• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಧ್ವನಿ ಇಲ್ಲದವರ ಧ್ವನಿಯಾಗುವುದೇ ಪತ್ರಿಕಾ ವೃತ್ತಿಯ ಜವಾಬ್ದಾರಿ – ಸಿಎಂ ಸಿದ್ದರಾಮಯ್ಯ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಬೆಂಗಳೂರು ನಗರ > ಧ್ವನಿ ಇಲ್ಲದವರ ಧ್ವನಿಯಾಗುವುದೇ ಪತ್ರಿಕಾ ವೃತ್ತಿಯ ಜವಾಬ್ದಾರಿ – ಸಿಎಂ ಸಿದ್ದರಾಮಯ್ಯ
ಜಿಲ್ಲೆಬೆಂಗಳೂರು ನಗರರಾಜ್ಯ

ಧ್ವನಿ ಇಲ್ಲದವರ ಧ್ವನಿಯಾಗುವುದೇ ಪತ್ರಿಕಾ ವೃತ್ತಿಯ ಜವಾಬ್ದಾರಿ – ಸಿಎಂ ಸಿದ್ದರಾಮಯ್ಯ

admin
Last updated: 2023/07/24 at 9:24 AM
admin
Share
2 Min Read
SHARE

– ಸಾಮಾಜಿಕ ಜವಾಬ್ದಾರಿ ಪತ್ರಕರ್ತರಿಗೆ ಮಾತ್ರವಲ್ಲ ಸಾರ್ವಜನಿಕ ಕ್ಷೇತ್ರದಲ್ಲಿರುವ ಎಲ್ಲರಲ್ಲೂ ಇದ್ದರೆ ಜನಪರ ಬದಲಾವಣೆ ಸಾಧ್ಯ

– ಸಮಾಜದಲ್ಲಿ ಅವಕಾಶ ವಂಚಿತರು ಮತ್ತು ಧ್ವನಿ ಇಲ್ಲದವರನ್ನು ಮುಖ್ಯವಾಹಿನಿಗೆ ತರುವ ನನ್ನ ಪ್ರಯತ್ನ ನಿರಂತರ

ಬೆಂಗಳೂರು, ಜು 24: ಮಹಾತ್ಮಗಾಂಧಿ, ಅಂಬೇಡ್ಕರ್ ಅವರೂ ಪತ್ರಕರ್ತರಾಗಿ ಪತ್ರಿಕಾ ವೃತ್ತಿಗೆ ಮಾದರಿ ರೂಪಿಸಿಕೊಟ್ಟಿದ್ದಾರೆ. ಧ್ವನಿ ಇಲ್ಲದವರಿಗೆ ಧ್ವನಿ ನೀಡುವುದೇ ಪತ್ರಿಕಾ ವೃತ್ತಿಯ ಉದ್ದೇಶ, ಆಶಯ, ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಪ್ರೆಸ್ ಕ್ಲಬ್ ಆಫ್ ಬೆಂಗಳೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

ಇವತ್ತಿನ ಬಹಳಷ್ಟು ಪತ್ರಕರ್ತರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎನ್ನುವುದು ನನ್ನ ಭಾವನೆ. ಪತ್ರಿಕಾ ವೃತ್ತಿಯ ಆಶಯಕ್ಕೆ ತಕ್ಕಂತೆ ಇದ್ದೇವಾ, ಇಲ್ಲವಾ ಎನ್ನುವ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯ ಇದೆ ಎಂದರು.

ಸಮಾಜದಲ್ಲಿ ಇನ್ನೂ ಶೇ25 ರಷ್ಟು ಮಂದಿಗೆ ಶಿಕ್ಷಣ ಸಿಕ್ಕಿಲ್ಲ. ಆರ್ಥಿಕ ಅಸಮಾನತೆ ಇನ್ನೂ ಹೆಚ್ಚಾಗಿದೆ. ಹೀಗಾಗಿ ಅವಕಾಶ ವಂಚಿತರನ್ನು ಮುಖ್ಯವಾಹಿನಿಗೆ ತರುವ, ಸಮಾಜದ ಎಲ್ಲರಿಗೂ ನ್ಯಾಯ ದೊರಕಿಸಿಕೊಡುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿದ್ದೇನೆ.

ಸಾಮಾಜಿಕ ಅಸಮಾನತೆ ಹಿಂದಿನಿಂದ ಸಾಂಪ್ರದಾಯಿಕವಾಗಿ ನಡೆದುಕೊಂಡು ಬಂದಿದೆ. ಹೀಗಾಗಿ ಸಮಾಜದ ಬಹುಪಾಲು ಮಂದಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಮತ್ತು ತಾರತಮ್ಯಕ್ಕೆ ಬಲಿಯಾಗಿದ್ದಾರೆ.

ಇದಕ್ಕಾಗಿಯೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಅನುಷ್ಠಾನಗೊಳ್ಳುವ ಹಿಂದಿನ ದಿನ ತಾವು ಮಾಡಿದ ಐತಿಹಾಸಿಕ ಭಾಷಣದಲ್ಲಿ, “ಆರ್ಥಿಕ-ಸಾಮಾಜಿಕ ಸ್ವಾತಂತ್ರ್ಯ ಸಿಗದೆ ಕೇವಲ ದೇಶಕ್ಕೆ ಆಡಳಿತಾತ್ಮಕ, ರಾಜಕೀಯ ಸ್ವಾತಂತ್ರ್ಯ ಸಿಕ್ಕರೆ ಅಸಮಾನತೆಗೆ ಬಲಿಯಾದ ಜನ ಮುಂದೊಂದು ದಿನ ಈ ಸ್ವಾತಂತ್ರ್ಯ ಸೌಧವನ್ನು ಧ್ವಂಸ ಮಾಡಿಬಿಡಬಹುದು” ಎಂದಿದ್ದರು.

