ಮೈಸೂರು : ಹಾಡಹಗಲೇ ಮನೆಗೆ ನುಗ್ಗಿ ಕಳ್ಳತನ ಮಾಡಿರುವ ಘಟನೆ ಮೈಸೂರಿನ ಸರ್ದಾರ್ ವಲ್ಲಭಾಯ್ ಪಟೇಲ್ ನಗರದ ಪೋಲೀಸ್ ಬಡಾವಣೆಯಲ್ಲಿ ನಡೆದಿದೆ.
ಮನೆಯ ಬೀಗ ಮುರಿದು ಕಳ್ಳತನ ಮಾಡಿರುವ ಚಾಲಾಕಿ ಕಳ್ಳರು ಕೈ ಚಳಕ ಸಿಸಿಟಿವಿ ಯಲ್ಲಿ ಸೆರೆಯಾಗಿದೆ.
ಮನೆಯಲ್ಲಿದ್ದ 1.5ಲಕ್ಷ ಬೆಲೆ ಬಾಳುವ ಚಿನ್ನಾಭರಣ ಕಳ್ಳರು ಕದ್ದೋಯ್ದಿದ್ದಾರೆ.ಮನೆಯಲ್ಲಿ ಯಾರು ಇಲ್ಲದೆ ಇರುವುದನ್ನ ಗಮಿನಿಸಿ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಆಲನಹಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಡಾವಣೆ ನಿವಾಸಿಗಳು ಜಾಗೃತೆಯಿಂದಿರಲು ಪೋಲೀಸರ ಮನವಿ ಮಾಡಿದ್ದಾರೆ ಅಲ್ಲದೆ ಆಲನಹಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.