• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಸರ್ವ ಪಕ್ಷದ ನಿಯೋಗ ಭೇಟಿಗೆ ಕೇಂದ್ರದಿಂದ ಉತ್ತರ ಬಂದಿಲ್ಲ – ಸಿಎಂ ಸಿದ್ದರಾಮಯ್ಯ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಬೆಂಗಳೂರು ನಗರ > ಸರ್ವ ಪಕ್ಷದ ನಿಯೋಗ ಭೇಟಿಗೆ ಕೇಂದ್ರದಿಂದ ಉತ್ತರ ಬಂದಿಲ್ಲ – ಸಿಎಂ ಸಿದ್ದರಾಮಯ್ಯ
ಜಿಲ್ಲೆಬೆಂಗಳೂರು ನಗರರಾಜಕೀಯರಾಜ್ಯ

ಸರ್ವ ಪಕ್ಷದ ನಿಯೋಗ ಭೇಟಿಗೆ ಕೇಂದ್ರದಿಂದ ಉತ್ತರ ಬಂದಿಲ್ಲ – ಸಿಎಂ ಸಿದ್ದರಾಮಯ್ಯ

admin
Last updated: 2023/09/09 at 9:08 AM
admin
Share
3 Min Read
SHARE

ಬೆಂಗಳೂರು : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಯ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಸರ್ಕಾರದಿಂದ ಅರಣ್ಯ ಮತ್ತು ಪರಿಸರ ಕ್ಲಿಯರೆನ್ಸ್ ದೊರೆತಿಲ್ಲ. ಇದಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದರು.

ಜೆಡಿಎಸ್ ಪಕ್ಷಕ್ಕೆ ಯಾವುದೇ ಸಿದ್ಧಾಂತ ಇಲ್ಲ :

ಜೆಡಿಎಸ್ , ಬಿಜೆಪಿಯ ಬಿ ಟೀಂ ಎಂಬುದು ಸತ್ಯವಾಗುತ್ತಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ನಾನು ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ಹೇಳಿದಾಗ ಅವರು ನನ್ನ ಮೇಲೆ ಸಿಟ್ಟಾಗಿದ್ದರು. ಜನತಾ ದಳ ಜಾತ್ಯಾತೀತ ಎಂದು ಹೆಸರಿಟ್ಟುಕೊಂಡಿರುವ ಪಕ್ಷ ಕೋಮುವಾದಿಗಳ ಜೊತೆ ಒಂದಾಗಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಯಾವ ಕಾರಣಕ್ಕೂ ಬೇರೆ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ ಪಕ್ಷದ ಉಳಿವಿಗಾಗಿ ಬಿಜೆಪಿ ಜೊತೆ ಸೇರಿಕೊಳ್ಳುತ್ತಿರುವುದಾಗಿ ಶಾಸಕ ಜಿ.ಟಿ.ದೇವೇಗೌಡರು ಹೇಳಿರುವುದು, ಜೆಡಿಎಸ್ ಪಕ್ಷಕ್ಕೆ ಯಾವುದೇ ಸಿದ್ಧಾಂತ ಇಲ್ಲ ಎಂದು ತೋರಿಸುತ್ತದೆ. ಅಧಿಕಾರಕ್ಕಾಗಿ ಯಾವುದೇ ಕ್ರಮಕ್ಕೆ ಸಿದ್ಧ ಎಂಬುದನ್ನು ಅವರು ತೋರಿಸಿದ್ದಾರೆ ಎಂದು ತಿಳಿಸಿದರು.

ರೈತರ ತೊಂದರೆಯನ್ನು ನೀಗಿಸಲು ವಿದ್ಯುತ್ ಸರಬರಾಜಿಗೆ ಕ್ರಮ

ರೈತರು ವಿದ್ಯುತ್ ಸರಬರಾಜಿನ ವ್ಯತ್ಯಯಕ್ಕಾಗಿ ಹೋರಾಟ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಆಗಸ್ಟ್ ತಿಂಗಳಲ್ಲಿ ಸರಿಯಾಗಿ ಮಳೆಯಾಗಿಲ್ಲ, ಬೇಸಿಗೆಯಲ್ಲಿ ಪಂಪಸೆಟ್ ಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಬೇಕು. ಇದರಿಂದ ವಿದ್ಯುತ್ ನ ಹೆಚ್ಚಿನ ಪ್ರಮಾಣದಲ್ಲಿ ಬಳಕೆಯಾಗಿದೆ. ರೈತರ ತೊಂದರೆಯನ್ನು ನೀಗಿಸಲು, ವಿದ್ಯುತ್ ನ್ನು ಹೊರಗಿನಿಂದ ಖರೀದಿಸಿ ವಿದ್ಯುತ್ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಜಿ20 ಸಭೆಗೆ ವಿರೋಧಪಕ್ಷದ ನಾಯಕರನ್ನು ಆಹ್ವಾನಿಸದಿರುವುದು ತಪ್ಪು :

ನವದೆಹಲಿಯಲ್ಲಿ ನಡೆಯುತ್ತಿರುವ ಜಿ20 ಸಭೆಗೆ ಕಾಂಗ್ರೆಸ್ ನ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸದಿರುವ ಬಗ್ಗೆ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆಯವರು ಅಧಿಕೃತವಾಗಿ ರಾಜ್ಯಸಭೆಯ ವಿರೋಧಪಕ್ಷದ ನಾಯಕರಾಗಿದ್ದು, ಅವರನ್ನು ಜಿ20 ಸಭೆ ಆಹ್ವಾನಿಸದಿರುವುದು ತಪ್ಪು ಎಂದು ತಿಳಿಸಿದರು.

