkedIn Copy Link
Previous Article ಜೆಡಿಎಸ್ ವಿಸರ್ಜನೆ ಇಲ್ಲ ಜನರಿಗೆ ಗ್ಯಾರೆಂಟಿ ಯೋಜನೆ ಕೊಡದಿದ್ರೆ ಕಾಂಗ್ರೆಸ್ ವಿಸರ್ಜನೆ ಮಾಡ್ತೀವಿ – ಹೆಚ್ಡಿಕೆ
Next Article ಮಲೈ ಮಾದಪ್ಪನ ಹುಂಡಿಯಲ್ಲಿ 2 ಕೋಟಿ 53 ಲಕ್ಷದ 58 ಸಾವಿರ ಸಂಗ್ರಹ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?