• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಪ್ರಜಾಪ್ರಭುತ್ವದ ಸಾಕಾರಕ್ಕೆ ದೇವರಾಜ ಅರಸರ ಆಡಳಿತ ಮಾದರಿ – ಸಚಿವ ಮಹದೇವಪ್ಪ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಪ್ರಜಾಪ್ರಭುತ್ವದ ಸಾಕಾರಕ್ಕೆ ದೇವರಾಜ ಅರಸರ ಆಡಳಿತ ಮಾದರಿ – ಸಚಿವ ಮಹದೇವಪ್ಪ
ಜಿಲ್ಲೆಮೈಸೂರುರಾಜಕೀಯ

ಪ್ರಜಾಪ್ರಭುತ್ವದ ಸಾಕಾರಕ್ಕೆ ದೇವರಾಜ ಅರಸರ ಆಡಳಿತ ಮಾದರಿ – ಸಚಿವ ಮಹದೇವಪ್ಪ

admin
Last updated: 2023/08/20 at 8:37 AM
admin
Share
2 Min Read
SHARE

ಮೈಸೂರು : ಯಾವುದೇ ಜಾತಿ ಹಾಗೂ ಹಣದ ಬೆಂಬಲವಿಲ್ಲದೆ ಪ್ರಜಾಪ್ರಭುತ್ವವನ್ನು ಅನುಷ್ಠಾನಗೊಳಿಸಿ ದೇಶ ಮುನ್ನಡೆಸುವುದನ್ನು ದೇವರಾಜ ಅರಸು ತಮ್ಮ ಆಡಳಿತದ ಮೂಲಕ ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಭಾನುವಾರ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸರ 108ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಅರಸು ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಸಚಿವರು ಮಾತನಾಡಿದರು.

ಭಾರತದ ರಾಜಕೀಯ ಇಂದು ಜಾತಿ, ಹಣದ ಮೇಲೆ ನಿಂತಿದೆ. ಜಾತಿ, ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸಿ, ಗೊಂದಲ ಸೃಷ್ಟಿ ಮಾಡಿ, ಸಂವಿಧಾನದ ಆಶಯಗಳಿಗೆ ಭಂಗ ಉಂಟುಮಾಡುತ್ತಿರುವ ಸಂದರ್ಭದಲ್ಲಿ
ರಾಜಕೀಯ ಅಧಿಕಾರಿವು ಹಣ ಮತ್ತು ಜಾತಿ ಬಲವುಳ್ಳವರ ಕೈಗೆ ಸಿಗದಂತೆ ಎಚ್ಚರವಹಿಸಬೇಕು ಎಂದು ಸಂದೇಶ ನೀಡಿದರು.

ದೇಶದ ಬೆನ್ನೆಲುಬಾದ ರೈತರ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದ ಅರಸರು, ಗ್ರಾಮೀಣ ಬದುಕಿನ ಎಲ್ಲಾ ಮಜಲುಗಳನ್ನು ಅರ್ಥಮಾಡಿಕೊಂಡಿದ್ದರು. ಸಾಮಾಜಿಕ ಹೋರಾಟ, ಸಂಘರ್ಷ, ಸ್ವಾತಂತ್ರ್ಯ ಚಳುವಳಿಯೊಂದಿಗೆ ಜನಸಾಮಾನ್ಯರ ಜೊತೆ ಬದುಕಿದ ಅನುಭವಗಳು ಅವರನ್ನು ಸಹಜವಾಗಿ ಮುತ್ಸದ್ಧಿ ಪರಿವರ್ತಿಸಿತು. ಅವರು ಮುಂದಿನ ಜನಾಂಗದ ಭವಿಷ್ಯದ ಬಗ್ಗೆ ಚಿಂತಿಸಿ ಸಾಮಾಜಿಕ ಬದುಕುಗಳ ಸ್ಥೂಲ ಪರಿಚಯದಿಂದ ಅನೇಕ ಬದಲಾವಣೆ ತಂದರು. ಅವರನ್ನು ರಾಜಕಾರಣಿ ಎನ್ನುವುದಕ್ಕಿಂತ ಅವರೊಬ್ಬರು ಸಮಾಜ ಸುಧಾರಕ, ಸಾಮಾಜಿಕ ಚಿಂತಕ, ಸಮಾಜಶಾಸ್ತ್ರದ ಶ್ರೇಷ್ಠ ವೈದ್ಯರು ಎಂದು ಹೇಳಿದರು.

