ಮೈಸೂರು : ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನದ ಸರ ಲಪಟಾಯಿಸಿದ್ದ ಖದೀಮನನ್ನ ಬಂಧಿಸುವಲ್ಲಿ ಲಷ್ಕರ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಅರಕಲಗೂಡು ನಿವಾಸಿ ಪ್ರತಾಪ್(25) ಬಂಧಿತ ಆರೋಪಿ.
ಬಂಧಿತನಿಂದ 2 ಲಕ್ಷ ಮೌಲ್ಯದ 40 ಗ್ರಾಂ ಚಿನ್ನದ ಸರ ವಶ.ಪಡಿಸಿಕೊಳ್ಳಲಾಗಿದೆ. ಶ್ರೀ ಹರಿ ಜ್ಯೂಯಲರ್ಸ್ ನಲ್ಲಿ ಗ್ರಾಹಕನ ಸೋಗಿನಲ್ಲಿ ಬಂದು ಸರ ಎಗರಿಸಿದ್ದ ಆರೋಪಿ.
ಗಮನ ಬೇರೆಡ ಸೆಳೆದು 40 ಗ್ರಾಂ ತೂಕದ ಎರಡು ಚಿನ್ನದ ಸರ ಕಳುವು.ಈ ಸಂಭಂಧ ಶ್ರೀಹರಿ ಜ್ಯೂಯಲರ್ ಮಾಲೀಕರಿಂದ ಲಷ್ಕರ್ ಠಾಣೆಗೆ ದೂರು.
ಖದೀಮನ ಬಂಧನಕ್ಕೆ ಅಪರಾಧ ಮತ್ತು ಸಂಚಾರ ಡಿಸಿಪಿ ಜಾಹ್ನವಿ ಮಾರ್ಗದರ್ಶನದಲ್ಲಿ ಹಾಗೂ ದೇವರಾಜ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ ಉಸ್ತುವಾರಿಯಲ್ಲಿ ಲಷ್ಕರ್ ಠಾಣೆಯ ಇನ್ಸ್ಪೆಕ್ಟರ್ ಪ್ರಸಾದ್ ಹಾಗೂ ಸಬ್ ಇನ್ಸ್ಪೆಕ್ಟರ್ ಚಂದ್ರಶೇಖರ್ ಮಗಣಗೇರಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಲೋಕೇಶ್,ಚೇತನ್,ಚಿನ್ನಪ್ಪ,ಮಂಜುನಾಥ್,ಲಾಳೇಸಾಬ್ ನಡಾಫ್,ಮಂಜುನಾಥ್ ಗದಗೈಗೋಳ,ಕುಮಾರ್ ರವರನ್ನೊಳಗೊಂಡ ತಂಡ ರಚಿಸಲಾಗಿತ್ತು.
ಆರೋಪಿಯನ್ನ ಸೆರೆ ಹಿಡಿಯುವಲ್ಲಿ ತಂಡ ಯಶಸ್ವಿಯಾಗಿದ್ದು, ಈ ಕಾರ್ಯಕ್ಕೆ ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಹಾಗೂ ಡಿಸಿಪಿ ಮುತ್ತುರಾಜ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.