ದುಡಿಯುವ ವರ್ಗಗಳು ಹಸಿವಿನಿಂದ ಮಲಗಿದರೂ ಪರ್ವಾಗಿಲ್ಲ, ಅನ್ನಭಾಗ್ಯ ಮಾತ್ರ ಜಾರಿ ಮಾಡಬಾರದು ಎನ್ನುವ ಹೊಟ್ಟೆ ತುಂಬಿದವರ ಮನಸ್ಥಿತಿ ಸಮಾಜ ವಿರೋಧಿಯಾದದ್ದು.

ಜನರ ಜೇಬಿನಲ್ಲಿ ಹಣ ಇದ್ದರೆ ಮಾತ್ರ ದೇಶದ ಆರ್ಥಿಕತೆ ಬೆಳವಣಿಗೆ ಕಾಣುತ್ತದೆ. ಈ ಕಾರಣಕ್ಕೇ ನಮ್ಮ ಸರ್ಕಾರ ದುಡಿಯುವ ಜನರ ಜೇಬಿನಲ್ಲಿ ಹಣ ಇರುವ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಇದನ್ನು ವಿರೋಧಿಸುವ ಬಿಜೆಪಿಯವರ ಮನಸ್ಥಿತಿ ಸಮಾಜ ವಿರೋಧಿಯಾದದ್ದು. ಹೀಗಾಗಿ ಪತ್ರಿಕಾ ವೃತ್ತಿಯಲ್ಲಿರುವವರು ಬಡವರ ಪರವಾದ, ಜನರ ಪರವಾದ ಯೋಜನೆಗಳು ಜನರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದರು.

ಹಿರಿಯ ಪತ್ರಕರ್ತೆ ಡಾ.ಆರ್.ಪೂರ್ಣಿಮಾ ಅವರು ಪತ್ರಕರ್ತರ ಸಾಮಾಜಿಕ ಜವಾಬ್ದಾರಿ ಕುರಿತು ಉಪನ್ಯಾಸ ನೀಡಿದರು. ಹಿರಿಯ ಪತ್ರಕರ್ತರಾದ ಪಿ.ರಾಮಯ್ಯ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಹಿರಿಯ ಪತ್ರಕರ್ತರು ಹಾಗೂ ಈ-ದಿನ‌ ಸುದ್ದಿ ಸಂಸ್ಥೆಯ ಮುಖ್ಯಸ್ಥರಾದ ಡಿ.ಉಮಾಪತಿ, ಸುವರ್ಣ ನ್ಯೂಸ್ ಪ್ರಧಾನ ಸಂಪಾದಕರಾದ ರವಿ ಹೆಗಡೆ, ವಾರ್ತಾ ಇಲಾಖೆ ಆಯುಕ್ತರಾದ ಡಾ.ಹೇಮಂತ್ ಎಂ ನಿಂಬಾಳ್ಕರ್ ಉಪಸ್ಥಿತರಿದ್ದರು.

15 ಕ್ಕೂ ಹೆಚ್ಚು ಮಂದಿ ಹಿರಿಯ ಪತ್ರಕರ್ತರು ಮತ್ತು ಛಾಯಾಗ್ರಾಹಕರುಗಳನ್ನು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಸನ್ಮಾನಿಸಿದರು.

ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಸೇರಿ ಪದಾಧಿಕಾರಿಗಳು ಕಾರ್ಯಕ್ರಮ ನಡೆಸಿಕೊಟ್ಟರು.

ಸುಳ್ಳು ಬರೆದವರನ್ನೂ ನಾನು ಕೇಳಲ್ಲ

ಇವತ್ತು ಮಾಧ್ಯಮಗಳಲ್ಲಿ ಸತ್ಯ ನ್ಯಾಯ ಸಿಗತ್ತೆ ಎನ್ನುವ ಪರಿಸ್ಥಿತಿ ಈಗ ಇಲ್ಲ. ನನ್ನ ಬಗ್ಗೆ ಸುಳ್ಳು ಸುದ್ದಿ ಬರೆದರೂ ನಾನು ಯಾಕಪ್ಪಾ ಸುಳ್ಳು ಬರಿತೀಯ ಅಂತ ಕೇಳಲ್ಲ. ಜನ ಸಾಮಾನ್ಯರು ಇತರೆ ಮೂಲಗಳಿಂದ ಸತ್ಯ ತಿಳಿದುಕೊಳ್ಳುವಷ್ಟು ಸಮರ್ಥರಿದ್ದಾರೆ ಎಂದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: siddaramiah dkshivakumar journalists media congress bjp jds
admin July 24, 2023
Share this Article
Facebook Twitter Whatsapp Whatsapp LinkedIn Copy Link
Previous Article ರೀಲ್ಸ್ ಹುಚ್ಚಿಗೆ ಜಲಪಾತಕ್ಕೆ ಬಿದ್ದು ಪ್ರಾಣ ಕಳೆದುಕೊಂಡ ಭದ್ರಾವತಿ ಯುವಕ
Next Article ಮೈಸೂರು ಪ್ರವಾಸೋದ್ಯಮ ಉನ್ನತಿಗೆ ಟೂರಿಸ್ಟ್ ಪೊಲೀಸ್ ಕ್ಯು ಆರ್ ಕಾರ್ಡ್ ಪಾಸ್ ವಿತರಣೆಗೆ ಚಿಂತನೆ – ಸಚಿವ ಹೆಚ್.ಕೆ ಪಾಟೀಲ್
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?