• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಶಿಕ್ಷಣದಿಂದ ಎಲ್ಲವೂ ಸಾಧ್ಯ – ಸಚಿವ ಮಹದೇವಪ್ಪ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಶಿಕ್ಷಣದಿಂದ ಎಲ್ಲವೂ ಸಾಧ್ಯ – ಸಚಿವ ಮಹದೇವಪ್ಪ
ಜಿಲ್ಲೆಮೈಸೂರುರಾಜ್ಯ

ಶಿಕ್ಷಣದಿಂದ ಎಲ್ಲವೂ ಸಾಧ್ಯ – ಸಚಿವ ಮಹದೇವಪ್ಪ

admin
Last updated: 2023/09/05 at 9:26 AM
admin
Share
3 Min Read
SHARE

ಮೈಸೂರು : ಶಿಕ್ಷಣದ ಮೂಲಕ ಎಲ್ಲವನ್ನು ಸಾಧಿಸಲು ಸಾಧ್ಯ. ಆದ್ದರಿಂದಲೇ ಇಂದು ನಾವು ಚಂದ್ರನನ್ನು ಸಹ ಮುಟ್ಟಿದ್ದೇವೆ ಎಂದು ಸಮಾಜ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್ ಸಿ ಮಹದೇವಪ್ಪನವರು ತಿಳಿಸಿದರು.

ನಗರದ ಕರ್ನಾಟಕ ಕಲಾಮಂದಿರದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂದು ದೇಶದಾದ್ಯಂತ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದರು.

ಸ್ವತಂತ್ರ ಪೂರ್ವದಲ್ಲಿ ಭಾರತದ ಜನಸಂಖ್ಯೆಯಲ್ಲಿ ಶೇ. ಹತ್ತಕ್ಕಿಂತಲೂ ಕಡಿಮೆ ಸಾಕ್ಷರತೆ ಇತ್ತು. ಸ್ವಾತಂತ್ರ್ಯ ಪಡೆದುಕೊಂಡ ಪೂರ್ವದಲ್ಲಿ ನಮ್ಮದೇ ಆದ ವ್ಯವಸ್ಥೆಗಳನ್ನು ರೂಪಿಸಿಕೊಳ್ಳುವ ಸ್ಥಿತಿ ಬಂದಾಗ ನಮ್ಮಲ್ಲಿನ ಸಾಕ್ಷರತೆಯ ಮಟ್ಟ ಬಹಳ ಕಡಿಮೆ ಇತ್ತು. ಭಾರತದ ಚರಿತ್ರಿಯು ಕತ್ತಲಲ್ಲಿ ವಾಸಿಸುವ ಪರಿಸ್ಥಿತಿಯನ್ನು ಹೊಂದಿತ್ತು. ಆಗ ಬೆಳಕು ಹುಡುಕಲು ಶಿಕ್ಷಣವಿರಲಿಲ್ಲ. ಸನಾತನ ವಾದಗಳು ನಮ್ಮನ್ನು ಕತ್ತಲಲ್ಲಿ ಇಟ್ಟಿದ್ದವು. ಶಿಕ್ಷಣ ಪಡೆದುಕೊಂಡರೆ ಕಾದ ಬಿಸಿ ಎಣ್ಣೆ ಸುರಿವ ದುಸ್ಥಿತಿ ಇತ್ತು. ಲಾರ್ಡ್ ಮೆಕಾಲೆ ಇಂಗ್ಲೀಷ್ ಶಿಕ್ಷಣವನ್ನು ಉದಾರಿಕರಣಗೊಳಿಸದ್ದಿದ್ದರೆ ನಾವು ಎಲ್ಲಾದರೂ ಜೀತ ಮಾಡುತ್ತಿರಬೇಕಿತ್ತು ಎಂದು ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿ ತಂದು ಕೊಟ್ಟ ರಾಷ್ಟ್ರಕವಿ ಕುವೆಂಪುರವರು ಅಭಿಪ್ರಾಯಪಟ್ಟಿದ್ದಾರೆ ಎಂದು ತಿಳಿಸಿದರು.

