ಮೈಸೂರು : ಮೈಸೂರಿನ ನೂತನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಡಾ.ರಾಜೇಂದ್ರ ಮತ್ತು ನಗರದ ಪೊಲೀಸ್ ಆಯುಕ್ತರಾದ ರಮೇಶ.ಬಿ ಅವರಿಂದ ಸುದ್ದಿಗೋಷ್ಠಿ ನಡೆಸಿದರು.
ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ವಿಶೇಷ ಸೂಚನೆ ನೀಡಿದ ಅವರು
ಭಕ್ತಾದಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಅನೇಕ ವ್ಯವಸ್ಥೆ ಮಾಡಲಾಗಿದೆ.
ನಗರದ ಲಲಿತಮಹಲ್ ಹೆಲಿಫ್ಯಾಡ್ ಸಮೀಪದಿಂದ ಸಾರ್ವಜನಿಕರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ.
ಲಲಿತಾ ಮಹಲ್ ಪ್ಯಾಲೇಸ ನ ಹೆಲಿಪ್ಯಾಡ್ ನಲ್ಲಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದರು.
ಸಾರ್ವಜನಿಕರಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ 50 ಮತ್ತು 300 ರೂಪಾಯಿ ಟಿಕೆಟ್ ವಿತರಣೆ ಮಾಡಲಾಗುತ್ತದೆ. ಪ್ಲಾಸ್ಟಿಕ್ ಮುಕ್ತವಾದ ಆಷಾಡಮಾಸ ಆಚರಣೆ ಮಾಡಲು ಸಿದ್ಧತೆ ನಡೆಸಿದ್ದೇವೆ.
ಎಲ್ಲಂದರಲ್ಲಿ ಪ್ಲಾಸ್ಟಿಕ್ ಬಿಸಾಡಿದವರಿಗೆ ದಂಡ ಬೀಳಲಿದೆ.
ಮೆಟ್ಟಿಲುಗಳು ಮತ್ತು ದೇವಸ್ಥಾನ ಸೇರಿದಂತೆ ಅನೇಕ ಭಾಗಗಳಲ್ಲಿ ಕ್ಯಾಮೆರಗಳ ಅಳವಡಿಕೆ ಮಾಡಲಾಗುತ್ತಿದೆ.
ಚಾಮುಂಡಿ ಬೆಟ್ಟಕ್ಕೆ ಹೊರಡುವ ಸಾರ್ವಜನಿಕರ ವಾಹನಗಳಿಗೆ ಸಂಪೂರ್ಣ ನಿಷೇಧ ಹೇರಿದ್ದೇವೆ ಎಂದರು.
ಬಸ್ ನಲ್ಲಿ ಮಾತ್ರ ಪ್ರಯಾಣ ಮಾಡಬೇಕು.
ಫುಡ್ ಪಾಯಿಸನ್ ಆಗುವ ಸಾಧ್ಯತೆ ಹಿನ್ನೆಲೆ.
ಪ್ರಸಾದ ಕೌಂಟರ್ ಗಳಲ್ಲಿ ಫುಡ್ ಸೇಫ್ಟಿ ಆಫೀಸರ್ಸ್ ಗಳ ತಂಡ ಇರುತ್ತದೆ.
ದೊಡ್ಡ ಮಟ್ಟದಲ್ಲಿ ಪ್ರಸಾದ ವಿತರಣೆ ಮಾಡುವವರು ಫುಡ್ ಸೇಫ್ಟಿ ಆಫೀಸರ್ಸ್ ಬಳಿ ಸರ್ಟಿಫಿಕೇಟ್ ಪಡೆಯುವುದು ಕಡ್ಡಾಯ. 60 ವರ್ಷ ಮೇಲ್ಪಟ್ಟವರಿಗೆ ದೇವರ ದರ್ಶನಕ್ಕೆ ನೇರ ಅವಕಾಶ ಎಂದು ಸರ್ಕಾರ ಆದೇಶ ಮಾಡಿದೆ. ಈಗ ಸದ್ಯಕ್ಕೆ 50 ರೂಪಾಯಿ ಟಿಕೆಟ್ ಕೊಟ್ಟು ಹೋಗುವವರ ಸಾಲಿನಲ್ಲಿ ಅವರು ಉಚಿತವಾಗಿ ಹೋಗಬಹುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು