• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಜನರ ಜೇಬಿನ ಹಣ ಕಿತ್ತುಕೊಂಡಿದ್ದೆ ಬಿಜೆಪಿ ಸೋಲಿಗೆ ಕಾರಣ :ಸಿಎಂ ಸಿದ್ದರಾಮಯ್ಯ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಬೆಂಗಳೂರು ನಗರ > ಜನರ ಜೇಬಿನ ಹಣ ಕಿತ್ತುಕೊಂಡಿದ್ದೆ ಬಿಜೆಪಿ ಸೋಲಿಗೆ ಕಾರಣ :ಸಿಎಂ ಸಿದ್ದರಾಮಯ್ಯ
ಜಿಲ್ಲೆಬೆಂಗಳೂರು ನಗರರಾಜಕೀಯರಾಜ್ಯ

ಜನರ ಜೇಬಿನ ಹಣ ಕಿತ್ತುಕೊಂಡಿದ್ದೆ ಬಿಜೆಪಿ ಸೋಲಿಗೆ ಕಾರಣ :ಸಿಎಂ ಸಿದ್ದರಾಮಯ್ಯ

admin
Last updated: 2023/07/14 at 7:23 AM
admin
Share
2 Min Read
SHARE

– ಮೋದಿ ಪ್ರಭಾವ ಮಂಕಾಗುತ್ತಿದೆ

– ಹಿಟ್ಲರ್ ಗೆ ಬೈದರೆ ನಿಮಗೇಕೆ ಸಿಟ್ಟು ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದ ಸಿಎಂ

ಜನರ ಜೇಬಿನಲ್ಲಿದ್ದ ಹಣ ಕಿತ್ತುಕೊಂಡಿದ್ದೇ ಬಿಜೆಪಿ ಸೋಲಿಗೆ ಕಾರಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ದೇಶದಲ್ಲಿ ಬಿಜೆಪಿಯ ಅವನತಿ ಕರ್ನಾಟಕದಿಂದ ಶುರುವಾಗಿದೆ. ಪ್ರಧಾನಿ ಮೋದಿ ಪ್ರಭಾವ ಮಂಕಾಗಿದೆ. ಮೋದಿಯವರು ರಾಜ್ಯದಲ್ಲಿ ಪ್ರಚಾರ ಮಾಡಿದ ಎಲ್ಲಾ ಕಡೆ ಬಿಜೆಪಿ ಹೀನಾಯವಾಗಿ ಸೋತಿರುವುದು ಇದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುತ್ತಾ ಬಿಜೆಪಿ ಮತ್ತು ನರೇಂದ್ರ ಮೋದಿಯವರು ಹೇಗೆ ಜನರಿಂದ ದೂರವಾಗುತ್ತಿದೆ, ಜನ ವಿರೋಧಿ ಆಗುತ್ತಿದೆ ಎನ್ನುವುದನ್ನು ಬಿಡಿ ಬಿಡಿಯಾಗಿ ಬಿಚ್ಚಿಟ್ಟರು.

ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 28 ಬಾರಿ ಬಂದರು. ಹಿಂದಿನ ಯಾವ ಪ್ರಧಾನಿಗಳೂ ರಾಜ್ಯಗಳ ಚುನಾವಣೆ ವೇಳೆ ಹೀಗೆ ವರ್ತಿಸಿರಲಿಲ್ಲ. ಉಳಿದ ಪ್ರಧಾನಿಗಳಿಗೆ ದೇಶವನ್ನು ಮುನ್ನಡೆಸುವುದು ಪ್ರಥಮ ಆಧ್ಯತೆ ಆಗಿರುತ್ತಿತ್ತು. ಬರೀ ಚುನಾವಣೆಗಳನ್ನು ಮಾಡುತ್ತಾ ಓಡಾಡುತ್ತಿರಲಿಲ್ಲ ಎಂದರು.

ವಿಧಾನಸಭೆ ಚುನಾವಣೆಯಲ್ಲಿ ಮೋದಿ ಅವರು ರೋಡ್ ಶೋ ನಡೆಸಿದ , ಪ್ರಚಾರ ನಡೆಸಿದ ಕ್ಷೇತ್ರಗಳಲ್ಲಿ ಮತ್ತು ಸುತ್ತ ಮುತ್ಯಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅತ್ಯಂತ ಬಹುಮತದಿಂದ ಗೆದ್ದಿದೆ. ಹೀಗಾಗಿ ಮೋದಿ ಅವರ ಪ್ರಭಾವ ಮಂಕಾಗುತ್ತಿರುವುದನ್ನು ನೀವು ಒಪ್ಪಿಕೊಳ್ಳಿ. ಇನ್ಮೇಲೆ ಮೋದಿ ಅವರ ಮೇಲೆ ಅವಲಂಬಿತರಾಗಬೇಡಿ ಎಂದು ಬಿಜೆಪಿ ಸದಸ್ಯರಿಗೆ ತಿಳಿಸಿದರು.

