ಮೈಸೂರು: ವೇಣುಗೋಪಾಲ ನಾಯಕ್ ಹತ್ಯೆ ಧರ್ಮ,ರಾಜಕೀಯ ವ್ಯಾಪ್ತಿ ಎರಡುಕ್ಕೂ ಬರಲ್ಲ ಎಂದು ಸಚಿವ ಮಹದೇವಪ್ಪ ಹೇಳಿದ್ದಾರೆ.
ಮೃತ ವೇಣು ಗೋಪಾಲ್ ಕುಟುಂಬದ ಬೇಟಿ ಮಾಡಿದ ಬಳಿಕ ಮಾತನಾಡಿದ ಅವರು, ಬ್ರಿಗೇಡ್ ಕಟ್ಟಿಕೊಂಡು ಹನುಮಂತ ಜಯಂತಿ ಚೆನ್ನಾಗಿಯೆ ಮಾಡಿದ್ದಾರೆ.
ಹನುಮ ಜಯಂತಿಗೆ ಯಾರದೆ ಅಡ್ಡಿ ತಕಾರರು ಇರಲಿಲ್ಲ.
ಜಯಂತಿ ವೇಳೆ ಬ್ರಿಗೇಡ್ ನಲ್ಲಿದ್ದವರೆ ಬೈಕ್ ನಿಲ್ಲಿಸುವ ವಿಚಾರ,ಪೋಟೋ ವಿಚಾರಕ್ಕೆ ಜಗಳ ನಡೆದಿವೆ.
ನಂತರ ಬ್ರಿಗೇಡ್ ನಲ್ಲಿದ್ದವರೆ ಗಲಾಟೆ ಮಾಡಿಕೊಂಡಿದ್ದಾರೆ.
ಆ ವೇಳೆ ಈ ಕೊಲೆಯಾಗಿದೆ ಎಂದರು.
ಈ ಕೊಲೆಯಲ್ಲಿ ರಾಜಕೀಯ ಪಿತೂರಿ ಮಾಡಬಾರದು.
ಕೊಲೆಗೆ ಹಿಂದೂತ್ವದ ಅಜೆಂಡಾ ಫಿಕ್ಸ್ ಮಾಡುವ ಸಂಚನ್ನು ಬಿಜೆಪಿ ಮಾಡುತ್ತಿದೆ.ಬಿಜೆಪಿ ಈ ಆಟ ಬಹಳ ಕಾಲ ನಡೆಯಲ್ಲ.ಎಲ್ಲದಕ್ಕೂ ಹಿಂದೂತ್ವದ ಅಜೆಂಡಾ ಫಿಕ್ಸ್ ಮಾಡೋದು ಬಿಜೆಪಿ ಚಾಳಿ.ಹತ್ಯೆಯ ಪ್ರಕರಣದಲ್ಲಿ ನನ್ನ ಮಗನ ಹೆಸರನ್ನು ಬಿಜೆಪಿ ವಿನಾಃಕಾರಣ ಎಳೆದು ತರುತ್ತಿದೆ.
ನನ್ನ ಮಗನ ಮೇಲೆ ಹೀಗೆ ಹಿಂದೆಯೂ ವಿನಾಃಕಾರಣ ಆರೋಪ ಮಾಡಿದ್ದರು ಎಂದು ಹೇಳಿದರು.
ಮಾಫ್ಹಿಯಾ ಮಾಡಿದ್ದವರೆ ಹಿಂದೆಯೂ ಮಗನ ಮೇಲೆ ಕೇಸ್ ಕೊಟ್ಟಿದ್ದರು.ಬಿಜೆಪಿ ಅವರು ಸುಳ್ಳುನ್ನು ಸತ್ಯ ಮಾಡಲು ಹೊರಟಿದ್ದಾರೆ.ಪೊಲೀಸರ ತನಿಖೆ ಸರಿ ದಾರಿಯಲ್ಲಿ ಇದೆ.ಘಟನೆಯಾದ6 ಗಂಟೆಯೊಳಗೆ ಆರೋಪಿಗಳನ್ನ ಬಂಧಿಸಿದ್ದಾರೆ.
ಧರ್ಮದ ಕಲರ್ ಕೊಡಲು ಬಿಜೆಪಿ ಹೊರಟ್ಟಿದ್ದಾರೆ.
ಈ ಕೊಲೆ ದೌರ್ಜನ್ಯ ಪ್ರಕರಣ ಅಲ್ಲ ಎಂದರು.
ಆದರೆ ಎಸ್ಸಿ ಎಸ್ಟಿ ಸಮುದಾಯದ ಯಾರಾದರೂ ಈ ರೀತಿ ಕೊಲೆಯಾದರೆ 8 ಲಕ್ಷ ಪರಿಹಾರ ಕೊಡಬಹುದು.
ಪರಿಹಾರದ ಮೊದಲ ಕಂತು 4.12 ಲಕ್ಷ ಈಗ ಕೊಟ್ಟಿದ್ದೇವೆ. ಪ್ರಕರಣದ ಚಾರ್ಜ್ ಶೀಟ್ ಆದ ಮೇಲೆ ಉಳಿದ ಹಣ ಕೊಡುತ್ತೇವೆ.ಕೊಲೆಯಾದ ವ್ಯಕ್ತಿಯ ಪತ್ನಿಗೆ 4 ಅನುಕಂಪದ ಆಧಾರದ ಮೇಲೆ ಕೆಲಸ ಕೊಡಿಸಲು ಯತ್ನ ಮಾಡುತ್ತೇವೆ ಎಂದು ತಿಳಿಸಿದರು.