• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಓಮೆನ್ ಚಾಂಡಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ದೇಶ > ಓಮೆನ್ ಚಾಂಡಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
ದೇಶರಾಜ್ಯ

ಓಮೆನ್ ಚಾಂಡಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

admin
Last updated: 2023/07/18 at 5:24 AM
admin
Share
1 Min Read
SHARE

ಬೆಂಗಳೂರು : ಹಿರಿಯ ರಾಜಕೀಯ ಮುತ್ಸದ್ದಿ ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ‌ ಓಮೆನ್ ಚಾಂಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ನನಗೆ ಅತ್ಯಂತ ಆತ್ಮೀಯರಾಗಿದ್ದ ಓಮೆನ್ ಚಾಂಡಿಯವರ ನಿಧನದ ಸುದ್ದಿ ಆಘಾತಕಾರಿ. ಕೇರಳ‌ ರಾಜ್ಯವನ್ನು ಮಾನವ ಅಭಿವೃದ್ಧಿಯ ಸೂಚ್ಯಂಕಗಳಲ್ಲಿ ಉನ್ನತ ಸ್ಥಾನದಲ್ಲಿ ಇರಿಸಲು ಕಾರಣರಾದ ಮುಖ್ಯಮಂತ್ರಿಗಳಲ್ಲಿ ಓಮನ್ ಚಾಂಡಿ ಕೂಡ ಒಬ್ಬರಾಗಿದ್ದರು. ಎರಡು ಬಾರಿ ಕೇರಳ ರಾಜ್ಯದ ಮುಖ್ಯಮಂತ್ರಿಗಳಾಗಿ ಅಪಾರ ಸಾಧನೆ ಮಾಡಿದವರಾಗಿದ್ದರು.

2004 ರಿಂದ 2006 ಮತ್ತು 2011 ರಿಂದ 2016 ರವರೆಗೆ ಕೇರಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ಕೇರಳ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ನಿರಂತರವಾಗಿ ಸಂವಿಧಾನದ ಆಶಯಗಳ, ಮೌಲ್ಯಗಳ‌ ರಕ್ಷಣೆಗೆ ಶ್ರಮಿಸಿ ಹೋರಾಟ ರಾಜಕಾರಣದ ಪರಂಪರೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸುತ್ತಿದ್ದರು.

1970 ರಿಂದ ಕೇರಳ ರಾಜ್ಯ ವಿಧಾನಸಭೆಗೆ ನಿರಂತರವಾಗಿ ಆಯ್ಕೆಯಾಗುತ್ತಾ ಅತ್ಯಂತ ದೀರ್ಘಾವಧಿ ಶಾಸಕರಾಗಿ ಪುತ್ತುಪ್ಪಲ್ಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಾ ಬಂದಿದ್ದರು. ವಿಶ್ವಸಂಸ್ಥೆಯಿಂದ ಸಾರ್ವಜನಿಕ ಸೇವೆಗಾಗಿ ಪ್ರಶಸ್ತಿಯನ್ನು ಗಳಿಸಿದ ಏಕೈಕ ಭಾರತೀಯ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನೂ ಗಳಿಸಿದ್ದರು.

ಅವರು ಮುಖ್ಯಮಂತ್ರಿ ಆಗಿದ್ದ ಮತ್ತು ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ಬಾರಿ‌ ಭೇಟಿಯಾಗಿದ್ದೆವು. ಅಭಿವೃದ್ಧಿ ವಿಚಾರದಲ್ಲಿ ಅವರದೇ ಆದ ಸ್ಪಷ್ಟ ತಿಳಿವಳಿಕೆ ಮತ್ತು ಮಾದರಿಗಳನ್ನು ಹೊಂದಿದ್ದರು. ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಜಾರಿ ಮಾಡಿದ್ದ ಅನ್ನಭಾಗ್ಯ ಸೇರಿದಂತೆ ಹಲವು ಯೋಜನೆಗಳನ್ನು ಅಪಾರವಾಗಿ ಶ್ಲಾಘಿಸಿದ್ದರು.‌ ಬಡವರ ಮತ್ತು ಮಧ್ಯಮ ವರ್ಗದವರ ಬದುಕನ್ನು ಉನ್ನತೀಕರಿಸುವ ಸ್ಪಷ್ಟ ಗುರಿ‌ ಮತ್ತು ಮಾರ್ಗ ನಾವು ಜಾರಿ ಮಾಡಿರುವ ಕಾರ್ಯಕ್ರಮಗಳಲ್ಲಿ, ನಾನು ಮಂಡಿಸಿದ ಆಯವ್ಯಯಗಳಲ್ಲಿ ಇದೆ ಎಂದು ಪತ್ರ ಬರೆದು ಮೆಚ್ವುಗೆ ಸೂಚಿಸಿದ್ದರು.

ಇವರ ನಿಧನ ಅಭಿವೃದ್ಧಿ ಮತ್ತು ಜನಪರ ರಾಜಕಾರಣಕ್ಕೆ, ಕೇರಳ ರಾಜ್ಯಕ್ಕೆ, ಭಾರತೀಯ ರಾಜಕಾರಣಕ್ಕೆ ಹಾಗೂ ನನಗೆ ವೈಯುಕ್ತಿಕವಾಗಿ ತುಂಬಲಾರದ ನಷ್ಟ.

ಮೌಲ್ಯಯುತ ರಾಜಕಾರಣದ ಹೆಜ್ಜೆಗುರುತನ್ನು ಉಳಿಸಿ ಹೋಗಿರುವ ಓಮನ್ ಚಾಂಡಿಯವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬಕ್ಕೆ ಮತ್ತು ಅಪಾರ ಬಂಧು ಮಿತ್ರರಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿಎಂ ಸಿದ್ದರಾಮಯ್ಯ

ಮೈಸೂರು ಮಾರುಕಟ್ಟೆಗೆ ಪರಿಸರ ಸ್ನೇಹಿ ಇವಿ ಪೆಸೆಂಜರ್ ಹಾಗೂ ಗೂಡ್ಸ್ ಆಟೋ ಎಂಟ್ರಿ : ಬಿಬಿ ಮೋಟಾರ್ಸ್ ಗೆ ಮತ್ತೊಂದು ಗರಿ

ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

TAGGED: siddaramiah congress kerala omanchandi death
admin July 18, 2023
Share this Article
Facebook Twitter Whatsapp Whatsapp LinkedIn Copy Link
Previous Article ಮೂರು ಜ್ಯೋಟಿಗಳಿಗೆ ಬಂಪರ್ ಅರ್ಧ ಕೋಟಿ ಕುಟುಂಬಗಳಿಗೆ ನೇರ ಲಾಭ !
Next Article ಬೈಕ್ ವೀಲಿಂಗ್ ಮಾಡುತ್ತಿದ್ದ ಪುಂಡರಿಗೆ ಬಿಸಿ ಮುಟ್ಟಿಸಿದ ಪೊಲೀಸರು
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?