• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಸಾವಿರಾರು ಮಂದಿ ಅನ್ನ ಭಾಗ್ಯದಿಂದ ದೂರು !?
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಆಹಾರ > ಸಾವಿರಾರು ಮಂದಿ ಅನ್ನ ಭಾಗ್ಯದಿಂದ ದೂರು !?
ಆಹಾರಜಿಲ್ಲೆರಾಜ್ಯ

ಸಾವಿರಾರು ಮಂದಿ ಅನ್ನ ಭಾಗ್ಯದಿಂದ ದೂರು !?

admin
Last updated: 2023/06/14 at 2:57 AM
admin
Share
2 Min Read
SHARE

ಮೈಸೂರು: ಮೈಸೂರಿನಿಂದಲೇ ಅನಭಾಗ್ಯಕ್ಕೆ ಜು.೧ರಿಂದ ಚಾಲನೆ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಆದರೆ, ಈಗಾಗಲೇ ಅರ್ಜಿ ಸಲ್ಲಿಸಿರುವ ಹಾಗೂ ಅರ್ಜಿ ಸಲ್ಲಿಸಲು ನಿತ್ಯ ಅಲೆದಾಡುತ್ತಿರುವ ಸಾವಿರಾರು ಮಂದಿ ಜಿಲ್ಲೆಯಲ್ಲೇ ಅನ್ನಭಾಗ್ಯದ ಯೋಜನೆಯಿಂದಲೇ ದೂರ ಉಳಿಯುವಂತಾಗಿದೆ.

ರಾಜ್ಯದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯ ಅವರ ನೆಚ್ಚಿನ ಯೋಜನೆ ಎಂದರೆ ಅನ್ನಭಾಗ್ಯ ಯೋಜನೆಯಾಗಿದೆ. ರಾಜ್ಯದ ಯಾರೊಬ್ಬರೂ ಹಸಿವಿನಿಂದ ಮಲಗಬಾರದು ಎಂಬ ಉದ್ದೇಶದಿಂದ ಯೋಜನೆ ಜಾರಿಗೊಳಿಸುತ್ತಿರುವುದಾಗಿ ಅನೇಕ ಬಾರಿಯೂ ಹೇಳಿಕೊಂಡಿದ್ದಾರೆ. ಆದರೆ, ಜಿಲ್ಲೆಯಲ್ಲಿ ಅನೇಕರು ಅನ್ನಭಾಗ್ಯದಿಂದಲೇ ವಂಚಿತರಾಗಿದ್ದಾರೆ. ಇದಕ್ಕೆ ಚುನಾವಣಾ ಘೋಷಣೆ ಹಿನ್ನೆಲೆಯಲ್ಲಿ ಸ್ಥಗಿತವಾಗಿರುವ ನೂತನ ಪಡಿತರ ವಿತರಣೆ ಕಾರ್ಯ ಇಂದಿಗೂ ಮರುಚಾಲನೆಗೊಂಡಿಲ್ಲ. ಅಲ್ಲದೆ, ಹೊಸ ಪಡಿತರಕ್ಕೆ ಅರ್ಜಿ ಪ್ರಾರಂಭವಾಗಿದೆ ಎಂದು ಇಲಾಖಾಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಸರ್ವರ್‌ ಸಿಗದ ಹಿನ್ನೆಲೆಯಲ್ಲಿ ನೂತನ ಅರ್ಜಿ ಸಲ್ಲಿಕೆಗೂ ಅವಕಾಶ ಸಿಗುತ್ತಿಲ್ಲ ಎಂಬುದು ಫಲಾನುಭವಿಗಳ ಅಳಲು.

ಜಿಲ್ಲೆಯಲ್ಲಿ ಒಟ್ಟು ೬೬೦೮೭೫ ಆದ್ಯತಾ ಪಡಿತರ ಚೀಟಿಗಳಿದ್ದು, ೨೦೮೨೮೦೪ ಫಲಾನುಭವಿಗಳಿದ್ದಾರೆ. ೫೦೪೧೦ ಅಂತ್ಯೋದಯ ಪಡಿತರ ಚೀಟಿಗಳಿದ್ದು, ೨೧೭೧೫೨ ಅಂತ್ಯೋದಯ ಫಲಾನುಭವಿಗಳಿದ್ದಾರೆ. ೧೦೯೪೭೮ ಆದ್ಯತೇತರ(ಎಪಿಎಲ್‌) ಪಡಿತರ ಚೀಟಿಗಳಿದ್ದು, ೨೦೮೨೮೦೪ ಫಲಾನುಭವಿಗಳಿದ್ದಾರೆ. ಮಾತ್ರವಲ್ಲದೆ, ಜಿಲ್ಲೆಯಲ್ಲಿ 13,326 ಮಂದಿ ಹೊಸ ಪಡಿತರ ಚೀಟಿಗಾಗಿ ಅರ್ಜಿಸಲ್ಲಿಸಿದ್ದು, ಈ ಪೈಕಿ 711 ಮಂದಿ ತಮ್ಮ ಅರ್ಜಿಯನ್ನು ಹಿಂಪಡೆದಿದ್ದಾರೆ. ಇದರಲ್ಲಿ ಅಧಿಕಾರಿಗಳು ಅರ್ಜಿದಾರರ ಸ್ಥಳ ಪರಿಶೀಲನೆ ನಡೆಸಿ 7,178 ಹೊಸ ರೇಷನ್ ಕಾರ್ಡ್‌ಗಳಿಗೆ ಅನುಮೋದನೆ ನೀಡಿದ್ದು, ಬೇರೆ ಬೇರೆ ಕಾರಣಗಳಿಗಾಗಿ 5,437 ಅರ್ಜಿಗಳನ್ನು ತಿರಸ್ಕರಿಸಿದ್ದಾರೆ.

5,520 ಪಡಿತರ ಚೀಟಿಗಳನ್ನು ಮುದ್ರಣಕ್ಕೆ ಕಳುಹಿಸಿದ್ದು, ಇದರಲ್ಲಿ ಈವರೆಗೆ ಅರ್ಜಿದಾರರ ಕೈ ಸೇರಿರುವ ಹೊಸ ಪಡಿತರ ಚೀಟಿಗಳ ಸಂಖ್ಯೆ 51 ಮಾತ್ರವೇ ಆಗಿದೆ.
ಇನ್ನೂ ಚುನಾವಣೆ ದಿನಾಂಕ ಘೋಷಣೆಯ ವೇಳೆ ಪಡಿತರ ವಿತರಣೆ ಹಾಗೂ ಅರ್ಜಿ ಸಲ್ಲಿಕೆ ಕಾರ್ಯ ಸ್ಥಗಿತಗೊಂಡಿರುವುದು ಇದುವರೆವಿಗೂ ಮರಳಿ ಚಾಲನೆ ದೊರೆತಿಲ್ಲ. ಅನ್ನಭಾಗ್ಯ ವಿತರಣೆಗೆ ಎಲ್ಲೆಡೆ ಸಿದ್ಧತೆ ನಡೆಸಿರುವ ಹಿನ್ನೆಲೆಯಲ್ಲಿ ಅನೇಕರು ಅನ್ನಭಾಗ್ಯದ ಸೌಲಭ್ಯ ಪಡೆಯಲು ಸಾಮಾನ್ಯ ಸೇವಾಕೇಂದ್ರ, ಕರ್ನಾಟಕ ಒನ್‌ ಸೇರಿ ಅನೇಕ ಕಡೆಗಳಿಗೆ ಅಲೆದಾಡುತ್ತಿದ್ದಾರೆ. ಆದರೆ, ಇದುವರೆವಿಗೂ ಅರ್ಜಿ ಸಲ್ಲಿಕೆಯ ಸರ್ವರ್‌ ಓಪನ್‌ ಆಗಿಲ್ಲ.

ಹೀಗಾಗಿ ಹೊಸ ಅರ್ಜಿ ಸಲ್ಲಿಕೆಯೂ ಆಗಿಲ್ಲ. ಮಾತ್ರವಲ್ಲದೆ, ಈಗಾಗಲೇ ಅರ್ಜಿ ಸಲ್ಲಿಸಿರುವ ಹೊಸ ಕಾರ್ಡ್‌ಗಳು ಮುದ್ರಿತವಾಗಿ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಇಂದಿಗೂ ಅನ್ನಭಾಗ್ಯಕ್ಕೆ ಹೊಸಬರು ಅಲೆದಾಡುವ ಪರಿಸ್ಥಿತಿ ತಪ್ಪಿಲ್ಲ.
ಸಿಎಂ ಸಭೆಯಲ್ಲೂ ಸಿಗದ ಸ್ಪಂದನೆ
ಇನ್ನೂ ಮೊನ್ನೆ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ಜಿ.ಟಿ.ದೇವೇಗೌಡ ಅವರು ಇಂದಿಗೂ ಪಡಿತರಕ್ಕಾಗಿ ಜನರು ಅಲೆದಾಡುತ್ತಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಈ ಹಿನ್ನೆಲೆಯಲ್ಲಿ ಸಭೆಗೆ ಮಾಹಿತಿ ನೀಡಿದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕಿ ೨೦೧೧ರ ಜನಗಣತಿ ಪ್ರಕಾರ ೭ಲಕ್ಷ ಕುಟುಂಬಗಳಿಗೆ ಪಡಿತರ ವಿತರಿಸಿದ್ದು, ಶೇ.೧೦೧ರಷ್ಟು ಆಧಾರ್‌ ನೊಂದಣಿ ಕಾರ್ಯ ಆಗಿರುವುದಾಗಿ ಮಾಹಿತಿ ನೀಡಿದರು. ಅಂತೆಯೇ ಹೊಸ ಅರ್ಜಿಯನ್ನು ಹಾಕಲು ಅವಕಾಶ ನೀಡಿರುವುದಾಗಿ ಹೇಳಿದರು. ಆದರೆ, ಮುದ್ರಣಕ್ಕೆ ಹೋಗಿರುವ ಪಡಿತರ ಚೀಟಿ, ಹೊಸ ಪಡಿತರಕ್ಕೆ ಸಲ್ಲಿಸಬೇಕಾದ ಅರ್ಜಿ ವೆಬ್‌ಸೈಟ್‌ ಮುಚ್ಚಿರುವ ಬಗ್ಗೆ ಯಾವುದೇ ಚರ್ಚೆಯೂ ಆಗಲಿಲ್ಲ.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: bjp congress jds dkshivakumar siddaramiah Yadiyurappa prathapsimha hvishwanath congressoffice mysuru
admin June 14, 2023
Share this Article
Facebook Twitter Whatsapp Whatsapp LinkedIn Copy Link
Previous Article ಖಳ ನಟ ಕಜನ್ ಖಾನ್ ಹೃದಯಾಘಾತದಿಂದ ನಿಧನ
Next Article ಮಾಲೀಕರ ಗಮನ ಬೇರೆಡೆ ಸೆಳೆದು 1.30 ಲಕ್ಷ ದೋಚಿದ ಕಳ್ಳರು
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?