ಮೈಸೂರು : ಗೃಹಲಕ್ಷಿ ಯೋಜನೆಯ ನಕಲಿ ಸರ್ಟಿಫಿಕೇಟ್ ಸಿದ್ದಪಡಿಸುತ್ತಿದ್ದ ಸೈಬರ್ ಸೆಂಟರ್ ಮಾಲೀಕನ ಬಂಧನ ಮಾಡಲಾಗಿದ್ದು ಸುರೇಶ್ ಕುಮಾರ್ ಬಂಧಿತ ಆರೋಪಿಯಾಗಿದ್ದಾನೆ.
ಮೇಟಗಳ್ಳಿ ಸುಧಾಮೂರ್ತಿ ರಸ್ತೆಯಲ್ಲಿರುವ ನಕುಲ್ ನೆಟ್ ವರ್ಲ್ಡ್ ಸೈಬರ್ ಸೆಂಟರ್ ಮಾಲೀಕ ಸುರೇಶ್ ಕುಮಾರ್ ನಕಲಿ ಸರ್ಟಿಫಿಕೆಟ್ ಸಿದ್ಧಪಡಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಎಸಿಪಿ ಗಜೇಂದ್ರ ನೇತೃತ್ವದಲ್ಲಿ ದಾಳಿ ನಡೆಸಿರುವ ಪೋಲೀಸರು ಫೇಕ್ ಸರ್ಟಿಫಿಕೇಟ್ ಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
ಸುಕೇಶ್ ಕುಮಾರ್ ಎಂಬುವರ ದೂರಿನ ಮೇರೆಗೆ ದಾಳಿ ನಡೆಸಲಾಗಿದೆ. ಸದ್ಯ ಸೈಬರ್ ಸೆಂಟರ್ ಗೆ ಪೊಲೀಸರು ಬೀಗ ಜಡಿದು ಕಾನೂನು ಕ್ರಮ ಜರುಗಿಸಲು ಮುಂದಾಗಿದ್ದಾರೆ. ನಕುಲ್ ನೆಟ್ ವರ್ಲ್ಡ್ ಎಂಬ ಅನಧಿಕೃತ ಸೇವಾ ಕೇಂದ್ರ ಪ್ರಾರಂಭಿಸಿ ಗೃಹಲಕ್ಷ್ಮಿ ಯೋಜನೆಯ ಫೇಕ್ ಸರ್ಟಿಫಿಕೇಟ್ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮೇಟಗಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.