• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ರಾಜ್ಯಕ್ಕೆ ಬರಬೇಕಾದ ತೆರಿಗೆ ಕೊಡದೆ ಬಿಜೆಪಿ ವಂಚಿಸಿದೆ – ಸಿಎಂ ಸಿದ್ದರಾಮಯ್ಯ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ರಾಜಕೀಯ > ರಾಜ್ಯಕ್ಕೆ ಬರಬೇಕಾದ ತೆರಿಗೆ ಕೊಡದೆ ಬಿಜೆಪಿ ವಂಚಿಸಿದೆ – ಸಿಎಂ ಸಿದ್ದರಾಮಯ್ಯ
ರಾಜಕೀಯರಾಜ್ಯ

ರಾಜ್ಯಕ್ಕೆ ಬರಬೇಕಾದ ತೆರಿಗೆ ಕೊಡದೆ ಬಿಜೆಪಿ ವಂಚಿಸಿದೆ – ಸಿಎಂ ಸಿದ್ದರಾಮಯ್ಯ

admin
Last updated: 2023/08/14 at 9:20 AM
admin
Share
4 Min Read
SHARE

– ವಿಧಾನಸಭಾ ಚುನಾವಣೆಯ ಅಭೂತಪೂರ್ವ ಗೆಲುವನ್ನು ಪಕ್ಷದ ಕಾರ್ಯಕರ್ತರಿಗೆ ಅರ್ಪಿಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

– 34 ವರ್ಷಗಳ ಬಳಿಕ ಅತ್ಯಂತ ದೊಡ್ಡ ಮಟ್ಟದಲ್ಲಿ ಜನಾಶೀರ್ವಾದ ಕಾಂಗ್ರೆಸ್ ಗೆ ಸಿಕ್ಕಿದೆ

– ಪ್ರಧಾನಿ ಮೋದಿಯವರು ರೋಡ್ ಶೋ ನಡೆಸಿದ ಕ್ಷೇತ್ರಗಳಲ್ಲೆಲ್ಲಾ ಬಿಜೆಪಿ ಸೋತಿದೆ: ರಾಹುಲ್ ಗಾಂಧಿ ಭಾರತ್ ಜೋಡೋ ನಡೆಸಿದ ಕ್ಷೇತ್ರಗಳಲ್ಲೆಲ್ಲಾ ಕಾಂಗ್ರೆಸ್ ಗೆದ್ದಿದೆ

– ಇಡಿ ದೇಶದ ಜನರ ಮತ್ತು ಪಕ್ಷದ ಕಾರ್ಯಕರ್ತರ ಭರವಸೆಯನ್ನು ರಾಜ್ಯದ ಫಲಿತಾಂಶ ಹೆಚ್ಚಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಇಡಿ ದೇಶದ ಜನರ ಮತ್ತು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಭರವಸೆಯನ್ನು ಹೆಚ್ಚಿಸಿ ಸಂಚಲನ ಮೂಡಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಕೆಪಿಸಿಸಿ ಕಚೇರಿಯ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಒಂದು ಕಡೆ RSS ಹಿಡನ್ ಅಜೆಂಡಾ ಜಾರಿಗೊಳಿಸುತ್ತಾ ಮತ್ತೊಂದು ಕಡೆ ಬೆಲೆ ಏರಿಕೆ, ಹಣದುಬ್ಬರ, ಭ್ರಷ್ಟಾಚಾರ, ದುರಾಡಳಿತದಿಂದ ನಾಡಿನ, ದೇಶದ ಜನತೆಯನ್ನು ವಿಪರೀತ ಸಂಕಷ್ಟಕ್ಕೆ ಸಿಲುಕಿಸಿದ್ದರು. ನಾಡಿನ ಜನ ಈ ಎಲ್ಲಾ ದುಷ್ಟಾಚಾರವನ್ನು ಸಮರ್ಥವಾಗಿ ಧಿಕ್ಕರಿಸಿ ಸೋಲಿಸಿದ್ದಾರೆ ಎಂದರು.