1964 ರಲ್ಲಿ ಬಂದ ಸುಬ್ರಹ್ಮಣ್ಯ ಕಮಿಷನ್ ನಲ್ಲಿ ಬಂದ ಹೊಸ ಶಿಕ್ಷಣ ನೀತಿ ಹಾಗೂ 1984 ರ ಕೊತಾರಿ ಕಮಿಷನ್ ಬಂದ ಮೇಲೆ ಶಿಕ್ಷಣದ ಸ್ಥಿತಿಗತಿ ಸುಧಾರಣೆಗೊಂಡಿದೆ. ಪ್ರಸ್ತುತ ಶೇ. 75ರಷ್ಟು ಸಾಕ್ಷರತೆಯನ್ನು ನಾವು ಸಾಧಿಸಿದ್ದೇವೆ. ಆದರೆ ನೂರಕ್ಕೆ ನೂರರಷ್ಟು ಸಾಕ್ಷರತೆ ಸಾಧಿಸಲು ಸಾಧ್ಯವಾಗಿಲ್ಲ. ಮುಕ್ತವಾದ ಶಿಕ್ಷಣ ವ್ಯವಸ್ಥೆ ಇದ್ದರೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿನಲ್ಲಿ ಇರಬಹುದಿತ್ತು. ರಾಜಕೀಯ ಮುತ್ಸದಿ ಹಾಗೂ ಶಿಕ್ಷಣ ತಜ್ಞರಾದ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುತ್ತಾ ಎಲ್ಲಾ ಶಿಕ್ಷಕರಿಗೂ ಗೌರವವನ್ನು ಸಲ್ಲಿಸಲು ಇದು ಉತ್ತಮ ಕಾರ್ಯಕ್ರಮವಾಗಿದೆ ಎಂದರು.

ಕೇವಲ ಶಾಲೆಗಳಲ್ಲಿ ಪಾಠ ಮಾಡಿದವರು ಮಾತ್ರ ಶಿಕ್ಷಕರಲ್ಲ ನಮ್ಮ ಜೀವನದಲ್ಲಿ ಜೀವನ ಪಾಠ ಹೇಳಿ ಕೊಟ್ಟವರು ಶಿಕ್ಷಕರೇ. ಶಿಕ್ಷಣದ ಮೂಲಕ ಮಾನವೀಯ ಮೌಲ್ಯಗಳನ್ನು ತಿಳಿಸುತ್ತಾ, ಮಗುವನ್ನು ಸಮಾಜದ ಜವಾಬ್ದಾರಿಯುತ ಪ್ರಜೆಯಾಗಿ ನಿರ್ಮಿಸುವುದರಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ಶಿಕ್ಷಣ ಕೇವಲ ಪಾಠಕ್ಕೆ ಮಾತ್ರ ಸೀಮಿತವಾಗಿರದೆ ರಾಷ್ಟ್ರದ ಪುನರ್ ನಿರ್ಮಾಣಕ್ಕೆ ಪೂರಕವಾಗುವಂತಿರಲಿ. ಭಾರತದ 140 ಕೋಟಿ ಜನರ ಯೋಗ ಕ್ಷೇಮ ಶಿಕ್ಷಣವನ್ನು ಅವಲಂಬಿಸಿದೆ. ಸಿದ್ಧಾಂತಗಳ ಮೂಲಕ ದೇಶವನ್ನು ಎಚ್ಚರಿಸುವುದು. ವೈಚಾರಿಕ ಹಾಗೂ ವೈಜ್ಞಾನಿಕ ಶಿಕ್ಷಣವನ್ನು ನೀಡಬೇಕೆಂಬುದು ಡಾ. ಬಿಆರ್ ಅಂಬೇಡ್ಕರ್ ರವರ ಸಂದೇಶ ಎಂದು ತಿಳಿಸಿದರು.

