• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎಸುರಿಸಲು ಶಕ್ತವಾಗಿದೆ – ಸಿದ್ದರಾಮಯ್ಯ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಬೆಂಗಳೂರು ನಗರ > ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎಸುರಿಸಲು ಶಕ್ತವಾಗಿದೆ – ಸಿದ್ದರಾಮಯ್ಯ
ಜಿಲ್ಲೆಬೆಂಗಳೂರು ನಗರರಾಜಕೀಯರಾಜ್ಯ

ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎಸುರಿಸಲು ಶಕ್ತವಾಗಿದೆ – ಸಿದ್ದರಾಮಯ್ಯ

admin
Last updated: 2023/06/24 at 9:55 AM
admin
Share
2 Min Read
SHARE

– ಬೀಗ, ರಸಗೊಬ್ಬರ, ಔಷಧದ ಸಮೇತ ಕೃಷಿ ಇಲಾಖೆ ಸರ್ವ ಸನ್ನದ್ದವಾಗಿದೆ

ಬೆಂಗಳೂರು : ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸಲು ಶಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯದಲ್ಲಿ ಪ್ರಸ್ತುತ ಮಳೆ ಶುರುವಾಗಿದೆ. ಮಳೆ ಇನ್ನಷ್ಟು ವ್ಯಾಪಕವಾಗಿ ಆಗಬೇಕಿದೆ. ಮಳೆ ಬರಲಿ ಎಂದು ಪ್ರಾರ್ಥಿಸುತ್ತಿದ್ದು, ಬಿತ್ತನೆ ಈಗಾಗಲೇ ಕೆಲವೆಡೆ ಪ್ರಾರಂಭವಾಗಿದೆ. ಇನ್ನು ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ಇದ್ದು, ಈಗಾಗಲೇ 2 ಬಾರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ಕರೆದು ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

ಬಿತ್ತನೆಗೆ ಸಿದ್ಧ

ಮಳೆ ಯಾವಾಗ ಬಂದರೂ ಬಿತ್ತನೆ ಮಾಡಲು ತಯಾರಾಗಿದ್ದೇವೆ. ಕೃಷಿ ಇಲಾಖೆ ಬೀಜ, ಗೊಬ್ಬರ ಹಾಗೂ ಔಷಧಿಗಳನ್ನು ಸಂಗ್ರಹಿಸಿ ಸರ್ವಸನ್ನದ್ದವಾಗಿದೆ ಎಂದರು.

ಬಜೆಟ್ ನಂತರ ಪರಿಶೀಲನೆ

ಸಣ್ಣ ಕೈಗಾರಿಕೆಗಳು ಹಾಗೂ ಕಾಸಿಯಾ ಪ್ರತಿನಿಧಿಗಳೊಂದಿಗೆ ನಿನ್ನೆ ನಡೆದ ಚರ್ಚೆಯಲ್ಲಿ ಅವರು ತಮ್ಮ ಸಮಸ್ಯೆಗಳನ್ನು ತಿಳಿಸಿದ್ದಾರೆ. ಬಜೆಟ್ ಮಂಡನೆಯ ನಂತರ ಈ ಬಗ್ಗೆ ಪರಿಶೀಲಿಸುವ ಭರವಸೆ ನೀಡಲಾಗಿದೆ ಎಂದರು.

ಕೈಗಾರಿಕೆಗಳಿಗೆ ಒಂಭತ್ತು ತಿಂಗಳ ವಿದ್ಯುತ್ ತೆರಿಗೆ ವಿಧಿಸಲಾಗಿದೆ. ಇದರಿಂದ ತಮಗೆ ಹೊರೆಯಾಗಿದೆ ಎಂದು ಕೈಗಾರಿಕೋದ್ಯಮಿಗಳು ತಿಳಿಸಿದ್ದಾರೆ. ದರ ಪರಿಷ್ಕರಣೆ ನಮ್ಮ ಸರ್ಕಾರದ ಅವಧಿಯಲ್ಲಿ ಆಗಿದ್ದಲ್ಲ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ್ದು. ದರ ಪರಿಷ್ಕರಣೆಯನ್ನು ಪ್ರತಿ ವರ್ಷ ಕೆ.ಇ. ಆರ್.ಸಿ ಮಾಡುತ್ತದೆ. ದರ ಏರಿಕೆಗೂ ನಮ್ಮ ಸರ್ಕಾರಕ್ಕೂ ಸಂಬಂಧವಿಲ್ಲ. ನಾವೂ ಕೂಡ ಅವರಿಗೆ ಎಷ್ಟು ಮಾಡಬೇಕೆಂದು ಮನವಿ ಸಲ್ಲಿಸಿರುತ್ತೇವೆ. ಅದೊಂದು ಸ್ವಾಯತ್ತ ಸಂಸ್ಥೆಯಾಗಿದೆ ಎಂದರು.

