ರಾಮನಗರ : ಬೆಂ-ಮೈ ದಶಪಥವರಸ್ತೆಯಲ್ಲಿ ನಡೆದ ರೋಚಕ ಅಪಘಾತ ನಡೆದಿದ್ದು ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಂಭವಿಸುತ್ತಿದ್ದ ಭೀಕರ ಅಪಘಾತವೊಂದು ಅದೃಷ್ಟ ವಶಾತ್ ತಪ್ಪಿದೆ. ಬೃಹತ್ ಕಂಟೇನರ್ ಲಾರಿ ಎಕ್ಸ್ ಪ್ರೆಸ್ ವೇನ ಒಂದು ಬದಿಯಿಂದ ಇನ್ನೊಂದು ಬದಿ ದಾಟಿ ಸರ್ವೀಸ್ ರಸ್ತೆಯ ಗೆ ನುಗ್ಗಿದೆಯಾದರೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗೇಟ್ ಸಮೀಪದ ಬೆಂ-ಮೈ ಹೆದ್ದಾರಿಯಲ್ಲಿ ಬುಧವಾರ ಮಧ್ಯಾಹ್ನದ ಸುಮಾರಿನಲ್ಲಿ ಭೀಕರ ಘಟನೆ ನಡೆದಿದ್ದು, ಈ ಸಮಯದಲ್ಲಿ ಹೆದ್ದಾರಿಯಲ್ಲಿ ಯಾವುದೇ ವಾಹನ ಸಂಚರಿಸದ ಪರಿಣಾಮ ಯಾವುದೇ ಅಪಾಯ ಸಂಭವಿಸಿಲ್ಲ.
ಮೈಸೂರು ಕಡೆಯಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಬೃಹತ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬೆಂಗಳೂರು ಕಡೆಯ ಎಕ್ಸ್ಪ್ರೆಸ್ ವೇ ದಾಟಿ ಮೈಸೂರು ಕಡೆಗೆ ಹೋಗುವ ರಸ್ತೆಯನ್ನು ಹಾಯ್ದು ಎಕ್ಸ್ ಪ್ರೆಸ್ ವೇ ತಂತಿ ಬೇಲಿ ಮುರಿದುಕೊಂಡು ಸರ್ವೀಸ್ ರಸ್ತೆಗೆ ನುಗ್ಗಿದೆ. ಲಾರಿ ರಸ್ತೆ ದಾಟಿ ಬರುತ್ತಿರುವ ದೃಶ್ಯ ಸ್ಥಳೀಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.