• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಜಮೀನು ವಿವಾದ ಅವಮಾನ ತಾಳಲಾರದೆ ಗುರುರಾವ್ ಭಾಂಗೆ ಆತ್ಮಹತ್ಯೆ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಜಮೀನು ವಿವಾದ ಅವಮಾನ ತಾಳಲಾರದೆ ಗುರುರಾವ್ ಭಾಂಗೆ ಆತ್ಮಹತ್ಯೆ
ಅಪರಾಧಜಿಲ್ಲೆಮೈಸೂರು

ಜಮೀನು ವಿವಾದ ಅವಮಾನ ತಾಳಲಾರದೆ ಗುರುರಾವ್ ಭಾಂಗೆ ಆತ್ಮಹತ್ಯೆ

admin
Last updated: 2023/08/07 at 2:02 AM
admin
Share
1 Min Read
SHARE

– ಜಮೀನು ವಿವಾದ, ಹಲ್ಲೆ ಅವಮಾನ ತಾಳಲಾರದೆ ಆತ್ಮಹತ್ಯೆಗೆ ಶರಣು


– ಮೂವರ ವಿರುದ್ದ ಪ್ರಕರಣ ದಾಖಲು. ಆರೋಪಿಗಳು ಪರಾರಿ


ಹುಣಸೂರು : ಜಮೀನು ವಿವಾದದ ಹಿನ್ನೆಲೆಯಲ್ಲಿ ಮರಕ್ಕೆ ಕಟ್ಟಿಹಾಕಿ ಥಳಿಸಿದ್ದರಿಂದ ಅವಮಾನಿತರಾಗಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕುಡಿನೀರು ಮುದ್ದನಹಳ್ಳಿಯಲ್ಲಿ ನಡೆದಿದೆ.

ಹುಣಸೂರು ತಾಲೂಕಿನ ಕುಡಿನೀರುಮುದ್ದನಹಳ್ಳಿ ಗ್ರಾಮದ ಗುರುರಾವ್ ಭಾಂಗೆ(೬೦) ಆತ್ಮಹತ್ಯೆಗೆ ಶರಣಾದವರು. ಪತ್ನಿ, ಮಕ್ಕಳಿದ್ದಾರೆ. ಈ ಸಂಬAಧ ಪತ್ನಿ ಮಂಜುಳಾ ಬಾಯಿ ಪತಿಯ ಆತ್ಮಹತ್ಯೆಗೆ ಗ್ರಾಮದ ಮಹೇಶ್ ಮತ್ತವರ ಪತ್ನಿ ಸಾಕಮ್ಮ ಹಾಗೂ ಇವರ ಪುತ್ರ ರಂಜನ್‌ರ ಕಿರುಕುಳವೇ ಕಾರಣವೆಂದು ದೂರು ದಾಖಲಿಸಿದ್ದಾರೆ.

ಘಟನೆ ವಿವರ: ತರೀಕಲ್ ಗ್ರಾಮದಲ್ಲಿ ಗುರುರಾವ್ ಬಾಂಗೆಗೆ ೨.೦೫ಎಕರೆ ಜಮೀನಿದ್ದು, ಪಕ್ಕದ ಜಮೀನಿನ ಮಹೇಶ್ ಮತ್ತು ಕುಟುಂಬದವರು ಗುರುರಾವ್ ಬಾಂಗೆ ಜಮೀನಿನಲ್ಲಿ ೧೬ಗುಂಟೆ ನಮ್ಮ ಕುಟುಂಬಕ್ಕೆ ಸೇರಬೇಕೆಂದು ಹಿಂದಿನಿAದಲೂ ಗುರುರಾವ್ ಭಾಂಗೆ ಕುಟುಂಬಕ್ಕೂ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಕಳೆದ ಎರಡು ವರ್ಷಗಳ ಹಿಂದೆ ಜಮೀನು ವಿವಾದ ನ್ಯಾಯಾಲಯದ ಮೆಟ್ಟಿಲೇರಿತ್ತು.

ಪೊಲೀಸರ ಎಚ್ಚರಿಕೆ:
ಶುಕ್ರವಾರ ಸಹ ಮಹೇಶ್ ಮತ್ತು ಗುರುರಾವ್ ಬಾಂಗೆ ನಡುವೆ ಗಲಾಟೆಯಾಗಿತ್ತು. ಈ ಸಂಬAಧ ಗ್ರಾಮಾಂತರ ಠಾಣೆ ಪೊಲೀಸರು ಇಬ್ಬರನ್ನು ಕರೆಸಿ ಜಮೀನು ವಿವಾದ ನ್ಯಾಯಾಲಯದಲ್ಲಿದ್ದು, ಆದೇಶ ಹೊರಬೀಳುವವರೆಗೆ ಇಬ್ಬರೂ ಸಹ ಗಲಾಟೆ ಮಾಡಿಕೊಳ್ಳದಂತೆ ಎಚ್ಚರಿಸಿ ಕಳುಹಿಸಿದ್ದರು.

ಅವಮಾನ ತಾಳಲಾರದೆ ಆತ್ಮಹತ್ಯೆ:
ಈ ನಡುವೆ ಶುಕ್ರವಾರ ಸಂಜೆ ಮತ್ತೆ ಗಲಾಟೆ ನಡೆದಿದ್ದು, ಮಹೇಶ್ ಮತ್ತವರ ಪತ್ನಿ ಸಾಕಮ್ಮ ಇವರ ಪುತ್ರ ರಂಜನ್‌ರವರು ಗುರುರಾವ್ ಭಾಂಗೆ ಅವರಿಗೆ ಕುಡಿನೀರು ಮುದ್ದನಹಳ್ಳಿ ಗ್ರಾಮದ ಸರ್ಕಲ್‌ನಲ್ಲಿ ಚಪ್ಪಲಿಯಿಂದ ಮನಬಂದAತೆ ಥಳಿಸಿ ಅಪಮಾನ ಮಾಡಿದ್ದರಿಂದ ಮನನೊಂದ ಗುರುರಾವ್‌ಭಾಂಗೆ ಶನಿವಾರ ಮುಂಜಾನೆ ತಮ್ಮ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅಸ್ವಸ್ಥಗೊಂಡಿದ್ದವರನ್ನು ಹುಣಸೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ತಮ್ಮ ಪತಿಯ ಸಾವಿಗೆ ಮಹೇಶ್, ಆತನ ಪತ್ನಿ ಸಾಕಮ್ಮ ಹಾಗೂ ಇವರ ಪುತ್ರ ರಂಜನ್‌ರವರುಗಳೇ ಕಾರಣವೆಂದು ಗುರುರಾವ್‌ಭಾಂಗೆ ಪತ್ನಿ ಮಂಜುಳಾಬಾಯಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Mysuru crime Crimenews hunasuru
admin August 7, 2023
Share this Article
Facebook Twitter Whatsapp Whatsapp LinkedIn Copy Link
Previous Article ತಾಕತ್ತಿದ್ದರೆ ದೇಶದ ಎಲ್ಲಾ ರಾಜ್ಯಗಳಲ್ಲಿ ಗ್ಯಾರೆಂಟಿ ಯೋಜನೆ ಬಿಜೆಪಿ ಜಾರಿ ಮಾಡ್ಲಿ – ಸಿಎಂ ಸಿದ್ದರಾಮಯ್ಯ
Next Article ಮನೆಯಿಂದ ಹೊರಹೋದ ಗೃಹಿಣಿ ನಾಪತ್ತೆ !
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?