• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಕಾಂಗ್ರೆಸ್ ಪಕ್ಷ ಹೃದಯದಿಂದ ವಿಚಾರ ಮಾಡುತ್ತೆ – ಲಕ್ಷ್ಮೀ ಹೆಬ್ಬಾಳ್ಕರ್
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಕಾಂಗ್ರೆಸ್ ಪಕ್ಷ ಹೃದಯದಿಂದ ವಿಚಾರ ಮಾಡುತ್ತೆ – ಲಕ್ಷ್ಮೀ ಹೆಬ್ಬಾಳ್ಕರ್
ಜಿಲ್ಲೆಮೈಸೂರುರಾಜಕೀಯರಾಜ್ಯ

ಕಾಂಗ್ರೆಸ್ ಪಕ್ಷ ಹೃದಯದಿಂದ ವಿಚಾರ ಮಾಡುತ್ತೆ – ಲಕ್ಷ್ಮೀ ಹೆಬ್ಬಾಳ್ಕರ್

admin
Last updated: 2023/08/26 at 2:29 PM
admin
Share
3 Min Read
SHARE

– ಮೈಸೂರು ಕಾಂಗ್ರೆಸ್ ಸಭೆಯಲ್ಲಿ ಹೆಬ್ಬಾಳ್ಕರ್ ಮಾತಿಗೆ ಚಪ್ಪಾಳೆಯ ಸುರಿಮಳೆ

ಮೈಸೂರು: ಕಾಂಗ್ರೆಸ್ ಪಕ್ಷ ಯಾವತ್ತೂ ಹೃದಯದಿಂದ ವಿಚಾರ ಮಾಡುವ ಪಕ್ಷ. ಗ್ಯಾರಂಟಿ ಯೋಜನೆಗಳ ಮೂಲಕ ಎಷ್ಟೊಂದು ಪುಣ್ಯದ ಕೆಲಸ ಮಾಡುತ್ತಿದ್ದೇವೆ. ಕೇವಲ ಚುನಾವಣೆಯಲ್ಲಿ ಗೆದ್ದು ಬರಲು ನಾವು ಘೋಷಣೆಗಳನ್ನು ಮಾಡಲಿಲ್ಲ. ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸಿ, ಕೊರೊನಾ ಬಂದು ಹೋದ ಮೇಲೆ ಜನರ ಜೀವನ ಕಷ್ಟವಾಗಿದೆ ಎನ್ನುವುದನ್ನು ಅರಿತು ಇಂತಹ ಸಂದರ್ಭದಲ್ಲಿ ಏನಾದರೂ ಮಾಡಬೇಕು ಎಂದು ಗ್ಯಾರಂಟಿಗಳನ್ನು ಘೋಷಿಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ.

‘ಗೃಹಲಕ್ಷ್ಮಿ’ ಯೋಜನೆಯ ಉದ್ಘಾಟನೆ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಶನಿವಾರ ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಸರಕಾರಕ್ಕೆ, ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ಹೆಸರನ್ನು ತರಬೇಕೆಂದು ಬೆಳಗಾವಿಯಿಂದ ಮೈಸೂರಿಗೆ ಬಂದು ಈ ಕಾರ್ಯಕ್ರಮದ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದೇನೆ. ನಮ್ಮ ಸರಕಾರ 5 ಗ್ಯಾರಂಟಿಗಳನ್ನು ಘೋಷಿಸಿ ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದ ಸರಕಾರ ಎನಿಸಿದೆ, ಸಿದ್ದರಾಮಯ್ಯ ಭಾಗ್ಯಗಳ ಸರದಾರ ಎನಿಸಿಕೊಂಡಿದ್ದಾರೆ. ಡಿಕೆ.ಶಿವಕುಮಾರ ಅವರು ಅಪ್ರತಿಮ ಸಂಘಟಕ ಎನಿಸಿಕೊಂಡಿದ್ದಾರೆ. ಕೇವಲ ಚುನಾವಣೆಯಲ್ಲಿ ಗೆದ್ದು ಬರಲು ನಾವು ಘೋಷಣೆಗಳನ್ನು ಮಾಡಲಿಲ್ಲ. ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸಿ, ಕೊರೊನಾ ಬಂದು ಹೋದ ಮೇಲೆ ಜನರ ಜೀವನ ಕಷ್ಟವಾಗಿದೆ ಎನ್ನುವುದನ್ನು ಅರಿತು ಇಂತಹ ಸಂದರ್ಭದಲ್ಲಿ ಏನಾದರೂ ಮಾಡಬೇಕು ಎಂದು ಗ್ಯಾರಂಟಿಗಳನ್ನು ಘೋಷಿಸಿದ್ದೇವೆ ಎಂದು ಹೆಬ್ಬಾಳಕರ್ ಹೇಳಿದರು.

