ಮೈಸೂರು : ನನ್ನ ಹೆಣವೂ ಬಿಜೆಪಿಗೆ ಹೋಗಲ್ಲ.
ನನ್ನ ಇಡೀ ರಾಜಕಾರಣ ಕೋಮುವಾದಿ ಶಕ್ತಿಗಳ ವಿರುದ್ಧವೇ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕುಮಾರಸ್ವಾಮಿ ಹೇಳಿಕೆ ನಗೆ ಪಾಟಲಿನದ್ದು.
ನಾನು ಬಿಜೆಪಿಗೆ ಹೋಗುತ್ತೇನೆ ಅಂದ್ರೆ ಯಾರಾದರೂ ನಂಬುತ್ತಾರಾ.ಯಾರನ್ನೋ ಯಾವುದೊ ಸಂಧರ್ಭದಲ್ಲಿ ಬೇಟಿ ಮಾಡಿರುತ್ತೇವೆ.ಅದಕ್ಕೆಲ್ಲ ಪಕ್ಷ ಸೇರುತ್ತಾರೆ ಎಂದು ಹೇಳಲು ಸಾಧ್ಯನಾ.ಇತ್ತೀಚಿಗೆ ಅಮಿತ್ ಶಾ ಭೇಟಿ ಮಾಡಿದ್ದೆ.ಹಿಂದೆ ಯಾವದೊ ಸಂಧರ್ಭದಲ್ಲಿ ಅಡ್ವಾಣಿ ಅವರನ್ನ ಬೇಟಿ ಮಾಡಿದ್ದೆ.ಅದಕ್ಕೆಲ್ಲ ಈ ಅರ್ಥ ಕಟ್ಟುವುದಕ್ಕೆ ಆಗುತ್ತದಾ ಎಂದು
ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು