• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಮೋದಿ ಸ್ಟೇಡಿಯಂನಲ್ಲಿ ಇಂಡಿಯಾ ಪಾಕಿಸ್ತಾನ್ ವಿಶ್ವಕಪ್ ಕದನ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಕ್ರೀಡೆ > ಮೋದಿ ಸ್ಟೇಡಿಯಂನಲ್ಲಿ ಇಂಡಿಯಾ ಪಾಕಿಸ್ತಾನ್ ವಿಶ್ವಕಪ್ ಕದನ
ಕ್ರೀಡೆದೇಶ

ಮೋದಿ ಸ್ಟೇಡಿಯಂನಲ್ಲಿ ಇಂಡಿಯಾ ಪಾಕಿಸ್ತಾನ್ ವಿಶ್ವಕಪ್ ಕದನ

admin
Last updated: 2023/06/12 at 12:18 PM
admin
Share
2 Min Read
SHARE

ಮುಂಬೈ :  ಅಕ್ಟೋಬರ್‌ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಗೆ BCCI ಸಿದ್ಧಪಡಿಸಿದ ಕರಡು ವೇಳಾಪಟ್ಟಿಯನ್ನು ICCಯೊಂದಿಗೆ ಹಂಚಿಕೊಂಡಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದಿನ ಅಕ್ಟೋಬರ್ 15 ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮತ್ತೊಮ್ಮೆ ಸೆಣಸಲಿವೆ.

ಟಿ20 ಏಷ್ಯಾಕಪ್ ಹಾಗೂ ಟಿ20 ವಿಶ್ವಕಪ್ ಟೂರ್ನಿಗಳ ಬಳಿಕ ಮತ್ತೊಮ್ಮೆ ಭಾರತ-ಪಾಕಿಸ್ತಾನದ (Ind vs Pak) ರಣರೋಚಕ ಪಂದ್ಯವನ್ನ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಹಾತೊರೆಯುತ್ತಿದ್ದಾರೆ. 

ಬಿಸಿಸಿಐ ಕರಡು ವೇಳಾಪಟ್ಟಿ ಪ್ರಕಾರ, ಅಕ್ಟೋಬರ್ 8ರಂದು ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಭಾರತ ತನ್ನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಅಕ್ಟೋಬರ್ 15 ರಂದು ಪಾಕ್ ವಿರುದ್ಧ ಅಹಮದಾಬಾದ್‌ನ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ಕಣಕ್ಕಿಳಿದು ಅಬ್ಬರಿಸಲಿದೆ. ಮುಂದಿನ ವಾರದಲ್ಲೇ ಅಂತಿಮ ವೇಳಾಪಟ್ಟಿ ಪ್ರಕಟವಾಗಲಿದ್ದು, ಅದಕ್ಕೂ ಮುನ್ನ ಭಾಗವಹಿಸುವ ದೇಶಗಳಿಗೆ ಪ್ರತಿಕ್ರಿಯೆಗಾಗಿ ಕಳುಹಿಸಲಾಗಿದೆ

ಅಕ್ಟೋಬರ್ 5 ರಿಂದ ಏಕದಿನ ವಿಶ್ವಕಪ್ ಟೂರ್ನಿ ಆರಂಭವಾಗಲಿದ್ದು, ಅಹಮದಾಬಾದ್‌ನಲ್ಲಿ ಹಾಲಿ ಚಾಂಪಿಯನ್ಸ್ ಇಂಗ್ಲೆಂಡ್ ಹಾಗೂ ಕಳೆದ ಆವೃತ್ತಿಯಲ್ಲಿ ರನ್ನರ್ ಅಪ್ ಪ್ರಶಸ್ತಿ ಪಡೆದ ನ್ಯೂಜಿಲೆಂಡ್ ತಂಡಗಳ ನಡುವೆ ಮೊದಲ ಪಂದ್ಯ ನಡೆಯಲಿದೆ. ನವೆಂಬರ್ 19ರಂದು ಫೈನಲ್ ಪಂದ್ಯಕ್ಕೂ ಮೋದಿ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಆದರೆ ನವೆಂಬರ್ 15 ಮತ್ತು 16 ರಂದು ನಡೆಯಲಿರುವ ಸೆಮಿಫೈನಲ್ ಪಂದ್ಯಗಳ ಸ್ಥಳಗಳನ್ನೂ ಇನ್ನೂ ನಿರ್ಧರಿಸಲಾಗಿಲ್ಲ

ಕೊನೆಯದ್ದಾಗಿ 2011ರಲ್ಲಿ ಸ್ವದೇಶದಲ್ಲಿ ವಿಶ್ವಕಪ್ ಗೆದ್ದ ಅತಿಥೇಯ ಭಾರತ ಕೋಲ್ಕತ್ತಾ, ಮುಂಬೈ, ದೆಹಲಿ ಹಾಗೂ ಬೆಂಗಳೂರು ಸೇರಿದಂತೆ 9 ನಗರಗಳಲ್ಲಿ ಲೀಗ್ ಹಂತದ ಪಂದ್ಯಗಳನ್ನ ಆಡಲಿದೆ. ಪಾಕಿಸ್ತಾನ ಭಾರತದ 5 ನಗರಗಳಲ್ಲಿ ಲೀಗ್ ಪಂದ್ಯಗಳನ್ನಾಡಲಿದೆ. ಈ ನಡುವೆ ಅಕ್ಟೋಬರ್ 15 ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ಮೋದಿ ಅಂಗಳದಲ್ಲಿ ಮುಖಾಮುಖಿಯಾಗಲಿವೆ

ಟೂರ್ನಿಯಲ್ಲಿ ಒಟ್ಟು 10 ತಂಡಗಳು ಭಾಗವಹಿಸಲಿವೆ. ಈ ಪೈಕಿ 8 ತಂಡಗಳನ್ನು ಈಗಾಗಲೇ ನಿರ್ಧರಿಸಲಾಗಿದ್ದು, ಇನ್ನೆರಡು ತಂಡಗಳು ಅರ್ಹತಾ ಸುತ್ತಿನ ಮೂಲಕ ಮುಖ್ಯ ಟೂರ್ನಿಗೆ ಅರ್ಹತೆ ಪಡೆಯಲಿವೆ.

