• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಇಂಡಿಯಾ ಪಾಕಿಸ್ತಾನ್ ಕದನಕ್ಕೆ ಫಿಕ್ಸ್ ಆಯ್ತಾ ಮುಹೂರ್ತ !?
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಕ್ರೀಡೆ > ಇಂಡಿಯಾ ಪಾಕಿಸ್ತಾನ್ ಕದನಕ್ಕೆ ಫಿಕ್ಸ್ ಆಯ್ತಾ ಮುಹೂರ್ತ !?
ಕ್ರೀಡೆದೇಶ

ಇಂಡಿಯಾ ಪಾಕಿಸ್ತಾನ್ ಕದನಕ್ಕೆ ಫಿಕ್ಸ್ ಆಯ್ತಾ ಮುಹೂರ್ತ !?

admin
Last updated: 2023/06/01 at 1:39 PM
admin
Share
2 Min Read
SHARE

ಲಖನೌ : ಬದ್ಧವೈರಿಗಳಾದ ಪಾಕಿಸ್ತಾನ ಮತ್ತು ಭಾರತ ಮಧ್ಯೆ ಮತ್ತೆ ಕ್ರಿಕೆಟ್ ನಡೆಯಬಹುದು ಎನ್ನುವ ಸಾಧ್ಯತೆಯ ಸುದ್ದಿ ಸುಳಿದಾಡುತ್ತಿದೆ.

ಅಕ್ಟೋಬರ್- ನವೆಂಬರ್ ನಲ್ಲಿ ಭಾರತ ಆಯೋಜಿಸುವ ಐಸಿಸಿ ವಿಶ್ವಕಪ್ ಪಂದ್ಯಾವಳಿಯಲ್ಲಿ ನೆರೆರಾಷ್ಟ್ರ ಪಾಕಿಸ್ತಾನ ಭಾಗವಹಿಸುವ ಸಂಭವ ಇದ್ದು, ಉತ್ತರಪ್ರದೇಶದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣ ಮದಗಜಗಳ ನಡುವಿನ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ ಎಂದು ತಿಳಿದುಬಂದಿದೆ.

ಇದು ಘಟಿಸಿದ್ದೇ ಆದಲ್ಲಿ ದಶಕಗಳ ಬಳಿಕ ಉಭಯ ರಾಷ್ಟ್ರಗಳ ಮಧ್ಯೆ ಭಾರತದಲ್ಲಿ ಕ್ರಿಕೆಟ್ ಪಂದ್ಯ ನಡೆದಂತಾಗುತ್ತದೆ.ಪಾಕ್ ಗೆ ತೆರಳಿದ ಐಸಿಸಿ ಅಧಿಕಾರಿಗಳು: ಭಾರತದಲ್ಲಿ ನಡೆಯುವ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿರುವ ಪಾಕಿಸ್ತಾನದ ನಿರ್ಧಾರದ ಖಚಿತತೆಗಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಮತ್ತು ಸಿಇಒ ಜೆಫ್ ಅಲ್ಲಾರ್ಡಿಸ್ ಈಗಾಗಲೇ ಲಾಹೋರ್‍ಗೆ ತೆರಳಿದ್ದಾರೆ.

ಭಾರತ ಪ್ರವಾಸಕ್ಕೆ ಪಾಕಿಸ್ತಾನ ಒಪ್ಪಿಕೊಂಡಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯಗಳನ್ನು ಉತ್ತರಪ್ರದೇಶದ ಲಖನೌನ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಸಲು ಯೋಜಿಸಲಾಗಿದೆ.
ಮೈದಾನದ ಸಿದ್ಧತಾ ಕಾರ್ಯ ಶುರು: ಭಾರತ ಪ್ರವಾಸಕ್ಕಾಗಿ ಐಸಿಸಿ ಅಧಿಕಾರಿಗಳಿಂದ ಪಾಕಿಸ್ತಾನದ ಮನವೊಲಿಕೆ ಚಾಲ್ತಿಯಲ್ಲಿದ್ದು, ಒಂದು ವೇಳೆ ಆ ದೇಶ ಒಪ್ಪಿಕೊಂಡಲ್ಲಿ ಪಂದ್ಯಗಳ ಆಯೋಜನೆಗೆ ಲಖನೌ ಕ್ರೀಡಾಂಗಣ ಆಡಳಿತ ಮಂಡಳಿಗೆ ಸೂಚಿಸಲಾಗಿದೆ.

