ಮೈಸೂರು : ಜಿಲ್ಲೆಯ ಹುಣಸೂರು ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಮಾರುತಿ ಬಡಾವಣೆ ಮತ್ತು ಮಂಜುನಾಥ ಬಡಾವಣೆಗಳಲ್ಲಿ ರಾತ್ರಿ ಕಳವು ಪ್ರಕರಣಗಳನ್ನು ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸಂಬಂಧ ಹುಣಸೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಮೇ ತಿಂಗಳಲ್ಲಿ ನಾಲ್ಕು ಪ್ರಕರಣಗಳು ವರದಿಯಾಗಿದ್ದವು.
ಈ ಪ್ರಕರಣಗಳ ಪತ್ತೆ ಸಲುವಾಗಿ ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸೀಮಾ ಲಾಟ್ಕರ್ ಐಪಿಎಸ್ ರವರ ಸೂಚನೆಯಂತೆ, ಡಾ.ನಂದಿನಿ, ಬಿನ್.ಎನ್, ಅಪರ ಪೊಲೀಸ್ ಅಧೀಕ್ಷಕರು, ಮೈಸೂರು ಜಿಲ್ಲೆ ರವರ ಮಾರ್ಗದರ್ಶನದಲ್ಲಿ, ಎಂ.ಕೆ.ಮಹೇಶ್ ಹುಣಸೂರು ಉಪವಿಭಾಗರವರ ನೇತೃತ್ವದಲ್ಲಿ, ದೇವೇಂದ್ರ ಎಸ್.ಎಂ. ಪೊಲೀಸ್ ನಿರೀಕ್ಷಕರು ಹುಣಸೂರು ಟೌನ್ ಪೊಲೀಸ್ ಠಾಣೆ ರವರನ್ನು ಒಳಗೊಂಡ ತಂಡವನ್ನು ರಚಿಸಿದ್ದರು.
ಈ ತಂಡವು 3 ಜನ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದು, ವಿಚಾರಣೆಯಲ್ಲಿ ಆರೋಪಿಗಳು ಹುಣಸೂರು ಪಟ್ಟಣ ಪೊಲೀಸ್ ಠಾಣೆಯ 15 ಪ್ರಕರಣ, ಪಿರಿಯಾಪಟ್ಟಣ ಪೊಲೀಸ್ ಠಾಣೆಯ 01 ಪ್ರಕರಣ ಹಾಗೂ ಕೆ.ಆರ್.ನಗರ ಪೊಲೀಸ್ ಠಾಣೆಯ 01 ಪ್ರಕರಣ, ಮೈಸೂರು ಜಿಲ್ಲೆಯಲ್ಲಿ ವರದಿಯಾಗಿದ್ದ ಒಟ್ಟು 07 ಪ್ರಕರಣಗಳಲ್ಲಿ ಭಾಗಿಯಾಗಿರುವುದು ಕಂಡು ಬಂದಿದ್ದು, ಆರೋಪಿಗಳಿಂದ 18 ಲಕ್ಷ ಮೌಲ್ಯದ (1) 289 ಗ್ರಾಂ ಚಿನ್ನಾಭರಣ (2) 2.4 ಕೆ.ಜಿ ಬೆಳ್ಳಿ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಈ ಮೂರು ಆರೋಪಿಗಳು ಈ ಹಿಂದೆ ಬೇರೆ ಬೇರೆ ಜಿಲ್ಲೆಗಳಲ್ಲಿ ವರದಿಯಾದ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಶಿಕ್ಷೆ ಅನುಭವಿಸಿದವರಾಗಿರುತ್ತಾರೆ.
ಈ ಆರೋಪಿಗಳ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದ ಎಸ್.ಎಂ.ದೇವೇಂದ್ರ, ಪೊಲೀಸ್ ನಿರೀಕ್ಷಕರು, ಹುಣಸೂರು ಪಟ್ಟಣ ಠಾಣೆ ಹಾಗೂ ಎ.ಎಸ್.ಐ ಪುಟ್ಟನಾಯಕ ಹಾಗೂ ಸಿಬ್ಬಂದಿಗಳಾದ ಹೆಚ್.ಎನ್.ಅರುಣ್, ಆ ಪ್ರಭಾಕರ್, ಡಿ.ಎ.ಇರ್ಫಾನ್, ಎಸ್.ಎ.ಮನೋಹರ, ರಘು, ಜಿ.ಕೆ.ಮಂಜುನಾಥ, ಅಹಮ್ಮದ್ ಆಲಿ, ನಾಗೇಂದ್ರ, ಆಲೀಂ ಪಾಪ, ತಿರುಮಲ್ಲೇಶ್, ವಸಂತಕುಮಾರ್, ಸತೀಶ್, ಲಿಂಗರಾಜಯ್ಯ ರವರುಗಳ ಕಾರ್ಯವನ್ನು ಎಸ್ಪಿ ಸೀಮಾ ಲಾಟ್ಕರ್ ಶ್ಲಾಘಿಸಿದರು