ಯಾವ ಸ್ಥಳದಲ್ಲಿ ಆಯೋಜನೆ?
ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕ್ರಿಕೆಟ್‌ಗೆ ಬಿಸಿಸಿಐ 12 ಕ್ರೀಡಾಂಗಣವನ್ನು ಅಂತಿಮಗೊಳಿಸಿದೆ. ಅದರಂತೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ, ಬೆಂಗಳೂರು, ಚೆನ್ನೈ, ದೆಹಲಿ, ಧರ್ಮಶಾಲಾ, ಗುವಾಹಟಿ, ಹೈದರಾಬಾದ್, ಕೋಲ್ಕತ್ತಾ, ಲಕ್ನೋ, ಇಂದೋರ್, ರಾಜ್‌ಕೋಟ್ ಮತ್ತು ಮುಂಬೈನಲ್ಲಿ ಪಂದ್ಯ ನಡೆಯಲಿದೆ.

ಟೀಂ ಇಂಡಿಯಾದ ತಾತ್ಕಾಲಿಕ ವೇಳಾಪಟ್ಟಿ
ಅಕ್ಟೋಬರ್‌ 8: ಭಾರತ Vs ಆಸ್ಟ್ರೇಲಿಯಾ – ಸ್ಥಳ: ಚೆನ್ನೈ
ಅಕ್ಟೋಬರ್‌ 11: ಭಾರತ Vs ಅಫ್ಘಾನಿಸ್ತಾನ – ಸ್ಥಳ: ನವದೆಹಲಿ
ಅಕ್ಟೋಬರ್‌ 15: ಭಾರತ Vs ಪಾಕಿಸ್ತಾನ – ಸ್ಥಳ: ಅಹಮದಾಬಾದ್‌
ಅಕ್ಟೋಬರ್‌ 19: ಭಾರತ Vs ಬಾಂಗ್ಲಾದೇಶ – ಸ್ಥಳ: ಪುಣೆ
ಅಕ್ಟೋಬರ್‌ 22: ಭಾರತ Vs ನ್ಯೂಜಿಲೆಂಡ್‌ – ಸ್ಥಳ: ಧರ್ಮಶಾಲಾ
ಅಕ್ಟೋಬರ್‌ 29: ಭಾರತ Vs ‌ಇಂಗ್ಲೆಂಡ್‌ – ಸ್ಥಳ: ಲಕ್ನೋ
ನವೆಂಬರ್‌ 2: ಭಾರತ Vs ಕ್ವಾಲಿಫೈಯರ್ – ಸ್ಥಳ: ಮುಂಬೈ
ನವೆಂಬರ್‌ 5: ಭಾರತ Vs ದಕ್ಷಿಣ ಆಫ್ರಿಕಾ – ಸ್ಥಳ: ಕೋಲ್ಕತ್ತಾ
ನಂವೆಬರ್‌ 11: ಭಾರತ Vs ಕ್ವಾಲಿಫೈಯರ್‌ – ಸ್ಥಳ: ಬೆಂಗಳೂರು

You Might Also Like

ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ : ದೇಶದ ಜನರಿಗೆ ಮೋದಿ ಮನವಿ

ನಾಳೆ ಮಧ್ಯಾಹ್ನ 3ಕ್ಕೆ ಲೋಕಸಭೆ ಚುನಾವಣೆ ದಿನಾಂಕ ಪ್ರಕಟಿಸಲಿರುವ ಚುನಾವಣಾ ಆಯೋಗ

ಇಂದು ಪ್ಲೇಆಫ್‌ ಪಂದ್ಯ, ಆರ್‌ಸಿಬಿ -ಮುಂಬೈ ಇಂಡಿಯನ್ಸ್ ಮುಖಾಮುಖಿ

ಮುಂದಿನ 10 ವರ್ಷಗಳು ಮೋದಿಯೇ ಪ್ರಧಾನಿ : ಅಮಿತ್ ಶಾ

ಲೋಕ ಮಹಾ ಸಮರ: ಇಂದು ಬಿಜೆಪಿಯ 125 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ? 

TAGGED: cricket world cup rohitsharma viratkohli india Pakistan cricket match
admin June 12, 2023
Share this Article
Facebook Twitter Whatsapp Whatsapp LinkedIn Copy Link
Previous Article ಹೊಸ ಮನೆ ಬಾಡಿಗೆ ಮನೆ ಎಲ್ಲರಿಗೂ ವಿದ್ಯುತ್ ಫ್ರೀ ಜಾರ್ಜ್ ಸ್ಪಷ್ಟನೆ
Next Article ಅಭಿಷೇಕ್ ಅಂಬರೀಶ್ ಬೀಗರ ಊಟಕ್ಕೆ ಮಂಡ್ಯದಲ್ಲಿ ಭರ್ಜರಿ ಸಿದ್ಧತೆ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?