• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಎಲ್ಲರಿಗೂ ಎಲ್ಲಾ ಕಡೆಯೂ ಉನ್ನತ ಶಿಕ್ಷಣ ಸಿಗಬೇಕು : ಥಾವರ್ ಚಂದ್ ಗೆಹ್ಲೋಟ್
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಎಲ್ಲರಿಗೂ ಎಲ್ಲಾ ಕಡೆಯೂ ಉನ್ನತ ಶಿಕ್ಷಣ ಸಿಗಬೇಕು : ಥಾವರ್ ಚಂದ್ ಗೆಹ್ಲೋಟ್
ಜಿಲ್ಲೆಮೈಸೂರುರಾಜ್ಯ

ಎಲ್ಲರಿಗೂ ಎಲ್ಲಾ ಕಡೆಯೂ ಉನ್ನತ ಶಿಕ್ಷಣ ಸಿಗಬೇಕು : ಥಾವರ್ ಚಂದ್ ಗೆಹ್ಲೋಟ್

admin
Last updated: 2023/07/02 at 8:59 AM
admin
Share
4 Min Read
SHARE

ಮೈಸೂರು : ಉನ್ನತ ಶಿಕ್ಷಣವು ಎಲ್ಲರಿಗೂ ಹಾಗೂ ಎಲ್ಲಾ ಕಡೆಯೂ ಸಿಗಬೇಕೆಂಬ ಉದ್ದೇಶದಿಂದ ಮುಕ್ತ ವಿಶ್ವವಿದ್ಯಾನಿಲಯಗಳನ್ನು ಸ್ಥಾಪಿಸಲಾಯಿತು ಎಂದು ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯಗಳ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ತಿಳಿಸಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಹಮ್ಮಿಕೊಂಡಿದ್ದ ಕರಾಮುವಿ 18ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಕ್ತ ವಿಶ್ವವಿದ್ಯಾನಿಲಯಗಳು ದೂರ ಶಿಕ್ಷಣ ನೀಡುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಕಳೆದ ಎರಡೂವರೆ ದಶಕಗಳಲ್ಲಿ ದೂರ ಶಿಕ್ಷಣದ ಮೂಲಕ ದೇಶದಾದ್ಯಂತ ಉನ್ನತ ಶಿಕ್ಷಣಕ್ಕೆ ಅಪಾರ ಕೊಡುಗೆ ನೀಡುವ ಮೂಲಕ ಸಂಸ್ಥೆಯಿಂದ ಎ ಪ್ಲಸ್ ಮಾನ್ಯತೆ ಪಡೆದಿದೆ ಎಂದರು.

ಸಮಾಜದಲ್ಲಿ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳಿಂದ ಬಂದ ಅನೇಕ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಮುಕ್ತ ವಿಶ್ವವಿದ್ಯಾನಿಲಯಗಳು ಕಾರಣವಾಗಿವೆ. ದೂರ ಶಿಕ್ಷಣವು ಪ್ರಸ್ತುತ ಭಾರತೀಯ ಶೈಕ್ಷಣಿಕ ವ್ಯವಸ್ಥೆಯ ಮೇಲೆ ಉತ್ತಮ ಪರಿಣಾಮ ಬೀರಿದೆ. ಇಂದು ಮಹಿಳೆಯರು ಹೆಚ್ಚು ಪದಕಗಳನ್ನು ಪಡೆದಿರುವುದು ಮಹಿಳಾ ಸಬಲೀಕರಣದ ಪ್ರತೀಕವಾಗಿದೆ. ವಿವೇಕಾನಂದರ ಯುವಕರಿಗೆ ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂದು ನೀಡಿದ ಕರೆಯಂತೆ ಎಲ್ಲರೂ ದೇಶದ ಸರ್ವತೋಮುಖ ಪ್ರಗತಿಗೆ ಶ್ರಮಿಸಬೇಕು ಎಂದು ತಿಳಿಸಿದರು.

ಗುಣಮಟ್ಟದ ಶಿಕ್ಷಣ, ಮಾರ್ಗದರ್ಶನ, ಕೌಶಲ್ಯ, ಗುಣಾತ್ಮಕ ಚಿಂತನೆ ಮತ್ತು ಭವಿಷ್ಯ ನಿರ್ಮಾಣ ಇವೆಲ್ಲವೂ ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಕಾರಣವಾಗುತ್ತವೆ. ರಾಷ್ಟ್ರದ ಪ್ರಗತಿಯಲ್ಲಿ ಪ್ರತಿಯೊಬ್ಬ ಸಾರ್ವಜನಿಕರ ಕೊಡುಗೆ ಅಗತ್ಯ. ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಸಾರ್ವಭೌಮ ರಾಷ್ಟ್ರ. ವಿಶ್ವಕಲ್ಯಾಣ ಮತ್ತು ವಿಶ್ವಶಾಂತಿಯನ್ನು ಭಾರತ ದೇಶ ಸಾರುತ್ತಿದೆ. ಆದರೆ
ಇಂದು ಇಡೀ ವಿಶ್ವವೇ ಪರಿಸರದ ಸಮಸ್ಯೆಗಳನ್ನು ಎದುರಿಸುತ್ತಿದೆ. ಪರಿಸರವನ್ನು ಸಂರಕ್ಷಣೆ ಮಾಡುವ ಜವಾಬ್ದಾರಿ ಎಲ್ಲರ ಮೇಲಿದೆ. ಪ್ಲಾಸ್ಟಿಕ್ ಮುಕ್ತ ವಲಯಗಳನ್ನಾಗಿ ಮಾಡುವುದು, ಮಳೆ ನೀರು ಕೊಯ್ಲುಗಳನ್ನು ಅಳವಡಿಸಿಕೊಳ್ಳುವುದು ಹಾಗೂ ಇನ್ನಿತರ ಕ್ರಮಗಳನ್ನು ಕೈಗೊಳ್ಳುವ ಮೂಲಕ ಪರಿಸರ ಸಂರಕ್ಷಣೆಯ ಆದ್ಯ ಕರ್ತವ್ಯ ನಿಮ್ಮ ಮೇಲಿದೆ ಎಂದರು.

ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಅಶೋಕ್ ಎಸ್ ಕಿಣಗಿ ರವರು ಮಾತನಾಡಿ, ವಿವಿಧ ಶೈಕ್ಷಣಿಕ ಅಧ್ಯಯನ ವ್ಯಾಸಂಗ ಕ್ರಮಗಳಲ್ಲಿ ಯಶಸ್ವಿಯಾಗಿ ಪ್ರಶಸ್ತಿಗಳನ್ನು ಮತ್ತು ಪದವಿಗಳನ್ನು ಸ್ವೀಕರಿಸುವ ಎಲ್ಲಾ ಪದವೀಧರರಿಗೆ ಹೃತ್ಪೂರ್ವಕ ಅಭಿನಂದನೆ. ಮುಂದಿನ ದಿನಗಳಲ್ಲಿ ಯಾವುದೇ ಕಾರ್ಯಕ್ಷೇತ್ರದಲ್ಲಿ ಕಾರ್ಯನಿರ್ವಹಣೆ ಮಾಡಿ ಉನ್ನತ ಸ್ಥಾನವನ್ನು ಅಂಗೀಕರಿಸಿ ಜಾಗತಿಕ ವ್ಯಕ್ತಿಗಳಾಗಿ ಪ್ರಸಿದ್ಧಿ ಪಡೆಯಿರಿ ಎಂದು ತಮ್ಮ ಅಭಿಲಾಷೆಯನ್ನು ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ ಚಿಂತನಶೀಲ ಸಂಪ್ರದಾಯವನ್ನು ಮುಂದುವರಿಸಿಕೊಂಡು ತಮ್ಮದೇ ಸೇವಾ ಕ್ಷೇತ್ರದಲ್ಲಿ ಸಮಾಜಕ್ಕೆ ಉನ್ನತ ಮಟ್ಟದ ಹಾಗೂ ಗಮನಾರ್ಹ ಸೇವೆ ಸಲ್ಲಿಸಿರುವುದನ್ನು ಗುರುತಿಸಿ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು, ಧನ್ವಂತ್ರಿ ಎಜುಕೇಶನಲ್ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷರು ಹಾಗೂ ಶ್ರೀ ಲಕ್ಷ್ಮಿ ಶಿಕ್ಷಣ ಸಂಸ್ಥೆಗಳ ಸಮೂಹದ ಮುಖ್ಯಸ್ಥರೂ ಆದ ಎನ್ ರಾಮಚಂದ್ರಯ್ಯ ಹಾಗೂ ಚಿಲ್ಡ್ರನ್ಸ್ ಎಜುಕೇಶನ್ ಸೊಸೈಟಿ ಅಧ್ಯಕ್ಷರು ಹಾಗೂ ಆಕ್ಸ್ಫರ್ಡ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಎಸ್ ಎನ್ ವೆಂಕಟಲಕ್ಷ್ಮಿ ನರಸಿಂಹರಾಜು ಅವರಿಗೆ ಗೌರವ ಡಾಕ್ಟರೇಟ್ ಪದವಿಗಳನ್ನು ನೀಡಿರುವುದು ಅತ್ಯಂತ ಶ್ಲಾಘನೀಯ ಎಂದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊಫೆಸರ್ ಶರಣಪ್ಪ ವಿಹಲಸೆ ಅವರು ಮಾತನಾಡಿ, ಈ ಸಮಾರಂಭದಲ್ಲಿ ಕಲಾನಿಕಾಯದ ಒಬ್ಬ ಸಂಶೋಧನಾ ವಿದ್ಯಾರ್ಥಿಗೆ ಿ ಎಚ್ ಡಿ ಪದವಿಯನ್ನು 44 ವಿವಿಧ ಪದವಿ ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು 48 ವಿವಿಧ ಪದವಿ ವಿದ್ಯಾರ್ಥಿಗಳಿಗೆ ರ್‍ಯಾಂಕ್ಗಳನ್ನು ಮತ್ತು 27 ವಿವಿಧ ಪದವಿಗಳ ವಿದ್ಯಾರ್ಥಿಗಳಿಗೆ ನಗದು ಬಹುಮಾನಗಳನ್ನು ಪ್ರಧಾನ ಮಾಡಲಾಗುತ್ತಿದೆ. ಅಲ್ಲದೆ 5240 ಮಹಿಳಾ ವಿದ್ಯಾರ್ಥಿಗಳೊಳಗೊಂಡಂತೆ ಒಟ್ಟು 8721 ವಿದ್ಯಾರ್ಥಿಗಳಿಗೆ ವಿವಿಧ ಸ್ನಾತ್ತಕ ಹಾಗೂ ಸ್ನಾತಕೋತ್ತರ ಪದವಿಗಳನ್ನು