ಮೈಸೂರು : ನಟ ಉಪೇಂದ್ರ ಆಕ್ಷೇಪಾರ್ಹ ಹೇಳಿಕೆಗೆ ಆಕ್ರೋಶ ಮುಂದುವರೆದಿದ್ದು ಮೈಸೂರು ವಿ.ವಿ ಸಂಶೋಧನಾ ವಿದ್ಯಾರ್ಥಿಗಳು ತಡರಾತ್ರಿ ಪ್ರತಿಭಟನೆ ನಡೆಸಿದ್ದಾರೆ.
ಮೈಸೂರು ವಿ.ವಿಯ ಕ್ಲಾಕ್ ಟವರ್ ನಿಂದ ಕುವೆಂಪು ಪ್ರತಿಮೆವರಗೆ ಪಂಜಿನ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ನಟ ಉಪೇಂದ್ರ ಕೂಡಲೇ ಬಂಧನವಾಗಬೇಕು.ಸರ್ಕಾರ ಅವರನ್ನ ರಕ್ಷಿಸುವ ಕೆಲಸ ಮಾಡುತ್ತಿದೆ ಎಂದು ಸರ್ಕಾರದ ವಿರುದ್ಧ ತಮ್ಮ ಪ್ರತಿಭಟನೆ ನಡೆಸಿದರು.