ಮೈಸೂರು: ನಾವು ಖುಷಿಯಿಂದ ನೀರು ಬಿಡುತ್ತಿಲ್ಲ.
ಪ್ರಾಧಿಕಾರದ ಆದೇಶ ಇರುವ ಕಾರಣ ಅನಿವಾರ್ಯವಾಗಿ ನೀರು ಬಿಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ತಮಿಳುನಾಡು ವಿನಾಕಾರಣ ಖ್ಯಾತೆ ತೆಗೆದಿದೆ.
21 ರಂದು ಕೋರ್ಟ್ ನಲ್ಲಿ ನಮ್ಮ ಸಂಕಷ್ಟ ವಿವವರಿಸುತ್ತೇವೆ.ಬಿಜೆಪಿ ಇದರಲ್ಲಿ ರಾಜಕಾರಣ ಮಾಡಲ್ಲ ಅಂತ ಹೇಳಿ ರಾಜಕಾರಣ ಮಾಡುತ್ತಿದ್ದಾರೆ.
ಪ್ರಧಾನಿ ಬಳಿ ನಿಯೋಗ ಹೋಗಲು ಸಿದ್ದರಿದ್ದೆವು.
ನಮಗು ಪ್ರಧಾನಿ ಭೇಟಿಗೆ ದಿನಾಂಕ ಸಿಗುತ್ತಿಲ್ಲ.
ಬಿಜೆಪಿಯವರಾದ್ರು ಹೋಗಿ ಕೇಳಲಿ ಎಂದರೆ ಅವರು ಕೇಳುತ್ತಿಲ್ಲ.ಇಲ್ಲಿ ಕುಳಿತು ಹೋರಾಟದ ಕಥೆ ಹೇಳುತ್ತಿದ್ದಾರೆ.
ನಾವು ರೈತರ ರಕ್ಷಣೆಗೆ ಈಗಲೂ ಬದ್ದ ಎಂದರು
ಖಾಸಗಿ ವಾಹನ ಮಾಲೀಕ ಚಾಲಕರಿಂದ ಬೆಂಗಳೂರು ಬಂದ್ ವಿಚಾರ.ಅವರು ಈಡೇರಿಸುವಂತೆ ಬೇಡಿಕೆ ಕೇಳಿದ್ರೆ ಮಾಡಬಹುದು.ಈಡೇರಿಸಲಾಗದ ಬೇಡಿಕೆ ಇಟ್ಟರೆ ಹೇಗೆ.
ರಾಜ್ಯದಲ್ಲಿ ಮಹಿಳೆಯರಿಗೆ ಅನುಕೂಲ ಆಗಲು ಶಕ್ತಿ ಯೋಜನೆ ತಂದಿದ್ದೇವೆ.ಇದರಿಂದ ಖಾಸಗಿ ಬಸ್ಗಳಿಗೆ ಅವರು ಬರುತ್ತಿಲ್ಲ ಎನ್ನುತ್ತಾರೆ.ಈಗಾಗಿ ಅವರಿಗೆ ನಷ್ಟ ಆಗುತ್ತಿದೆ ಎನ್ನುವುದು ಅವರ ವಾದ.ನಷ್ಟ ಆಗುವುದು ಬಿಡುವುದು ಬೇರೆ.ನಷ್ಟ ತುಂಬಿಕೊಡಿ ಅಂದ್ರೆ ಆಗುತ್ತಾ?
ಅದು ಸಾಧ್ಯವಾಗದ ಮಾತು ಎಂದರು
ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡಲು ಎಲ್ಲರಿಗೂ ಅವಕಾಶ ಇದೆ.ಅದನ್ನು ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ.ಶಾಂತಿಯುತವಾಗಿ ಪ್ರತಿಭಟನೆ ಮಾಡಲಿ ಎಂದರು