ಹಾಲಿನ ದರ ಹೆಚ್ಚಳದ ಕುರಿತಂತೆ ಇರುವ ಪ್ರಸ್ತಾವನೆ ಬಗ್ಗೆ ಸಂಬಂಧಪಟ್ಟವರಿಗೆ ಮಾತನಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಬಡವರ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದಿಂದ ತೊಂದರೆ
ಈಗಾಗಲೇ ತಿಳಿಸಿರುವಂತೆ ಬಡವರ ಕಾರ್ಯಕ್ರಮಕ್ಕೆ ತೊಂದರೆ ನೀಡಬೇಕೆಂದು ಅಕ್ಕಿ ಕೊಡಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಅವರ ಬಳಿ ಲಕ್ಷಗಟ್ಟಲೆ ಟನ್ ಅಕ್ಕಿಯಿದೆ. ಖಾಸಗಿಯವರಿಗೆ ಹರಾಜು ಮಾಡುತ್ತಾರೆ, ಆದರೆ ರಾಜ್ಯಗಳಿಗೆ ನೀಡುವುದಿಲ್ಲ ಎನ್ನುತ್ತಾರೆ. ಹಣ ನೀಡಿದರೂ ಕೊಡುವುದಿಲ್ಲ. 36.70 ರೂ. ಗಳ ವೆಚ್ಚದಲ್ಲಿ 1 ಕೆಜಿ ಅಕ್ಕಿ ಪಡೆಯಬಹುದು. ದ್ವೇಷದ ರಾಜಕಾರಣ ಮಾಡುವವರನ್ನು ಬಡವರ ವಿರೋಧಿ ಎನ್ನಬೇಕು ಎಂದರು.

ಧರಣಿ ಮಾಡಲು ನೈತಿಕ ಹಕ್ಕಿಲ್ಲ
ಬಿ.ಎಸ್.ಯಡಿಯೂರಪ್ಪ ಅವರು ಅಕ್ಕಿ ನೀಡದಿದ್ದರೆ ಧರಣಿ ಮಾಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರಿಗೆ ಧರಣಿ ಮಾಡುವ ಸ್ವಾತಂತ್ರ್ಯವಿದೆ. ಆದರೆ ಅವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.

ಅಕ್ಕಿ ಖರೀದಿ: ಸರ್ಕಾರಿ ಏಜೆನ್ಸಿಗಳೊಂದಿಗೆ ಇಂದು ಮಾತುಕತೆ
ಐದು ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೇ ಒಂದು ಯೋಜನೆಗೆ ಚಾಲನೆ ನೀಡಲಾಗಿದೆ. ಜುಲೈ ಒಂದರಿಂದ ಉಚಿತ ವಿದ್ಯುತ್ ಯೋಜನೆ ಜಾರಿಗೆ ಬರಲಿದೆ.ಅಕ್ಕಿಯನ್ನೂ ನೀಡಬೇಕೆಂಬ ಉದ್ದೇಶವಿದ್ದರೂ ಅಕ್ಕಿ ದೊರೆಯುತ್ತಿಲ್ಲ. ದೊರೆತರೂ ಹೆಚ್ಚಿನ ದರ ಕೇಳುತ್ತಾರೆ. 2.29 ಲಕ್ಷ ಮೆಟ್ರಿಕ್ ಟನ್ ಎಲ್ಲಿಯೂ ದೊರೆಯುತ್ತಿಲ್ಲ. ಎಲ್ಲಾ ರಾಜ್ಯದವರೂ ಪೂರ್ಣಪ್ರಮಾಣದ ಅಕ್ಕಿ ದೊರೆಯುತ್ತಿಲ್ಲವಾದ್ದರಿಂದ ಬೇರೆ ಸರ್ಕಾರಿ ಏಜೆನ್ಸಿಗಳಿಂದ ಎನ್.ಸಿ.ಸಿ.ಎಫ್ ನಿಂದ ಕೇಂದ್ರೀಯ ಭಂಡಾರ್, ನ್ಯಾಫೆಡ್ ಸಂಸ್ಥೆಗಳಿಂದ ದರಪಟ್ಟಿ ಕರೆಯಲಾಗಿದ್ದು, ಮಾತುಕತೆ ನಡೆದಿದೆ. ಇಂದು 3.00 ಗಂಟೆಗೆ ಮಾತುಕತೆ ನಡೆಯಲಿದ್ದು ಎಷ್ಟು ಅಕ್ಕಿ, ದರ ಎನ್ನುವ ಬಗ್ಗೆ ತೀರ್ಮಾನ ಮಾಡಲಾಗುವುದು. ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಪಡೆಯಲು ಟೆಂಡರ್ ಕರೆಯಬೇಕು. ಜೋಳ, ರಾಗಿ ವಿತರಣೆ 6 ತಿಂಗಳಿಗಾಗುವಷ್ಟಿದೆ. 2 ಕೆಜಿಯಂತೆ ನೀಡಬಹುದು. ಇನ್ನೂ 3 ಕೆಜಿ ಅಕ್ಕಿ ನೀಡಬೇಕಿದೆ. ಇಡೀ ವರ್ಷ ನೀಡುವಷ್ಟು ರಾಗಿ, ಜೋಳವಿಲ್ಲ ಎಂದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: bjp congress jds dkshivakumar siddaramiah Yadiyurappa
admin June 24, 2023
Share this Article
Facebook Twitter Whatsapp Whatsapp LinkedIn Copy Link
Previous Article ಹುಣಸೂರು ಜೋಡಿ ಕೊಲೆ ಆರೋಪಿ ಅಂದರ್
Next Article ನಟ ಮಾಸ್ಟರ್ ಆನಂದ್ ಗೆ ವಂಚನೆ !
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?