ಬಿಸಿಸಿಐ ನೀಡಿದ ಮಾಹಿತಿಯ ಹಿನ್ನೆಲೆಯಲ್ಲಿ ಮೈದಾನದ ಸಿದ್ಧತೆ ಆರಂಭಿಸಲಾಗಿದೆ ಎಂದು ತಿಳಿದುಬಂದಿದೆ.
ಏನಿದು ಜಟಾಪಟಿ?: ಪಾಕಿಸ್ತಾನದಲ್ಲಿ ಈ ವರ್ಷವೇ ನಡೆಯುವ ಏಷ್ಯಾ ಕಪ್ ನಲ್ಲಿ ಭಾರತ ಭದ್ರತಾ ಕಾರಣಗಳಿಗಾಗಿ ಭಾಗವಹಿಸಲ್ಲ ಎಂದು ಹೇಳಿದೆ. ಇದರಿಂದ ಕೆರಳಿರುವ ಪಾಕಿಸ್ತಾನ ಹಾಗಾದಲ್ಲಿ ನಮ್ಮ ತಂಡವನ್ನೂ ವಿಶ್ವಕಪ್ ನಲ್ಲಿ ಆಡಲು ಭಾರತಕ್ಕೆ ಕಳುಹಿಸುವುದಿಲ್ಲ ಎಂದು ಗುಟುರು ಹಾಕಿದೆ. ಏಷ್ಯಾಕಪ್? ಪಂದ್ಯಾವಳಿಯನ್ನು ತಟಸ್ಥ ಅಥವಾ ಶ್ರೀಲಂಕಾದಲ್ಲಿ ನಡೆಸುವಂತೆ ಏಷ್ಯಾ ಕ್ರಿಕೆಟ್ ಸಂಸ್ಥೆಗೆ ಬಿಸಿಸಿಐ ತಿಳಿಸಿದೆ.

ಪಾಕಿಸ್ತಾನ ಕೂಡ ವಿಶ್ವಕಪ್ ನ ತನ್ನ ಪಂದ್ಯಗಳನ್ನು ಹೈಬ್ರೀಡ್ ಜಾಗದಲ್ಲಿ ಆಡಿಸಲು ಕೋರುತ್ತಿದೆ.
ಬಿಸಿಸಿಐ ಶೀಘ್ರದಲ್ಲೇ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಅಕ್ಟೋಬರ್ 5 ರಿಂದ ಟೂರ್ನಿ ಆರಂಭವಾಗಿ ನವೆಂಬರ್ 19 ರಂದು ಕೊನೆಗೊಳ್ಳಲಿದೆ. 46 ದಿನಗಳಲ್ಲಿ ಒಟ್ಟು 48 ಪಂದ್ಯಗಳು ನಡೆಯಲಿವೆ. ಲಖನೌ ಅಲ್ಲದೇ, ನಾಗ್ಪುರ, ಬೆಂಗಳೂರು, ತಿರುವನಂತಪುರಂ, ಮುಂಬೈ, ದೆಹಲಿ, ಗುವಾಹಟಿ, ಹೈದರಾಬಾದ್, ಕೋಲ್ಕತ್ತಾ, ರಾಜ್ ಕೋಟ್ ಇಂದೋರ್, ಮೊಹಾಲಿ ಮತ್ತು ಧರ್ಮಶಾಲಾ ಮೈದಾನದಲ್ಲಿ ಪಂದ್ಯಗಳನ್ನು ಆಯೋಜಿಸಲಾಗುತ್ತದೆ ಎಂದು ತಿಳಿದುಬಂದಿದೆ

You Might Also Like

ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ : ದೇಶದ ಜನರಿಗೆ ಮೋದಿ ಮನವಿ

ನಾಳೆ ಮಧ್ಯಾಹ್ನ 3ಕ್ಕೆ ಲೋಕಸಭೆ ಚುನಾವಣೆ ದಿನಾಂಕ ಪ್ರಕಟಿಸಲಿರುವ ಚುನಾವಣಾ ಆಯೋಗ

ಇಂದು ಪ್ಲೇಆಫ್‌ ಪಂದ್ಯ, ಆರ್‌ಸಿಬಿ -ಮುಂಬೈ ಇಂಡಿಯನ್ಸ್ ಮುಖಾಮುಖಿ

ಮುಂದಿನ 10 ವರ್ಷಗಳು ಮೋದಿಯೇ ಪ್ರಧಾನಿ : ಅಮಿತ್ ಶಾ

ಲೋಕ ಮಹಾ ಸಮರ: ಇಂದು ಬಿಜೆಪಿಯ 125 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ? 

TAGGED: cricket india Pakistan bcci icc cricket match
admin June 1, 2023
Share this Article
Facebook Twitter Whatsapp Whatsapp LinkedIn Copy Link
Previous Article ಚಾಮರಾಜನಗರದ ಭೋಗಪುರದ ಬಳಿ ವಿಮಾನ ಪತನ
Next Article ಕಾವೇರಿಯಿಂದ ಧವಳಗಿರಿಗೆ ಯಡಿಯೂರಪ್ಪ ಶಿಫ್ಟ್
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?