ಮೈಸೂರು : ಅಮಿತ್ ಶಾ ಜಗದೀಶ್ ಶೆಟ್ಟರ್ ಗೆ ಕರೆ ಮಾಡಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಲು ಲಕ್ಷ್ಮಿ ಹೆಬ್ಬಾಳ್ಕರ್ ನಿರಾಕರಿಸಿದ್ದಾರೆ.
ನಾನು ಗೃಹ ಲಕ್ಷ್ಮಿ ಯೋಜನೆ ಅನುಷ್ಟಾನ ಕೆಲಸದಲ್ಲಿದ್ದೇನೆ
ಬೆಂಗಳೂರು ಬಿಟ್ಟು ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದೇನೆ
ಯಾರು ಯಾರಿಗೆ ಕರೆ ಮಾಡಿದ್ರು ಯಾಕೆ ಕರೆ ಮಾಡಿದ್ರು ಇಂತಹ ಊಹಾಪೋಹದ ವಿಚಾರಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಗೃಹ ಲಕ್ಷ್ಮಿ ಯೋಜನೆ ಅನುಷ್ಟಾನ ಇದು ಕಾಂಗ್ರೆಸ್ ಶಕ್ತಿ ಪ್ರದರ್ಶನವಲ್ಲ ರಾಹುಲ್ ಗಾಂಧಿ ಬರ್ತಿರೋದು ರಾಜಕೀಯ ಉದ್ದೇಶವಲ್ಲ. ಗ್ಯಾರೆಂಟಿ ಘೋಷಣೆ ಮಾಡಿದ್ದು ರಾಹುಲ್ ಗಾಂಧಿ ಪ್ರಿಯಾಂಕ ಗಾಂಧಿ
ಅವರ ಸಮ್ಮುಖದಲ್ಲೇ ಅನುಷ್ಟಾನ ಮಾಡುವ ಉದ್ದೇಶದಿಂದ ಅವರನ್ನು ಕರೆ ತರುತ್ತಿದ್ದೇವೆ ಅಷ್ಟೇ ಎಂದು
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಬಿಜೆಪಿ ನಾಯಕರು ಬೀದಿಗೆ ಬಂದಿದ್ದಾರೆ ಕಾಂಗ್ರೆಸ್ ಟ್ವೀಟ್ ವಿಚಾರ, ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಅವರನ್ನು ನಾಯಕರು ಅಂತ ಒಪ್ಪಿಕೊಂಡಿದ್ದಾರೆಯಾವ ಕಾರಣಕ್ಕೆ ಅವರನ್ನು ಅಲ್ಲಿ ನಿಲ್ಲಿಸಿದ್ದಾರೆ ಗೊತ್ತಿಲ್ಲತಿಳಿಯದೇ ಮಾತನಾಡುವುದು ತಪ್ಪು ಎಂದರು.