ಮೈಸೂರು : ನಾವು ಅಪರೇಷನ್ ಹಸ್ತ ಮಾಡುತ್ತಿಲ್ಲ ಅವರಗಿಯೇ ಪಕ್ಷಕ್ಕೆ ಬರುತ್ತಿದ್ದಾರೆ ಎಂದು
ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕೆ ಬರುವವರಿಗೆ ಸ್ವಾಗತ ಕೋರುತ್ತಿದ್ದೇವೆ.ನಾವಾಗಿಯೇ ನಾವು ಯಾರನ್ನ ಪಕ್ಷಕ್ಕೆ ಕರೆತರುವ ಪ್ರಯತ್ನ ಮಾಡುತ್ತಿಲ್ಲ.
ಅವರ ಭವಿಷ್ಯ, ನಮ್ಮ ಪಕ್ಷದ ವರ್ಚಸ್ಸು ಎಲ್ಲದನ್ನೂ ಗಮನಿಸಿಕೊಂಡು ಅವರೇ ನಿರ್ಧಾರ ಮಾಡತ್ತಿದ್ದಾರೆ.
ಎಷ್ಟು ಜನ ಬರುತ್ತಾರೆ ಎಂಬುದನ್ನು ಈಗಲೇ ನಾನು ಹೇಳಲು ಸಾಧ್ಯವಿಲ್ಲ.ಎಲ್ಲದಕ್ಕೂ ಕಾಲ, ಸಮಯ ಘಳಿಗೆ ಎಂಬುದು ಇರುತ್ತದೆ.ಆ ಘಳಿಗೆ ಬಂದಾಗ ಎಲ್ಲವೂ ನಡೆಯುತ್ತದೆ ಎಂದರು.
ಜೆಡಿಎಸ್ ಶಾಸಕರನ್ನ ಕಾಂಗ್ರೆಸ್ ಸೆಳೆಯುವ ಪ್ರಯತ್ನ ಆಗಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್
ಇಂತಹ ಮಾತುಗಳನ್ನ ನಾನು ಹೇಳುತ್ತ ಹೋದರೆ ಅದು ದೊಡ್ಡ ಪಟ್ಟಿ ಆಗತ್ತೆಈಗ ಅದರ ಬಗ್ಗೆ ಚರ್ಚೆ ಬೇಡ ಎಂದರು.