ಪ್ರಸ್ತುತ ಸರ್ಕಾರ ವಿದ್ಯಾರ್ಥಿಗಳಿಗೆ ಹಾಗೂ ಅವರ ಶಿಕ್ಷಣಕ್ಕೆ ಪೂರಕವಾದ ಎಲ್ಲಾ ಯೋಜನೆಗಳನ್ನು ವಿಸ್ತರಿಸಿದೆ ಆದ್ದರಿಂದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗುವುದಲ್ಲದೆ ಪ್ರಥಮ ದರ್ಜೆಯ ನಾಗರಿಕರಾಗಿಯೂ ಹೊರಹೊಮ್ಮಬೇಕು. ನಮ್ಮ ಜಿಲ್ಲೆಯಲ್ಲಿ ಸುಮಾರು 19,000 ಶಿಕ್ಷಕರಿದ್ದಾರೆ. 4,20,000ಕ್ಕೂ ಹೆಚ್ಚು ಮಕ್ಕಳಿದ್ದಾರೆ. 33 ಶಿಕ್ಷಕರು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಭಾಜನರಾಗಿದ್ದು, ಇಬ್ಬರು ಶಿಕ್ಷಕರು ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ. ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆ ಮತ್ತಷ್ಟು ಸಾಧನೆ ಮಾಡಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ 33 ಶಿಕ್ಷಕರನ್ನು, ನಿವೃತ್ತ ಶಿಕ್ಷಕರನ್ನು ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ಪಡೆದ ಶಾಲಾ ಮುಖ್ಯ ಶಿಕ್ಷಕರನ್ನು ಗೌರವಿಸಿ ಸನ್ಮಾನಿಸಲಾಯಿತು.

ಶಿಕ್ಷಕರು ‘ನಮ್ಮ ದಿನದಂದು ನಮ್ಮ ಹಕ್ಕೋತಾಯಗಳು’ ಎಂಬ ಶಿಕ್ಷಕರ ಸಮಸ್ಯೆಗಳನ್ನು ಒಳಗೊಂಡ ಮನವಿ ಪತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಸಭಾ ಶಾಸಕರಾದ ತನ್ವೀರ್ ಸೇಟ್, ಕೆ ಹರೀಶ್ ಗೌಡ, ಟಿ ಎಸ್ ಶ್ರೀವತ್ಸ, ವಿಧಾನಪರಿಷತ್ ನ ಶಾಸಕರಾದ ಸಿಎನ್ ಮಂಜೇಗೌಡ, ಮರಿತಿಬ್ಬೇಗೌಡ ಮಹಾನಗರ ಪಾಲಿಕೆಯ ಮಹಾಪೌರರಾದ ಶಿವಕುಮಾರ್, ಉಪ ಮಹಾಪೌರರಾದ ಡಾ ಜಿ ರೂಪ, ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಗಾಯತ್ರಿ ಕೆ ಎಂ, ಪ್ರಧಾನ ಭಾಷಣಕಾರರಾದ ಶಿವಪ್ರಕಾಶ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಜೆ. ಗೋವಿಂದರಾಜು ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಪಾಂಡು ಹೆಚ್ ಕೆ ಅವರು ಸೇರಿದಂತೆ ಇತರರು ಭಾಗವಹಿಸಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: siddaramiah dkshivakumar hcmahadevappa mysuru Education
admin September 5, 2023
Share this Article
Facebook Twitter Whatsapp Whatsapp LinkedIn Copy Link
Previous Article ಅರಮನೆಗೆ ಗಜಪಡೆ ಸ್ವಾಗತಿಸಿದ ಸಚಿವ ಡಾ. ಹೆಚ್.ಸಿ ಮಹದೇವಪ್ಪ
Next Article ಮಾನವ ವನ್ಯ ಪ್ರಾಣಿ ಸಂಘರ್ಷ ತಡೆಗೆ ವೈಜ್ಞಾನಿಕ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?