• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ದಸರಾ ಪ್ರಾರಂಭಕ್ಕೂ ಮುನ್ನ ಚಾಮುಂಡಿ ಬೆಟ್ಟ ಪ್ಲಾಸ್ಟಿಕ್ ಮುಕ್ತ ಪ್ರದೇಶವಾಗಬೇಕು – ನ್ಯಾಯಮೂರ್ತಿ ಸುಭಾಷ್ ಬಿ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ದಸರಾ ಪ್ರಾರಂಭಕ್ಕೂ ಮುನ್ನ ಚಾಮುಂಡಿ ಬೆಟ್ಟ ಪ್ಲಾಸ್ಟಿಕ್ ಮುಕ್ತ ಪ್ರದೇಶವಾಗಬೇಕು – ನ್ಯಾಯಮೂರ್ತಿ ಸುಭಾಷ್ ಬಿ
ಜಿಲ್ಲೆಮೈಸೂರುರಾಜ್ಯ

ದಸರಾ ಪ್ರಾರಂಭಕ್ಕೂ ಮುನ್ನ ಚಾಮುಂಡಿ ಬೆಟ್ಟ ಪ್ಲಾಸ್ಟಿಕ್ ಮುಕ್ತ ಪ್ರದೇಶವಾಗಬೇಕು – ನ್ಯಾಯಮೂರ್ತಿ ಸುಭಾಷ್ ಬಿ

admin
Last updated: 2023/07/14 at 9:18 AM
admin
Share
3 Min Read
SHARE

ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲು ಎಲ್ಲಾ ಅಗತ್ಯವಾದ ಕ್ರಮಗಳನ್ನು ಕೈಗೊಂಡು, ದಸರಾ ಪ್ರಾರಂಭವಾಗುವ ಮುಂಚೆ ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ಪ್ರದೇಶವಾಗಬೇಕು ಎಂದು
ರಾಷ್ಟ್ರೀಯ ಹಸಿರು ನ್ಯಾಯಾಧಿಕಣದ ಮುಖ್ಯಸ್ಥರು ಹಾಗೂ ನ್ಯಾಯಮೂರ್ತಿಗಳಾದ ಸುಭಾಷ್ ಬಿ ಅಡಿ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಸ ವಿಲೇವಾರಿ ಕುರಿತು ಹಮ್ಮಿಕೊಂಡಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆಂಧ್ರಕ್ಕೆ ತಿರುಪತಿ ಹೇಗೆ ಪ್ರಮುಖ, ಕರ್ನಾಟಕದಲ್ಲಿ ಅಷ್ಟೇ ಪ್ರಮುಖ ಚಾಮುಂಡಿ ಬೆಟ್ಟ. ಪರಿಸರವನ್ನು ಸಂರಕ್ಷಿಸುವಲ್ಲಿ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ಚಾಮುಂಡಿ ಬೆಟ್ಟಕ್ಕೆ ಎಂಟ್ರಿ ಆಗುವ ಪ್ರದೇಶದಲ್ಲಿಯೇ ಪ್ಲಾಸ್ಟಿಕ್ ಕೊಂಡ್ಯೋಯ್ಯದಂತೆ ಪರಿಶೀಲಿಸಬೇಕು. ಪ್ರತಿ ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಗಳ ಬಳಕೆ ನಿಷೇಧಿಸಿ 20 ಲೀಟರ್ ನ ಕ್ಯಾನ್ ನೀರನ್ನು ಪೇಪರ್ ಕಪ್ ನಲ್ಲಿ ಬಳಸಬೇಕು ಎಂದರು.

ಚಾಮುಂಡಿಬೆಟ್ಟ ಪ್ಲಾಸ್ಟಿಕ್ ಬೆಟ್ಟ ಮುಕ್ತ ಮಾಡಲು ಅಲ್ಲಿನ ಗ್ರಾಮ ಪಂಚಾಯಿತಿ ಹಾಗೂ ದೇವಸ್ಧಾನ ಮಂಡಳಿ ಸೇರಿ ಅಂಗಡಿ ಮಳಿಗೆಗಳಲ್ಲಿ ಪ್ಲಾಸ್ಟಿಕ್ ಬಳಸದಂತೆ ಕ್ರಮವಹಿಸಬೇಕು. ಬಳಸಿದರೆ ದಂಡ ವಿಧಿಸುವ ಕೆಲಸ ಆಗಬೇಕು. ಕಾನೂನು ಪಾಲನೆ ಮಾಡದ್ದರೆ ಲೈಸನ್ಸ್ ರದ್ದು ಪಡಿಸಿ, ದೇವಸ್ಧಾನದ ಪ್ರವೇಶದಲ್ಲಿ ಪ್ಲಾಸ್ಟಿಕ್ ತರದಂತೆ ಪರಿಶೀಲಿಸಬೇಕು ಎಂದರು.

ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಸದಂತೆ ಅರಿವು ಮೂಡಿಸಿ. ಬೀದಿ ಬದಿ ವ್ಯಾಪಾರಿಗಳು ಏಕ ಬಳಕೆಯ ಪ್ಲಾಸ್ಟಿಕ್ ಬಳಸದಂತೆ ಅರಿವು ಮೂಡಿಸಬೇಕು. ಕಾನೂನು ಪಾಲಿಸದಿದ್ದರೆ ದಂಡ ಹಾಕಿ. ಮೈಸೂರನ್ನು ಸ್ವಚ್ಛ ನಗರಿಯಾಗಿ ಇಟ್ಟುಕೊಳ್ಳಬೇಕು. ಏಕ ಬಳಕೆಯ ಪ್ಲಾಸ್ಟಿಕ್ ನ್ನು ನಿಷೇಧಿಸಿದ ಮೊದಲ ನಗರ ಮೈಸೂರು. ಎಲ್ಲಾ ಶಾಲಾ ಕಾಲೇಜುಗಳಲ್ಲಿ ಎಲ್ಲಾ ರೀತಿಯ ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸಬೇಕು ಎಂದರು.

ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಕಸ ವಿಲೇವಾರಿ ಸರಿಯಾಗಿ ನಿರ್ವಹಣೆ ಮಾಡಬೇಕು. ಹಸಿ ಕಸವನ್ನು ಘನ ತಾಜ್ಯ ವಿಲೇವಾರಿ ಘಟಕ ಗಳಲ್ಲಿ ಗೊಬ್ಬರವಾಗಿ ತಯಾರಿಸಿ ಮರು ಬಳಕೆ ಮಾಡಬೇಕು. ರಸ್ತೆಗಳನ್ನು ಯಾವುದಾದರೂ ಉದ್ದೇಶಕ್ಕೆ ಅನುಮತಿ ಪಡೆದು ಆಗೆದರೆ, ಅವರೇ ರಸ್ತೆಯನ್ನು ದುರಸ್ಥಿ ಮಾಡಬೇಕು. ಮದುವೆ ಹಾಗೂ ಇತರೆ ಮೆರವಣೆಗೆ ಅಥವಾ 100 ಕಿಂತ ಹೆಚ್ಚಿನ ಜನ ಸೇರುವ ಸಭೆ ಸಮಾರಂಭಗಳಲ್ಲಿ ಆಗುವ ಕಸ ನಿರ್ವಹಣೆ ಗೆ ಶುಲ್ಕ ವಿಧಿಸಬೇಕು. ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆ ಗಳಲ್ಲಿ ಕಸವನ್ನು ಸರಿಯಾಗಿ ನಿರ್ವಹಣೆ ಮಾಡಬೇಕು. ಕೆಮಿಕಲ್ ಹಾಗೂ ಬಾಯೋಮೆಡಿಕಲ್ ವೆಸ್ಟ್ ನ್ನು ಸರಿಯಾಗಿ ಏಜೆನ್ಸಿಗಳು ಸಂಗ್ರಹಿಸಿ ನಿರ್ವಹಣೆ ಮಾಡಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಮಾತನಾಡಿ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ನಿಷೇಧಿಸಿದ್ದು, ಬಳಕೆದಾರರಿಗೆ ದಂಡ ವಿಧಿಸಲಾಗುತ್ತಿದೆ. ಆಷಾಡ ಮಾಸದಲ್ಲಿ ಚಾಮುಂಡಿ ಬೆಟ್ಟಕ್ಕೆ ಹೆಚ್ಚಿನ ಭಕ್ತಾದಿಗಳು ಭೇಟಿ ನೀಡುತ್ತಿದ್ದು, ಪ್ಲಾಸ್ಟಿಕ್ ಮುಕ್ತ ಪ್ರದೇಶ ಎಂದು ಘೋಸಿಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಲಲಿತ ಮಹಲ್ ಪ್ಯಾಲೇಸ್ ಬಳಿಯಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ವಿಶೇಷ 5 ತಂಡಗಳನ್ನು ರಚಿಸಿ ಪ್ಲಾಸ್ಟಿಕ್ ನ್ನು ಚಾಮುಂಡಿ ಬೆಟ್ಟಕ್ಕೆ ಏಕ ಬಳಕೆಯ ಪ್ಲಾಸ್ಟಿಕ್ ತೆಗೆದುಕೊಂಡು ಹೋಗದಂತೆ ತಡೆಯಲಾಗಿದೆ. ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನೀರನ್ನು ಬಳಸದೆ ಪೇಪರ್ ಅಥವಾ ಗಾಜಿನ ಲೋಟದಲ್ಲಿ ನೀರನ್ನು ನೀಡಲಾಗುತ್ತಿದೆ ಎಂದರು.

ಚಾಮುಂಡಿ ಬೆಟ್ಟದ ಪ್ರಾಧಿಕಾರವನ್ನು ರಚಿಸಲು ಮಾನ್ಯ ಮುಖ್ಯಮಂತ್ರಿ ಗಳು ಬಜೆಟ್ ನಲ್ಲಿ ಘೋಷಣೆ ಮಾಡಿದ್ದು ಪ್ರಾಧಿಕಾರ ರಚನೆ ಆದರೆ ಪ್ಲಾಸ್ಟಿಕ್ ಮುಕ್ತ ಚಾಮುಂಡಿ ಬೆಟ್ಟ ಮಾಡಲು ಅನುಕೂಲವಾಗುತ್ತದೆ. ಮುಂದಿನ ದಸರಾದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಲು ಯೋಜನೆ ರೂಪಿಸಲಾಗುವುದು ಎಂದರು.

ಸಭೆಯಲ್ಲಿ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ರಾದ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಾಯತ್ರಿ, ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಿ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದಿನೇಶ್ ಬಿ ಜಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಸ್ಥಿತರಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Chamundihills chamundibetta mysuru plasticban
admin July 14, 2023
Share this Article
Facebook Twitter Whatsapp Whatsapp LinkedIn Copy Link
Previous Article ನಾಯಕನಿಲ್ಲದ ಕನ್ನಡ ಚಿತ್ರರಂಗದ ಸಾರಥಿ ಆಗ್ತಾರಾ ಕರುನಾಡ ಚಕ್ರವರ್ತಿ ಶಿವಣ್ಣ !?
Next Article ಆ ಪುಣ್ಯಾತ್ಮ ನನ್ನ ಜೆಡಿಎಸ್ ನಿಂದ ಕಿತ್ತಕ್ಬುಟ್ಟ ದೇವೇಗೌಡರಿಗೆ ಸಿದ್ದು ಡಿಚ್ಚಿ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?