ಮೈಸೂರು: ಬೆಂಗಳೂರು- ಮೈಸೂರು ಹೆದ್ದಾರಿ ಕಾಮಗಾರಿ ಅಪೂರ್ಣವಾಗಿದೆ ಎಂದು ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆದ್ದಾರಿಯಲ್ಲಿ ಸುಮಾರು 25 ಅಪಘಾತ ವಲಯಗಳು ಇವೆ.ಎಲ್ಲ ಕಡೆಗೆ ನಾನು ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ.ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಕಾಮಗಾರಿಗಳು ಬಾಕಿ ಇವೆ.ಸಿಸಿ ಕ್ಯಾಮರಾಗಳ ಅಳವಡಿಕೆ ಬಾಕಿ ಇದೆ.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಪೊಲೀಸರನ್ನು ಕೇಳಿ ಕಾಮಗಾರಿ ಮಾಡಿಲ್ಲ.
ಸಮಸ್ಯೆ ಆದಾಗ ಸರಿ ಮಾಡಿ ಅಂತ ನಮ್ಮನ್ನು ಕರೆಯುತ್ತಾರೆ ಎಂದರು.
ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಹಲವಾರು ಸಮಸ್ಯೆಗಳು.
ಅನೇಕ ಕಾಮಗಾರಿಗಳು ಬಾಕಿ ಉಳಿದಿವೆ.
ಈಗಾಗಲೇ ಹೆದ್ದಾರಿ ಉದ್ಘಾಟನೆ ಆಗಿದೆ.
ಬಾಕಿ ಕಾಮಗಾರಿಗಳಿಗೆ ಹೆಚ್ಚುವರಿ ಅನುದಾನ ತಂದು ಕೆಲಸ ಮಾಡಿಸುವುದು ಎನ್ಎಚ್ಎಐ ಅಧಿಕಾರಿಗಳ ಕೆಲಸ.ಸರ್ಕಾರದ ನಿಯಮಗಳ ಪ್ರಕಾರ ಪ್ರಸ್ತಾವನೆ, ಟೆಂಡರ್ ಮಾಡಿ ಕೆಲಸ ಮಾಡಿಸಬೇಕಿದೆ ಎಂದು ಅಲೋಕ್ ಕುಮಾರ್ ಸ್ಪಷ್ಟಪಡಿಸಿದರು