ಕಾಂಗ್ರೆಸ್ ಪಕ್ಷ ಹೃದಯದಿಂದ ವಿಚಾರ ಮಾಡುತ್ತದೆ. ಹಾಗಾಗಿಯೆ ಇಂದಿರಾ ಗಾಂಧಿ, ದೇವರಾಜ ಅರಸ ಅಂತವರನ್ನು ಇಂದಿಗೂ ಸ್ಮರಿಸುತ್ತೇವೆ. ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಬಸವಣ್ಣನವರ ತತ್ವದಲ್ಲಿ ವಿಶ್ವಾಸವಿಟ್ಟು ನಾವು ನಡೆಯುತ್ತಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ 100 ದಿನದಲ್ಲಿ ಇಂತಹ ಒಳ್ಳೆಯ ಬಜೆಟ್ ಕೊಟ್ಟು ಯಾವುದೇ ಅಡಚಣೆ ಮಾಡದೆ ಬಹಳ ಚೆನ್ನಾಗಿ ನಿರ್ವಹಣೆ ಮಾಡಿ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣ ಮಾಡುತ್ತಿದ್ದಾರೆ ಎಂದು ಹೇಳಿದರು.

1.28 ಕೋಟಿ ಕುಟುಂಬಗಳಿಗೆ ಗೃಹಲಕ್ಷ್ಮೀ ಯೋಜನೆಯ ಲಾಭ ತಲುಪುತ್ತದೆ. ಈಗಾಗಲೆ 1.10 ಕೋಟಿ ಕುಟುಂಬಗಳು ನೊಂದಾಯಿಸಿಕೊಂಡಿವೆ. ಇನ್ನೂ ಸುಮಾರು 18 ಲಕ್ಷ ಕುಟುಂಬಗಳ ರೇಶನ್ ಕಾರ್ಡ್ ತಾಂತ್ರಿಕ ಕಾರಣದಿಂದ ಅಪ್ ಗ್ರೇಡ್ ಆಗಿಲ್ಲ. ಆದಾದರೆ ಇನ್ನೂ 18 ಲಕ್ಷ ಕುಟುಂಬಗಳು ಲಾಭ ಪಡೆಯುತ್ತವೆ. ಇದಕ್ಕೆ ಸಮಯ ಮಿತಿಯ ಇಲ್ಲ. ಯಾವಾಗ ಬೇಕಾದರೂ ರಜಿಸ್ಟ್ರೇಶನ್ ಮಾಡಿಕೊಳ್ಳಬಹುದು. ರಾಜ್ಯದ ಮೂಲೆ ಮೂಲೆಯ ಮಹಿಳೆಯರ ಸಬಲೀಕರಣ ನಮ್ಮ ಉದ್ದೇಶವಾಗಿದೆ. ರಾಜ್ಯದ ಎಲ್ಲ ಭಾಗಗಳ ಮಹಿಳೆಯರ ಸಮಸ್ಯೆಗಳೂ ಒಂದೇ ಆಗಿದೆ. ತಿಂಗಳಿಡೀ ಪಾತ್ರೆ ತೊಳೆಯಲು ಹೋದರೂ 1,500 ರೂ ಕೊಡ್ತಾರೆ. ಉದ್ಯೋಗ ಖಾತ್ರಿಯಲ್ಲಿ 100 ದಿನ ಬೆವರು ಸುರಿಸಿ ಕೆಲಸ ಮಾಡಿದರೆ 30 ಸಾವಿರ ರೂ. ಸಿಗುತ್ತದೆ. ಕಾಂಗ್ರೆಸ್ ಉದ್ದೇಶ ತಿಂಗಳಿಗೆ 2 ಸಾವಿರ ರೂ, ವರ್ಷಕ್ಕೆ 24 ಸಾವಿರ ರೂ. ಕೊಡುವುದಾಗಿದೆ. ಎಷ್ಟೊಂದು ಪುಣ್ಯದ ಕೆಲಸ ಮಾಡುತ್ತಿದೆ ಕಾಂಗ್ರೆಸ್ ಪಕ್ಷ ಎಂದು ಅವರು ವಿವರಿಸಿದರು.