ಪ್ರಧಾನ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಮುಕ್ತ ಮತ್ತು ದೂರ ಶಿಕ್ಷಣ ಪದ್ಧತಿಯ ಮೂಲಕ ಬೋಧನಾ ಕ್ರಮದಲ್ಲಿ ಅತ್ಯಂತ ಕಿರಿಯ ಹಾಗೂ ಪ್ರತಿಬಿಂಬ ವಿಶ್ವವಿದ್ಯಾನಿಲಯವಾಗಿದೆ. ಸಿಜಿಪಿಎ 3.31 ಗ್ರೇಡ್ ನೊಂದಿಗೆ ನ್ಯಾಕ್ ಸಂಸ್ಥೆಯಿಂದ ಎ+ ದರ್ಜೆಯ ಮಾನ್ಯತೆಯನ್ನು ಪಡೆದುಕೊಂಡಿದ್ದು, ದೇಶದಲ್ಲಿಯೇ ಮುಕ್ತ ಮತ್ತು ದೂರ ಶಿಕ್ಷಣ ಪದ್ಧತಿಯ ವಿಶ್ವವಿದ್ಯಾನಿಲಯಗಳಲ್ಲಿ ಅತ್ಯುನ್ನತ ಸ್ಥಾನವನ್ನು ಪಡೆದುಕೊಂಡಿದೆ. ಕೇಂದ್ರ ಸರ್ಕಾರದ ಎಐಸಿಟಿಇ ಮತ್ತು ಎನ್ ಸಿ ಟಿ ಇ ಸಂಸ್ಥೆಗಳ ಮಾನ್ಯತೆಯನ್ನು ಪಡೆದುಕೊಂಡಿದ್ದು, ಯುಜಿಸಿ-ಡಿಇಬಿ ಸಂಸ್ಥೆಯು ಪ್ರಸ್ತುತದಲ್ಲಿ 39 ವಿವಿಧ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾರ್ಯಕ್ರಮಗಳಿಗೆ ಮಾನ್ಯತೆ ನೀಡಿದೆ. ಹೊಸ 12 ಪದವಿ ಕಾರ್ಯಕ್ರಮಗಳಿಗೆ ಸದರಿ ಸಂಸ್ಥೆಯ ಮಾನ್ಯತೆಯನ್ನು ಶೀಘ್ರದಲ್ಲಿ ನಿರೀಕ್ಷಿಸಲಾಗಿದ್ದು, ಪ್ರಸ್ತುತ ಶೈಕ್ಷಣಿಕ ವರ್ಷ 2023-24 ರಿಂದ ಹೊಸದಾಗಿ 13 ಆನ್ಲೈನ್ ಶಿಕ್ಷಣ ಕ್ರಮಗಳನ್ನು ಪ್ರಾರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಘಟಿಕೋತ್ಸವದಲ್ಲಿ 52 ವಿದ್ಯಾರ್ಥಿಗಳಿಗೆ 44 ಚಿನ್ನದ ಪದಕಗಳನ್ನು ಹಾಗೂ 27 ನಗದು ಬಹುಮಾನಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲ ಸಚಿವರಾದ ಪ್ರೊ. ಕೆ.ಎಲ್.ಎನ್ ಮೂರ್ತಿ,ಮೌಲ್ಯಮಾಪನ ವಿಭಾಗದ ಕುಲಸಚಿವರಾದ ಪ್ರೊ. ಕೆ ಬಿ ಪ್ರವೀಣ, ಪ್ರೊ. ಲಕ್ಷ್ಮಿ ಸೇರಿದಂತೆ ಕರಾಮುವಿ ಅಧ್ಯಾಪಕ ಹಾಗೂ ಅಧ್ಯಾಪಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Mysore ksou open University education
admin July 2, 2023
Share this Article
Facebook Twitter Whatsapp Whatsapp LinkedIn Copy Link
Previous Article ಗೃಹ ಲಕ್ಷ್ಮಿ ಅರ್ಜಿ ಸಲ್ಲಿಸಲು ದುಡ್ಡು ಕೊಡಬೇಡಿ – ಲಕ್ಷ್ಮಿ ಹೆಬ್ಬಾಳ್ಕರ್
Next Article ಎಲ್ಲಾ ಜಾತಿಯ ಬಡವರ ಏಳಿಗೆಗಾಗಿ ದುಡಿಯುತ್ತೇನೆ – ಸಿಎಂ ಸಿದ್ದರಾಮಯ್ಯ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?