• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಕಾಂಗ್ರೆಸ್ ಪಕ್ಷದಂತೆ ಬಿಜೆಪಿ ಗೆಲ್ಲಲು ಲಂಚದ ಮೊರೆ ಹೋಗುವುದಿಲ್ಲ – ಅಮಿತ್ ಶಾ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ದೇಶ > ಕಾಂಗ್ರೆಸ್ ಪಕ್ಷದಂತೆ ಬಿಜೆಪಿ ಗೆಲ್ಲಲು ಲಂಚದ ಮೊರೆ ಹೋಗುವುದಿಲ್ಲ – ಅಮಿತ್ ಶಾ
ದೇಶರಾಜಕೀಯರಾಜ್ಯ

ಕಾಂಗ್ರೆಸ್ ಪಕ್ಷದಂತೆ ಬಿಜೆಪಿ ಗೆಲ್ಲಲು ಲಂಚದ ಮೊರೆ ಹೋಗುವುದಿಲ್ಲ – ಅಮಿತ್ ಶಾ

admin
Last updated: 2023/08/10 at 2:03 AM
admin
Share
2 Min Read
SHARE

ದೆಹಲಿ : ಮಣಿಪುರ ಹಿಂಸಾಚಾರದ ವಿಚಾರವಾಗಿ ವಾಗ್ದಾಳಿ ನಡೆಸಿರುವ ಪ್ರತಿಪಕ್ಷಗಳಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಖಡಕ್ ಉತ್ತರ ನೀಡಿದ್ದಾರೆ. ರಾಜ್ಯದ ಬಿರೇನ್ ಸಿಂಗ್ ಸರ್ಕಾರವು ಸಮರ್ಥವಾಗಿ ಹಿಂಸಾಚಾರ ಪರಿಸ್ಥಿತಿಯನ್ನು ಎದುರಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಪ್ರತಿಪಕ್ಷಗಳ ಬೇಡಿಕೆಗಳನ್ನು ಅವರು ತಳ್ಳಿಹಾಕಿದ್ದಾರೆ.

ರಾಜ್ಯ ಸರ್ಕಾರವು ಸಹಕರಿಸದಿದ್ದಾಗ ರಾಷ್ಟ್ರಪತಿ ಆಳ್ವಿಕೆ ಹೇರಲಾಗುತ್ತದೆ. ಆದರೆ ಮಣಿಪುರ ಸರ್ಕಾರ ಹಿಂಸಾಚಾರವನ್ನು ಹತ್ತಿಕ್ಕಲು ಕ್ರಮ ಕೈಗೊಂಡಿದೆ. ಅಲ್ಲಿನ ಮುಖ್ಯಮಂತ್ರಿ ಈ ವಿಚಾರವಾಗಿ ಸಹಕರಿಸುತ್ತಿದ್ದಾರೆ. ಅಲ್ಲಿನ ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ ಎಂದು ಸರ್ಕಾರ ಹೇಳಿಕೊಂಡಿದೆ. ರಾಜ್ಯದಲ್ಲಿ ಸುಮಾರು 36,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. 

ಜನರನ್ನು ದಾರಿತಪ್ಪಿಸಲು ಅವಿಶ್ವಾಸ ಮಂಡಿಸಲಾಗಿದೆ ಎಂದು ಆರೋಪಿಸಿದ ಅವರು, ದೇಶ ವಂಶಾಡಳಿತ, ಭ್ರಷ್ಟಾಚಾರ, ಜಾತೀಯತೆಯಿಂದ ನರಳುತ್ತಿತ್ತು. ಪ್ರಧಾನಿ ಮೋದಿ ಇದನ್ನೆಲ್ಲ ಮುಗಿಸಿ ದೇಶಕ್ಕೆ ಸಾಧನೆಯ ರಾಜಕಾರಣ ನೀಡಿದ್ದಾರೆ. ಸ್ವಾತಂತ್ರ್ಯದ ನಂತರ ಭಾರತವು ಸಂಪೂರ್ಣವಾಗಿ ನಂಬುವ ನಾಯಕರಿದ್ದರೆ ಅದು ಪ್ರಧಾನಿ ಮೋದಿ. ಈ ಅವಿಶ್ವಾಸ ನಿರ್ಣಯವು ಜನರ ಆಯ್ಕೆಯನ್ನು ಪ್ರತಿಬಿಂಬಿಸುವುದಿಲ್ಲ. ಕಾಂಗ್ರೆಸ್ ಪಕ್ಷದಂತೆ ಬಿಜೆಪಿ ಗೆಲ್ಲಲು ಲಂಚದ ಮೊರೆ ಹೋಗುವುದಿಲ್ಲ ಎಂದಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ವಿಚಾರವಾಗಿ, ಆರ್ಟಿಕಲ್ 370 ಜವಾಹರಲಾಲ್ ನೆಹರೂ ಸರ್ಕಾರದಿಂದ ತಪ್ಪಾಗಿದೆ. ಇದನ್ನು ಆಗಸ್ಟ್ 5 ಮತ್ತು 6, 2019 ರಂದು ರದ್ದುಗೊಳಿಸಲಾಯಿತು. ಅದರೊಂದಿಗೆ ಕಾಶ್ಮೀರದಿಂದ ಎರಡು ಧ್ವಜಗಳು ಮತ್ತು ಎರಡು ಸಂವಿಧಾನಗಳು ಹೊರಟುಹೋದವು. ಮೋದಿ ಅವರು ದೇಶಕ್ಕೆ ಅದರ ಸಂಪೂರ್ಣ ಏಕೀಕರಣವನ್ನು ಖಚಿತಪಡಿಸಿದರು ಎಂದು ಅವರು ಹೇಳಿದ್ದಾರೆ.