ಮನುಸ್ಮೃತಿಯ ಜಾತಿ ಆಧಾರಿತ ಶೋಷಿತ ನ್ಯಾಯಪದ್ಧತಿಯನ್ನು ಜಾರಿಗೆ ತರುವ ಮನಸ್ಥಿತಿಯವರು ಅಂಬೇಡ್ಕರ್ ಅವರ ಸಂವಿಧಾನದ ಮೇಲೆ ಸೇಡು ತೀರಿಸಿಕೊಳ್ಳುವ ರೀತಿಯಲ್ಲಿ ವರ್ತಿಸುತ್ತಾ ಸಂವಿಧಾನವನ್ನು ಮುಗಿಸಲು ಯತ್ನಿಸುತ್ತಿದ್ದಾರೆ.

ಸಂವಿಧಾನ ಬದಲಾವಣೆ ಆದರೆ ದೇಶದ ಶೇ 90 ಕ್ಕೂ ಹೆಚ್ಚು ಸಂಖ್ಯೆಯ ಜನರ ದುಡಿಯುವ ಮತ್ತು ಬದುಕಿನ ಅವಕಾಶಗಳು ನಾಶವಾಗುತ್ತದೆ. ಆದ್ದರಿಂದ ಸಂವಿಧಾನವನ್ನು ಉಳಿಸಿ ದೇಶದ ದುಡಿಯುವ ಜನ ವರ್ಗಗಳ ಬದುಕಿನ ಅವಕಾಶಗಳನ್ನು ಕಾಪಾಡುವ ಬಹಳ ದೊಡ್ಡ ಜವಾಬ್ದಾರಿ ದೇಶದ ಜನರ ಮೇಲಿದೆ. ಕಾಂಗ್ರೆಸ್ ಗೆ ನಾಡಿನ ಮತ್ತು ದೇಶದ ದುಡಿಯುವ ವರ್ಗಗಳು ಈ ಜವಾಬ್ದಾರಿಯನ್ನು ನೀಡಿದ್ದಾರೆ. ಇದನ್ನು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಅರ್ಥ ಮಾಡಿಕೊಳ್ಳಬೇಕಿದೆ ಎಂದರು.

ಜನರ ಜೇಬಿನಲ್ಲಿರುವ ಹಣವನ್ನು ಕಿತ್ತು ಸಾವಿರಾರು ಕೋಟಿ ಒಡೆಯರಾಗಿರುವ ಶ್ರೀಮಂತರಿಗೆ ನೀಡುವುದು ಅವರ ಆರ್ಥಿಕತೆ. ನಮ್ಮ ರಾಜ್ಯಕ್ಕೆ ಬರಬೇಕಾದ ತೆರಿಗೆ ಮತ್ತು ಆರ್ಥಿಕತೆಯ ನೆರವನ್ನೂ ನೀಡದೆ ಇಡಿ ನಾಡಿನ ಜನತೆಗೆ ಬಿಜೆಪಿ ವಂಚಿಸಿದೆ. ಆದರೆ, ನಾವು ಜನರ ಜೇಬಿನಲ್ಲಿ ಹಣ ಉಳಿಯುವ ರೀತಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ರೂಪಿಸಿದ್ದೇವೆ. ಜನರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸುವ ಆಯವ್ಯಯವನ್ನು ನಾವು ಮಂಡಿಸಿದ್ದೇವೆ. ಕರ್ನಾಟಕ ಮಾದರಿಯ ಈ ಅಭಿವೃದ್ಧಿಯನ್ನು ದೇಶದ ಎಲ್ಲಾ ರಾಜ್ಯಗಳೂ ಅಧ್ಯಯನ ನಡೆಸಿ ಅಳವಡಿಸಿಕೊಳ್ಳಲು ಮುಂದಾಗಿವೆ. ಇದು ಕರ್ನಾಟಕದ ಜನತೆಗೆ ನಮ್ಮ ಸರ್ಕಾರ ಮತ್ತು ನಮ್ಮ ಪಕ್ಷ ನೀಡಿರುವ ಅಭಿವೃದ್ಧಿಯ ಕೊಡುಗೆ ಎಂದರು.