ಶಾಲೆಯೊಂದರಲ್ಲಿ ಮಗುವಿಗೆ ಮೊಟ್ಟೆ ವಿತರಿಸಿದ ಭಾವನಾತ್ಮಕ ಸಂದರ್ಭವೊಂದನ್ನು ಸಚಿವರು ಈ ವೇಳೆ ಸ್ಮರಿಸಿದರು. ಮೊಟ್ಟೆ ಪಡೆದ ಮಗು ತನ್ನ ಅಜ್ಜಿಗೂ ಒಂದು ಮೊಟ್ಟೆ ಕೊಡಿ ಎಂದು ಕೇಳಿದ ಪ್ರಸಂಗವನ್ನು ಉಲ್ಲೇಖಿಸಿದರು.

ಬಿಜೆಪಿಯವರು ನಾಲ್ಕಾಣೆ ಕೋಳಿಗೆ ಹನ್ನೆರಡಣೆ ಮಸಾಲೆ ಅರೀತಾರ. ನಾವು ಹಾಗಲ್ಲ. ಮಹಿಳೆಯರಿಗೆ ಶಕ್ತಿ ಕೊಡಲು ಈ ಎಲ್ಲ ಯೋಜನೆಗಳನ್ನು ತಂದಿದ್ದೇವೆ. ಪುರುಷರು ತಮಗೆ ಸಿಗುತ್ತಿಲ್ಲ ಎಂದು ಗೊಣಗಬೇಡಿ. ನಾವು 5 ಸಾವಿರ ವರ್ಷದಿಂದ ಅನುಭವಿಸಿದ್ದೇವೆ. ಈ ಯೋಜನೆಗಳಿಂದ ಪುರುಷರ ಜೇಬಿನಲ್ಲಿರುವ ಹಣವೂ ಉಳಿಯುತ್ತವೆ. ನಿಮಗೂ ಲಾಭ ಸಿಗುತ್ತದೆ ಎಂದು ಹೇಳಿದರು.

ಸಿದ್ದರಾಮಯ್ಯನವರ ತವರು ಜಿಲ್ಲೆಯಲ್ಲಿ ಈ ಕಾರ್ಯಕ್ರಕಮ ಮಾಡುವ ಅವಕಾಶ ಸಿಕ್ಕಿದೆ. ನನ್ನ ಪರಿಚಯವನ್ನು ಈ ಭಾಗದಲ್ಲೂ ಮಾಡಿಕೊಳ್ಳಲು ಸಿಕ್ಕಿರುವ ಅವಕಾಶ ಇದು. ನಾನು ಎಲ್ಲದರಲ್ಲೂ ಪೊಸಿಟಿವ್ ಹುಡುಕುವವನು. ಹಾಗಾಗಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ. ನಿಮ್ಮೆಲ್ಲರ ಸಹಕಾರವಿರಲಿ ಎಂದು ಹೆಬ್ಬಾಳಕರ್ ಹೇಳಿದರು.

ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಸಿ. ಮಹದೇವಪ್ಪ, ಶಾಸಕರ ಕೆ.ಹರೀಶ್ ಗೌಡ, ಎಐಸಿಸಿ ಕಾರ್ಯದರ್ಶಿ ಹಾಗೂ ಮೈಸೂರು ಉಸ್ತುವಾರಿ ರೋಜಿ ಜಾನ್, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್, ಸುನೀತಾ ವೀರಪ್ಪ ಗೌಡ, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರ್ ನಾಥ್, ಮೈಸೂರು ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಬಿ.ಜೆ.ವಿಜಯದ ಕುಮಾರ್, ಮೈಸೂರು ನಗರ‌ ಘಟಕದ ಅಧ್ಯಕ್ಷ ಆರ್.ಮೂರ್ತಿ‌,‌ ಮಾಜಿ ಮೇಯರ್ ಗಳಾದ ಚಿಕ್ಕಣ್ಣ, ಪುಷ್ಪಲತಾ ಚಿಕ್ಕಣ್ಣ‌ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Siddaramiah dkshivakumar Lakshmihebbalkar mysuru Politics Congressguarenty
admin August 26, 2023
Share this Article
Facebook Twitter Whatsapp Whatsapp LinkedIn Copy Link
Previous Article ಯಾರು ಯಾರಿಗೆ ಯಾಕೆ ಕರೆ ಮಾಡಿದ್ರು ಗೊತ್ತಿಲ್ಲ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
Next Article ಮೈಸೂರಿನಲ್ಲಿ ಇಂದು ಸಿಎಂ ಡಿಸಿಎಂ ವಾಸ್ತವ್ಯ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?