ಪರಿಹಾರ ಮಾರ್ಗಸೂಚಿ ಪರಿಷ್ಕರಣೆಗಾಗಿ ಕೇಂದ್ರ ಸರ್ಕಾರಕ್ಕೆ ಮನವಿ :

ಬರಗಾಲ ಘೋಷಿತ ಪ್ರದೇಶಗಳಿಗೆ ಪರಿಹಾರ ಒದಗಿಸಲು ಇರುವ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದ್ದು, ಇದುವರೆಗೆ ಯಾವುದೇ ಉತ್ತರ ಬಂದಿರುವುದಿಲ್ಲ. ಬರಗಾಲ ಘೋಷಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಡಿಯುವ ನೀರು, ಬಿತ್ತನೆಗೆ ನೆರವು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತದೆ. ಆದರೆ ಕೇಂದ್ರ ಸರ್ಕಾರದಿಂದಲೂ ಸಕಾಲದಲ್ಲಿ ನೆರವು ಬರಬೇಕಿದೆ ಎಂದರು.

ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿಯಿಲ್ಲ :

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿಗಳಾಗಬೇಕೆಂದು ಪಕ್ಷದ ಅಭಿಮಾನಿಗಳು ಆಶಿಸುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಪ್ರಧಾನಿಗಳಾಗಬಹುದು. ಅವರ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ . ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಿಂದ ನೇರವಾಗಿ ಪ್ರಧಾನಮಂತ್ರಿಗಳಾದರು. ನನಗೆ ರಾಷ್ಟ್ರ ರಾಜಕಾರಣದಲ್ಲಿ ಯಾವುದೇ ಆಸಕ್ತಿಯಿಲ್ಲ ಎಂದು ತಿಳಿಸಿದರು.

ಕಳಪೆ ಸಮವಸ್ತ್ರ ನೀಡಿದ ವಿರುದ್ಧ ಕ್ರಮ ಕೈಗೊಳ್ಳಲು ತೀರ್ಮಾನ :

ಚುನಾವಣೇ ಸಂದರ್ಭದಲ್ಲಿ ಹಿಜಾಬ್, ಹಲಾಲ್ ಪ್ರಕರಣಗಳು, ಹಿಂದುತ್ವ, ಸನಾತನ ಧರ್ಮದ ಕುರಿತು ಚರ್ಚೆ ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಜಾಬ್ ಹಲಾಲ್ ಪ್ರಕರಣಗಳು ನ್ಯಾಯಾಲಯದಲ್ಲಿದೆ., ವಿದ್ಯಾವಿಕಾಸ ಯೋಜನೆಯಡಿ ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ಮಕ್ಕಳಿಗೆ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿರುವ ಬಗ್ಗೆ ತನಿಖೆ ನಡೆಸಲು ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಳಪೆ ಬಟ್ಟೆ ನೀಡಿರುವುದಕ್ಕೆ ಪಾವತಿಯೂ ಆಗಿರುವುದರಿಂದ, ಸಂಬಂಧಪಟ್ಟವರನ್ನು ಇದಕ್ಕೆ ಜವಾಬ್ದಾರರನ್ನಾಗಿಸಬೇಕೆಂದು ತೀರ್ಮಾನಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಸಂಬಂಧಪಟ್ಟವರಿಂದ ಪಾವತಿಸಲಾಗದ ಮೊತ್ತವನ್ನು ಮರುಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Siddaramiah Dkshivakumar Modi amithsha bjp jds congress Yadiyurappa bommai
admin September 9, 2023
Share this Article
Facebook Twitter Whatsapp Whatsapp LinkedIn Copy Link
Previous Article ಮೈಸೂರಿನಲ್ಲಿ ಇಬ್ಬರು ಸುಲಿಗೆಕೋರರ ಬಂಧನ 10 ಪ್ರಕರಣಗಳು ಪತ್ತೆ
Next Article ಮಹಿಷ ದಸರಾ ಅದೆಂಗ್ ಮಾಡ್ತಾರೋ ಮಾಡ್ಲಿ ನೋಡ್ತೀನಿ ಸರ್ಕಾರಕ್ಕೆ ಪ್ರತಾಪ್ ಸಿಂಹ ಸವಾಲ್
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?