ರಾಜ್ಯದ ಜನರ ಹಸಿವು ನೀಗಿಸಲು ಅಕ್ಕಿ ಕೊಡಿ ಎಂದರೆ ಕೊಡಲು ಒಪ್ಪದ ಬಿಜೆಪಿಯವರು ಈಗ ಆ ಸಾವಿರಾರು ಟನ್ ಅಕ್ಕಿ ಹಾಳು ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ಕೈಯಲ್ಲಿರುವ ಅಕ್ಕಿಗೆ ಹುಳು ಹಿಡಿಯುತ್ತಿದೆ. ಜನರು ಉಪವಾಸ ಇದ್ದರೂ ಪರ್ವಾಗಿಲ್ಲ, ಅಕ್ಕಿ ಹಾಳಾದರೂ ಪರ್ವಾಗಿಲ್ಲ ಆದರೆ ಹಸಿದವರಿಗೆ ಅಕ್ಕಿ ಕೊಡಬಾರದು ಎನ್ನುವುದು ಬಿಜೆಪಿಯ ಅತ್ಯಂತ ಅನಾಗರಿಕ ಮತ್ತು ಅಮಾನವೀಯ ಮನಸ್ಥಿತಿ ಎಂದು ವ್ಯಂಗ್ಯವಾಡಿದರು.

ಬಿಜೆಪಿಯ ಬೇಳೆಕಾಳು ಗೊತ್ತಾಗ್ತದೆ

ದೇಶದ ಜನ‌ ನೆಮ್ಮದಿಯಾಗಿ, ಸಂತೋಷದಿಂದ ಇದ್ದರೆ ಬಿಜೆಪಿ ಗೆ ನೆಮ್ಮದಿ ಹಾಳಾಗುತ್ತದೆ. ಹೊಟ್ಟೆಕಿಚ್ಚು ಹೆಚ್ಚಾಗುತ್ತದೆ. ಈಗ ನಾವು ಬಿಜೆಪಿ ಕಾಲದ ಎಲ್ಲಾ ಹಗರಣಗಳು, ಭ್ರಷ್ಟಾಚಾರದ ತನಿಖೆ ಆರಂಭಿಸಿದ್ದೇವೆ. ಸದ್ಯದಲ್ಲೇ ಬಿಜೆಪಿ ಬೇಳೆಕಾಳು ಹೊರಗೆ ಬರುತ್ತದೆ ಎಂದರು.

ಕನಿಷ್ಠ 20 ಲೋಕಸಭಾ ಸ್ಥಾನ ಗೆಲ್ತೀವಿ
ವಿಧಾನಸಭಾ ಚುನಾವಣೆ ಬಳಿಕ ನಮ್ಮ ಕಾರ್ಯಕರ್ತರು ರಿಲಾಕ್ಸ್ ಆಗಬಾರದು. ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನ ಗೆಲ್ತೀವಿ ಎಂದು ಹೈಕಮಾಂಡ್ ಗೆ ಭರವಸೆ ನೀಡಿದ್ದೀನಿ. ಇದಕ್ಕೂ ಹೆಚ್ಚು ಸೀಟು ಗೆಲ್ಲುತ್ತೀವಿ ಎಂದರು.