ಚಲನೆ ಇಲ್ಲದ ಸಮಾಜಕ್ಕೆ ಚಲನಶೀಲತೆಯನ್ನು ಉಂಟುಮಾಡಿ ಅಲೆ ಹೆಬ್ಬಿಸಿದರು. ಬಹಳಷ್ಟು ಸವಾಲುಗಳು ಎದುರಾದರೂ ಹವನೂರ ವರದಿ ಜಾರಿ ಮಾಡುವ ಮೂಲಕ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಜಾರಿ ಮಾಡಿದರು. ಶೈಕ್ಷಣಿಕ ಮತ್ತು ಔದ್ಯೋಗಿಕವಾಗಿ ಮುಕ್ತ ಅವಕಾಶ ನೀಡಿದರು‌. ಹೀಗಾಗಿ ಅವರು ರಾಜ್ಯದ ಇತಿಹಾಸದಲ್ಲಿ ಚಿರಸ್ಥಾಯಿಯಾಗಿ ಉಳಿದಿದ್ದಾರೆ ಎಂದು ಹೇಳಿದರು.

ಅರಸರು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಶೋಷಣೆಗೆ ಒಳಗಾದ ಜನರ ಬದುಕನ್ನು ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಬದಲಾವಣೆ ತರುವಂಥ ಐತಿಹಾಸಿಕ ನಿರ್ಧಾರಗಳನ್ನು ಮಾಡಿದರು. ಉಳುವವನೆ ಹೊಲದೊಡೆಯ, ಮಲಹೊರುವ ಹೊರುವ ಪದ್ದತಿ ನಿರ್ಮೂಲನೆ, ಇಪ್ಪತ್ತು ಅಂಶಗಳ ಕಾರ್ಯಕ್ರಮ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ನಿಗಮವನ್ನು ಸ್ಥಾಪಿಸಿಸುವ ಮ‌ೂಲಕ ಬಡವರ ಬದುಕನ್ನು ರೂಪಿಸಿದರು ಎಂದರು.

ಗುಣಾತ್ಮಕ ರಾಜಕೀಯ ನಾಯಕತ್ವ ಸೃಷ್ಟಿಮಾಡಿ ನೊಂದ ಜನರಿಗೆ, ಶೋಷಿತರಿಗೆ, ಎಲ್ಲಾ ಸಮುದಾಯದ ಬಡವರಿಗೆ ಅವರ ಆಡಳಿತ ಸ್ಮರಣೀಯವಾಗಿದೆ‌. ಅವರು ಬದುಕಿರುವರೆಗೂ ನಿರಂತರವಾಗಿ ಹುಣಸೂರು ಕ್ಷೇತ್ರದಲ್ಲಿ ಜಯಗಳಿಸುತ್ತಾ ಬಂದರು. ಅಂತಹ ವಾತಾವರಣ ದೇಶದಲ್ಲಿ, ರಾಜ್ಯದಲ್ಲಿ ಮರುಕಳಿಸದಿದ್ದರೆ ಪ್ರಜಾಪ್ರಭುತ್ವ ಅಪಾಯಕ್ಕೆ ಸಿಲುಕಿ, ಸಂವಿಧಾನ ಗಂಡಾಂತರ ಒದಗುತ್ತದೆ ಎಂದು ಹೇಳಿದರು.

ದೇವರಾಜ ಅರಸರ ಆಡಳಿತ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದ ನಮ್ಮ ಸರ್ಕಾರದ ಆಡಳಿತ ಒಂದೇ ರೀತಿಯಲ್ಲಿದೆ. ಅವರ ದಾರಿಯಲ್ಲೇ ನಾವು ಸಾಗುತ್ತಿದ್ದೇವೆ. ನಮ್ಮ ಯುವಕರು ಜಾತ್ಯಾತೀತ, ಪ್ರಜಾಪ್ರಭುತ್ವ, ಸಂವಿಧಾನ ಬದ್ದ ನಡವಳಿಕೆ ಮೂಲಕ ಸ್ವಾತಂತ್ರ್ಯ ಉದ್ದೇಶ ಹಾಗೂ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮಹಾಪೌರರಾದ ಶಿವಕುಮಾರ್, ಶಾಸಕರಾದ ಜಿ.ಟಿ.ದೇವೇಗೌಡ, ತನ್ವೀರ್ ಸೇಠ್, ಕೆ.ಹರೀಶ್ ಗೌಡ, ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರಾದ ಎಚ್.ವಿಶ್ವನಾಥ್, ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮರಿತಿಬ್ಬೇಗೌಡ, ಉಪಮಹಾಪೌರರಾದ ಡಾ.ಜಿ.ರೂಪ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Siddaramiah hcmahadevappa devarajurs mysuru
admin August 20, 2023
Share this Article
Facebook Twitter Whatsapp Whatsapp LinkedIn Copy Link
Previous Article ಕಾವೇರಿ ವಿಚಾರದಲ್ಲಿ ಬಂಗಾರಪ್ಪರಂತ ದಿಟ್ಟ ನಿಲುವು ಯಾವ ಸಿಎಂ ಕೂಡ ತೆಗೆದುಕೊಳ್ಳುತ್ತಿಲ್ಲ – ವಾಟಾಳ್ ನಾಗರಾಜ್
Next Article 105 ಅಡಿಗೆ ಕುಸಿದ ಕೆ.ಆರ್.ಎಸ್ ಡ್ಯಾಂ ನೀರಿನ ಮಟ್ಟ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?