ಮೈಸೂರು : ಮೈಸೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ತುರ್ತು ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಟಿ ನರಸೀಪುರದಲ್ಲಿ ನಡೆದಿರುವ ಯುವ ಬ್ರಿಗೇಡ್ ಸದಸ್ಯನ ಕೊಲೆಯನ್ನು ಬಿಜೆಪಿ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವ ಕೆಲಸ ಮಾಡುತ್ತಿದೆ.
ಬಿಜೆಪಿಯವರು ಹತಾಶರಾಗಿದ್ದಾರೆ.
ಕಾಂಗ್ರೆಸ್ ವರ್ಚಸ್ಸು ದಿನೇ ದಿನೇ ವೃದ್ದಿಯಾಗುತ್ತಿದೆ.
ಕೇಂದ್ರ ನಾಯಕರ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಸುಖಾಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡ್ತಿದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾವಿರಾರು ಕೊಲೆಗಳಾಗಿವೆ.
ಆದರೂ ಆಯ್ದ ಕೆಲವರಿಗೆ ಮಾತ್ರ ಪರಿಹಾರ ಕೊಟ್ಟಿದ್ದಾರೆ.
ಟಿ ನರಸೀಪುರ ಕೊಲೆ ಪ್ರಕರಣವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಮುಂದಾಗಿರುವ ಬಿಜೆಪಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ.
ಸಾವಿನಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.
ಕೊಲೆ ಆರೋಪಿಗಳ ಪೈಕಿ ಓರ್ವ ಮೈಸೂರು ಮಹಾನಗರ ಪಾಲಿಕೆಯ ವಾರ್ಡ್ ಸಂಖ್ಯೆ 46ರ ಬಿಜೆಪಿ ಸದಸ್ಯೆಯ ತಮ್ಮನಾಗಿದ್ದಾನೆ ಎಂದು ಲಕ್ಷ್ಮಣ್ ವಾಗ್ದಾಳಿ ನಡೆಸಿದರು.
ಸಿ ಟಿ ರವಿ ಓರ್ವ ರೌಡಿಶೀಟರ್.ಸಿ ಟಿ ರವಿ ಕಾರು ಹರಿಸಿ ನಾಲ್ವರನ್ನು ಕೊಂದ ಆರೋಪ ಹೊತ್ತಿದ್ದಾರೆ.
ಅವರನ್ನು ಬಿಜೆಪಿ ಸತ್ಯಶೋಧನಾ ಸಮಿತಿಗೆ ಮುಖ್ಯಸ್ಥನನ್ನಾಗಿ ನೇಮಿಸಲಾಗಿದೆ.ಸಂಸದ ಪ್ರತಾಪ್ ಸಿಂಹ ವಿರುದ್ಧ ಕೂಡ ಹಲವಾರು ಪ್ರಕರಣ ದಾಖಲಾಗಿವೆ.ಅವರನ್ನು ಸತ್ಯಶೋಧನಾ ನಮಿತಿ ಸದಸ್ಯನಾಗಿ ನೇಮಕ ಮಾಡಲಾಗಿದೆ.ಕ್ರಿಮಿನಲ್ ಆರೋಪಕ್ಕೆ ಗುರಿಯಾಗಿರುವ ಇಂತಹವರು ಯಾವ ಸತ್ಯಶೋಧನೆ ಮಾಡುತ್ತಾರೆ ಎಂದು
ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ವ್ಯಂಗ್ಯವಾಡಿದರು.