ಉತ್ಪ್ರೇಕ್ಷೆ ಅಲ್ಲ: ಕೇಂದ್ರದಲ್ಲಿ ಬಿಜೆಪಿ ಸೋಲುತ್ತದೆ

ನಾನು ನನ್ನ ಅನುಭವದಿಂದ ಹೇಳ್ತಾ ಇದೀನಿ. ಯಾವುದೇ ಉತ್ಪ್ರೇಕ್ಷೆ ಇಲ್ಲದೆ ಹೇಳುತ್ತೇನೆ. 2024 ರಲ್ಲಿ ಕೇಂದ್ರದಲ್ಲಿ ಬಿಜೆಪಿ ಸೋಲುತ್ತದೆ. ಈ ಪ್ರಧಾನಿ ಮೋದಿ ಪಾರ್ಲಿಮೆಂಟ್ ಗೆ ಸರಿಯಾಗಿ ಹೋಗಲ್ಲ, ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸಲ್ಲ. ಬರೀ ಮನ್ ಕಿ ಬಾತ್. ಆ ಬಾತ್ ನಲ್ಲೂ ದೇಶದ ಜನ ಇರೋದಿಲ್ಲ ಎಂದರು.

ಹಿಟ್ ಆಂಡ್ ರನ್ ಗಿರಾಕಿ
ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪಕ್ಷವನ್ನು ಮರೆತುಬಿಟ್ಟಿದ್ದಾರೆ. ಬಿಜೆಪಿ ವಕ್ತಾರರ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಅವರೊಂಥರಾ ಹಿಟ್ ಆಂಡ್ ರನ್ ಗಿರಾಕಿ. ಖಾಲಿ ಪೆನ್ ಡ್ರೈವ್ ಜೇಬಿಂದ ತೆಗೆಯೋದು ಒಳಗಿಟ್ಟುಕೊಂಡು ಹೋಗೋದು. ಇದೇ ಆಗೋಯ್ತು ಅಂದರು.

ಭಾಷಣದ ಹೈಲೈಟ್ಸ್

ನಮಗೆ 42.8% ಮತ ಬಿದ್ದಿದೆ. ಇದು ಐತಿಹಾಸಿಕ. ಕರ್ನಾಟಕದ ಜನತೆ ದೇಶವನ್ನು ಕಾಪಾಡುವ ನಿಟ್ಟಿನಲ್ಲಿ ಬಹಳ ದೊಡ್ಡ ಹೆಜ್ಜೆ ಇಟ್ಟಿದ್ದಾರೆ

ನಾಡಿನ ಜನತೆ ಬಿಜೆಪಿಯ ಅಭಿವೃದ್ಧಿಹೀನ, ಬೆಲೆ ಏರಿಕೆ, ನಿರುದ್ಯೋಗ, ದುರಾಡಳಿತ ಮತ್ತು ಜನರನ್ನು ದ್ವೇಷದ ಆಧಾರದಲ್ಲಿ ವಿಭಜಿಸಿ ದರ್ಬಾರ್ ನಡೆಸುವ ಅನಾಹುತಕಾರಿ ಸಿದ್ಧಾಂತ ಮತ್ತು ರಾಜಕಾರಣವನ್ನು ತಿರಸ್ಕರಿಸಿದ್ದಾರೆ

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿಎಂ ಸಿದ್ದರಾಮಯ್ಯ

ಮೈಸೂರು ಮಾರುಕಟ್ಟೆಗೆ ಪರಿಸರ ಸ್ನೇಹಿ ಇವಿ ಪೆಸೆಂಜರ್ ಹಾಗೂ ಗೂಡ್ಸ್ ಆಟೋ ಎಂಟ್ರಿ : ಬಿಬಿ ಮೋಟಾರ್ಸ್ ಗೆ ಮತ್ತೊಂದು ಗರಿ

ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

TAGGED: siddaramiah dkshivakumar congress bjp jds
admin August 14, 2023
Share this Article
Facebook Twitter Whatsapp Whatsapp LinkedIn Copy Link
Previous Article ಜಾತಿ ನಿಂದನೆ ಕೇಸ್ ಉಪೇಂದ್ರ ಎಸ್ಕೇಪ್ !
Next Article ಪಲ್ಸರ್ ಮಹೀಂದ್ರಾ ಥಾರ್ ನಡುವೆ ಭೀಕರ ಅಪಘಾತ ಪೇದೆಗಳಿಬ್ಬರ ಸಾವು
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?