ಇದರಿಂದ ಎನ್‍ಜಿಒವೊಂದು (ಕಾಂಗ್ರೆಸ್) ಇತ್ತೀಚೆಗೆ ಸಭೆ ನಡೆಸಿ ಕೇಂದ್ರವು ಹುರಿಯತ್, ಜಮಿಯತ್ ಮತ್ತು ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಬೇಕು ಎಂದು ವರದಿಯನ್ನು ಬಿಡುಗಡೆ ಮಾಡಿದೆ. ನಾವು ಹುರಿಯತ್, ಜಮಿಯತ್ ಹಾಗೂ ಪಾಕಿಸ್ತಾನದೊಂದಿಗೆ ಮಾತನಾಡುವುದಿಲ್ಲ. ಚರ್ಚೆ ನಡೆಸಿದರೆ ಕಣಿವೆಯ ಯುವಕರ ಜೊತೆ ನಡೆಸುತ್ತೇವೆ. ಅವರು ನಮ್ಮವರೇ ಆಗಿದ್ದಾರೆ ಮತ್ತು ನಾವು ಅವರೊಂದಿಗೆ ಮಾತನಾಡುತ್ತೇವೆ ಎಂದು ಅವರು ಹೇಳಿದ್ದಾರೆ.

ಬುಡಕಟ್ಟು ಜನಾಂಗಗಳ ನಡುವಿನ ಘರ್ಷಣೆ ಸುಮಾರು ಮೂರು ತಿಂಗಳ ಕಾಲ ಮುಂದುವರೆದಿದ್ದು ಸರ್ಕಾರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ವೈಫಲ್ಯವನ್ನು ವಿರೋಧ ಪಕ್ಷಗಳು ಟೀಕಿಸಿವೆ. ಕಳೆದ ನಾಲ್ಕು ತಿಂಗಳಿನಿಂದ ಹಿಂಸಾಚಾರಕ್ಕೆ ತುತ್ತಾಗಿರುವ ಮಣಿಪುರದಲ್ಲಿ ಸರ್ಕಾರ ಅಸಮರ್ಥವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸಿವೆ. ಮುಂಗಾರು ಅಧಿವೇಶನಕ್ಕೆ ಮುನ್ನ ರಾಜ್ಯದಲ್ಲಿ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವೀಡಿಯೋ ವೈರಲ್ ಆಗಿತ್ತು. ಈ ವಿಚಾರವಾಗಿ ದೇಶವೇ ಬೆಚ್ಚಿಬಿದ್ದಿದೆ ಎಂದು ಪ್ರತಿಪಕ್ಷಗಳು ವಾಗ್ದಾಳಿ ನಡೆಸಿವೆ. ಈ ಹಿಂದೆ ಜೂನ್‍ನಲ್ಲಿ ಅಮಿತ್ ಶಾ ಅವರೊಂದಿಗಿನ ಸಭೆಯ ಸಂದರ್ಭದಲ್ಲಿ ಪ್ರತಿಪಕ್ಷಗಳು ಬಿರೇನ್ ಸಿಂಗ್ ಸರ್ಕಾರವನ್ನು ವಜಾಗೊಳಿಸುವಂತೆ ಒತ್ತಾಯಿಸಿದ್ದವು.

ಆ ವ್ಯಕ್ತಿ ಅಧಿಕಾರದಲ್ಲಿದ್ದರೆ ನೀವು ಶಾಂತಿಯಿಂದ ಇರಲು ಸಾಧ್ಯವಿಲ್ಲ ಎಂದು ಆರ್‍ಜೆಡಿ ಸಂಸದ ಮನೋಜ್ ಝಾ ಸಭೆಯಲ್ಲಿ ಹೇಳಿದ್ದರು. ರಾಜ್ಯದ ನಾಯಕತ್ವದಲ್ಲಿ ಪ್ರತಿಪಕ್ಷಗಳ ನಂಬಿಕೆಯ ಕೊರತೆಯನ್ನು ಎತ್ತಿ ತೋರಿಸಿದ್ದರು. ಮಣಿಪುರದ ಜನಾಂಗೀಯ ಘರ್ಷಣೆಗಳು 150 ಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದ್ದರೂ ಮಣಿಪುರದಲ್ಲಿ ರಾಜ್ಯ ಸರ್ಕಾರವನ್ನು ಯಾಕೆ ವಜಾಗೊಳಿಸಿಲ್ಲ ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು. ಇದರ ನಡುವೆಯೇ ಅಮಿತ್ ಶಾ ಕಳೆದ ತಿಂಗಳು ಮಣಿಪುರಕ್ಕೆ ಭೇಟಿ ನೀಡಿ ಶಾಂತಿ ಸ್ಥಾಪನೆಗೆ ಯತ್ನಿಸಿದ್ದರು

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿಎಂ ಸಿದ್ದರಾಮಯ್ಯ

ಮೈಸೂರು ಮಾರುಕಟ್ಟೆಗೆ ಪರಿಸರ ಸ್ನೇಹಿ ಇವಿ ಪೆಸೆಂಜರ್ ಹಾಗೂ ಗೂಡ್ಸ್ ಆಟೋ ಎಂಟ್ರಿ : ಬಿಬಿ ಮೋಟಾರ್ಸ್ ಗೆ ಮತ್ತೊಂದು ಗರಿ

ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

TAGGED: Amit sha modi Siddaramiah dkshivakumar Rahul gandhi soniyagandhi Mallikarjun kharge
admin August 10, 2023
Share this Article
Facebook Twitter Whatsapp Whatsapp LinkedIn Copy Link
Previous Article ಸ್ಪಂದನಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
Next Article ಗಾಂಜಾ ಗುಂಗಿನಲ್ಲಿದ್ದ ಯುವತಿಯರ ರಕ್ಷಣೆ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?