ಮೈಸೂರು : ಗುತ್ತಿಗೆದಾರರ ಬಿಲ್ ಬಾಕಿ ವಿಚಾರಕ್ಕೇ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
40% ಕಮಿಷನ್ ಬಗ್ಗೆ ತನಿಖೆಯಾಗದೆ ಬಿಲ್ ಹೇಗೆ ಬಿಡುಗಡೆ ಮಾಡಲು ಸಾಧ್ಯ.ತನಿಖೆ ಪ್ರಗತಿಯಲ್ಲಿದೆ.
ತಪ್ಪು ಮಾಡದೆ ಇರುವವರಿಗೆ ಬಿಲ್ ನಲ್ಲಿ ಯಾವುದೇ ಸಮಸ್ಯೆಯಾಗುವುದಿಲ್ಲ.ತಪ್ಪು ಮಾಡಿರುವವರಿಗೆ ಆ ಭಯ ಇರುತ್ತೆ.ಬಿಜೆಪಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದರು.
ಬಿಜೆಪಿಗೆ ಏನು ವಿಚಾರ ಇಲ್ಲದೆ ಈ ಬಗ್ಗೆ ಹೋರಾಟ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. 40% ಕಮಿಷನ್ ಗಾಗಿಯೇ ಜನ ಅವರನ್ನ ತಿರಸ್ಕರಿಸಿದ್ದಾರೆ.
ನಾವು ಅವತ್ತು ಮಾಡಿರುವ ಆರೋಪವನ್ನ ಸಾಭಿತು ಮಾಡಬೇಕಿದೆ.ಈ ಕಾರಣ ನಾಲ್ಕು ಟೀಂ ತನಿಖೆ ಮಾಡುತ್ತಿದೆ.ನಡೆದಿರುವ ಕಾಮಾಗಾರಿಗಳೆಲ್ಲಾ ಮೂರು ವರ್ಷದ ಹಿಂದೆ ಮುಕ್ತಾಯವಾಗಿದೆ.ಈಗ ಬಿಲ್ ಗಾಗಿ ಆತುರ ಪಟ್ಟರೆ ಹೇಗೆ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.