ಮೈಸೂರು : ಗ್ಯಾರಂಟಿ ಯೋಜನೆ ಜಾರಿಯಾಗದಿದ್ದರೆ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸುವಂತೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಕರೆ ನೀಡಿರುವ ವಿಚಾರಕ್ಕೇ ಸಚಿವ ಬೋಸರಾಜು ಪ್ರತಿಕ್ರಿಯೆ ನೀಡಿದ್ದಾರೆ.
ಯಡಿಯೂರಪ್ಪನವರುಹಿರಿಯರು,ಗೌರವಸ್ಥರು,ದೊಡ್ಡನಾಯಕರಿದ್ದಾರೆ ಅವರ ಬಗ್ಗೆ ಗೌರವವಿದೆ.
ಈಗ ರಾಜ್ಯದಲ್ಲಿ ಬಿಜೆಪಿಯನ್ನ ಜನ ತಿರಸ್ಕಾರ ಮಾಡಿದ್ದಾರೆ.
ಬದಲಾವಣೆ ಬಯಸಿ ಕಾಂಗ್ರೆಸ್ ಗೆ 135ಸ್ಥಾನ ಕೊಟ್ಟಿದ್ದಾರೆ.ಇತ್ತೀಚಿನ ಕಾಲದಲ್ಲಿ ಯಾವುದೇ ಪಕ್ಷಕ್ಕೂ ಇಷ್ಟೊಂದು ಬಹುಮತ ಕೊಟ್ಟಿಲ್ಲ.
ನಾವು ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಹಲವು ಗ್ಯಾರಂಟಿ ಯೋಜನೆಗಳನ್ನ ಪ್ರಕಟಿಸಿದ್ದೆವು.
ಅದರಲ್ಲಿ ತಕ್ಷಣ 5ಗ್ಯಾರಂಟಿಯನ್ನ ಅನುಷ್ಠಾನಕ್ಕೆ ತರಲು ಮುಂದಾಗಿದ್ದೇವೆ ಎಂದರು.
ಈಗಾಗಲೇ ಶಕ್ತಿ ಯೋಜನೆ ಆರಂಭವಾಗಿದೆ.
ಶಕ್ತಿ ಯೋಜನೆಗೆ ನೆನ್ನೆ ಒಂದೇ ದಿನ 1.5ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ.
ಶಕ್ತಿ ಯೋಜನೆಗೆ ಉತ್ತಮ ಸ್ಪಂದನೆ ಸಿಕ್ಕಿದೆ.
ಗೃಹಲಕ್ಷ್ಮಿ ಯೋಜನೆ ಜಾರಿಗೆ ಸಿದ್ಧತೆ ನೀಡಿದೆ.
ಆಪ್ ಕೂಡ ರೆಡಿ ಆಗಿದೆ.
ನಾಳೆಯಿಂದ ಅರ್ಜಿ ಸಲ್ಲಿಕೆಗೆ ಚಾಲನೆ ಸಿಗಲಿದೆ.
ಆಗಸ್ಟ್ 15ರ ನಂತರ ಪಲಾನುಭವಿಗಳ ಖಾತೆಗೆ ಹಣ ಹಾಕಲಾಗುತ್ತದೆ.
ಒಟ್ಟಾರೆ ಕಾರ್ಯಕ್ರಮಗಳ ಮಾಡಲು ತಯಾರಿದ್ದೇವೆ.
10ಕೆಜಿ ಅಕ್ಕಿ ನೀಡುವ ಯೋಜನೆಗೆ ಕೇಂದ್ರದವರು ಕೊಕ್ಕೆ ಹಾಕಿದ್ದಾರೆ ಎಂದು ಟೀಕಿಸಿದ್ದಾರೆ.
ಯಡಿಯೂರಪ್ಪನವರು ಅತ್ಯಂತ ಹಿರಿಯರಾಗಿದ್ದಾರೆ.
ಅವರು ಈ ರೀತಿ ಮಾತನಾಡಬಾರದು.
ಕೇಂದ್ರ ಸರ್ಕಾರಕ್ಕೆ ಹೆಚ್ಚುವರಿ ಅಕ್ಕಿ ಕೊಡಿ ಅಂತ ಯಡಿಯೂರಪ್ಪ ಕೇಳಬೇಕು.
ಶೋಭಾ ಕರಂದ್ಲಾಜೆ ಕೂಡ ಹೇಳಿಕೆ ನೀಡಿ ಗ್ಯಾರಂಟಿ ಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿಸದ್ದಾರೆ.
ಅದೇ ರೀತಿ ಇವರು ಹೇಳಬೇಕಲ್ವೇ.
ಸಿದ್ದರಾಮಯ್ಯ ಇದ್ದಾಗ 7ಕೆಜಿ ಅಕ್ಕಿ ಕೊಡ್ತಿದ್ದೆವು.
ಅದನ್ನ ಇವರು 5ಕೆಜಿ ಗೆ ತಂದರು.
ಈಗ ನಾವು 10ಕೆಜಿ ಕೊಡ್ತೀವಿ ಅಂತ ಹೇಳಿದ್ದೀವಿ.
ಅದಕ್ಕೆ ಇವರು ಸಹಕಾರ ಕೊಡಬೇಕಲ್ವಾ.
ಮೋದಿಯವರ ಮನೆಯಿಂದ ಅಥವಾ ಇನ್ಯಾರೋ ಮನೆಯಿಂದ ಕೊಡ್ತಿಲ್ವಲಾ
ಈಗಾಗಲೇ ಕೇಂದ್ರದ ಬಳಿ ಸಾಕಷ್ಟು ಅಕ್ಕಿ ದಾಸ್ತಾನು ಇದೆ.
ಅದರಲ್ಲಿ ಹೆಚ್ಚುವರಿ ಅಕ್ಕಿ ಕೊಡಿ ಅಂತ ಕೇಳಿದ್ದೇವೆ.
ಆದರೆ ರಾಜಕೀಯ ಕಾರಣಗಳಿಂದ ಅಕ್ಕಿ ಕೊಡುತ್ತಿಲ್ಲ.
ಕರ್ನಾಟಕದ ಬಡ ಜನರ ಬಗ್ಗೆ ಇವರಿಗಿರುವ ವಿರೋಧ ಕಣ್ಣಿಗೆ ಕಾಣುತ್ತಿದೆ.
ನಾವು ಹೇಗಾದ್ರು ಮಾಡಿ ಅಕ್ಕಿಯನ್ನ ನೀಡಿ ಜನರಿಗೆ ನೀಡಿರುವ ಭರವಸೆ ಈಡೇರಿಸುತ್ತೇವೆ ಎಂದರು.