ಜನರ ಜೇಬಿನಲ್ಲಿರುವುದನ್ನು ಕಿತ್ತುಕೊಂಡಿರಿ
ಕಾಂಗ್ರೆಸ್ ಗೆಲುವಿಗೆ ಕಾರಣವಾದ ಸಂಗತಿಗಳನ್ನು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು “ಕಾಂಗ್ರೆಸ್ ಜನರ ಜೇಬಿನಲ್ಲಿ ಹಣ ಇರಬೇಕು ಎನ್ನುವ ಉದ್ದೇಶದಿಂದ ಐದು ಗ್ಯಾರಂಟಿಗಳನ್ಮು ಘೋಷಿಸಿ ಜಾರಿ ಮಾಡಿತು. ಬಡವರು-ಮಧ್ಯಮ ವರ್ಗದವರ ಜೇಬಿನಲ್ಲಿ ಹಣ ಇದ್ದರೆ ನಾಡಿನ ಆರ್ಥಿಕತೆ ಬೆಳೆಯುತ್ತದೆ ಎನ್ನುವುದು ಕಾಂಗ್ರೆಸ್ ನ ಬದ್ಧತೆ ಮತ್ತು ಸಿದ್ಧಾಂತ. ಆದರೆ ಬಿಜೆಪಿ ಜನರ ಜೇಬಿನಲ್ಲಿರುವ ಹಣ ಕಿತ್ತುಕೊಳ್ಳುವ ಮನಸ್ಥಿತಿ ಹೊಂದಿರುವ ಕಾರಣದಿಂದ ಹೀನಾಯವಾಗಿ ಸೋಲು ಕಾಣಬೇಕಾಯಿತು ಎಂದರು.

ಪಂಪ ಮತ್ತು ಹಿಟ್ಲರ್
ಕನ್ನಡ ಮಣ್ಣಿನ ಸೌಹಾರ್ದ ಪರಂಪರೆಯ 2000 ವರ್ಷಗಳ ಮೌಲ್ಯವನ್ಮು ವಿವರಿಸಿದ ಮುಖ್ಯಮಂತ್ರಿಗಳು, ಪಂಪ “ಮನುಷ್ಯ ಜಾತಿ ತಾನೊಂದೇ ವಲಂ” ಎನ್ನುವ ಮೌಲ್ಯದಿಂದ ಕನ್ನಡ ಸಂಸ್ಕೃತಿಯನ್ನು ಅರಳಿಸಿದರು. ಹೀಗೆ ಪಂಪನಿಂದ ಹಿಡಿದು ಬಸವಣ್ಣನವರನ್ನು ಪ್ರಸ್ತಾಪಿಸಿ ಇವರೆಲ್ಲರ ಆಶಯಗಳೇ ನಮ್ಮ ಸಂವಿಧಾನದಲ್ಲಿದೆ. ಆದರೆ ತಾನು ಮಾತ್ರ ಶ್ರೇಷ್ಠ ಎನ್ನುವ ಹಿಟ್ಲರ್ ಒಬ್ಬ ಮತಾಂಧ. ಆತ ಮನುಷ್ಯ ವಿರೋಧಿ ಎಂದರು.

ಹಿಟ್ಲರ್ ಗೆ ಬೈದರೆ ನಿಮಗೇಕೆ ಸಿಟ್ಟು?
ಹಿಟ್ಲರ್ ತನ್ನ ತಿಕ್ಕಲುತನದಿಂದ ಹೇಗೆ ಮನುಷ್ಯರ ಮಾರಣ ಹೋಮಕ್ಕೆ ಕಾರಣನಾದ ಎಂದು ವಿವರಿಸುತ್ತಿದ್ದಾಗ ಬಿಜೆಪಿ ಸದಸ್ಯರು ಮುಖ್ಯಮಂತ್ರಿಗಳ ಮಾತಿಗೆ ಅಡ್ಡಿಪಡಿಸಿದರು. ಈ ವೇಳೆ ಮುಖ್ಯಮಂತ್ರಿಗಳು, ‘ಹಿಟ್ಲರ್ ಗೆ ಬೈದರೆ ನಿಮಗೇಕೆ ಸಿಟ್ಟು ?” ಎಂದು ಪ್ರಶ್ನಿಸಿದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: bjp congress jds Ashwathnarayan dkshivakumar siddaramiah hdk kumaraswamy Modi Yadiyurappa amithsha Vidhanasouda
admin July 14, 2023
Share this Article
Facebook Twitter Whatsapp Whatsapp LinkedIn Copy Link
Previous Article ಚಂದ್ರಯಾನ -3 ಉಡಾವಣೆ ಯಶಸ್ವಿಗೆ ಶುಭ ಕೋರಿದ ಯು.ಟಿ ಖಾದರ್
Next Article ನಾಯಕನಿಲ್ಲದ ಕನ್ನಡ ಚಿತ್ರರಂಗದ ಸಾರಥಿ ಆಗ್ತಾರಾ ಕರುನಾಡ ಚಕ್ರವರ್ತಿ ಶಿವಣ್ಣ !?
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?