• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರ – ಶಾಸಕ ಕೆ.ಹರೀಶ್ ಗೌಡ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರ – ಶಾಸಕ ಕೆ.ಹರೀಶ್ ಗೌಡ
ಜಿಲ್ಲೆಮೈಸೂರುರಾಜಕೀಯರಾಜ್ಯ

ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರ – ಶಾಸಕ ಕೆ.ಹರೀಶ್ ಗೌಡ

admin
Last updated: 2023/09/17 at 9:31 AM
admin
Share
3 Min Read
SHARE

– ಪ್ರತಿಯೊಂದು ಕ್ಷೇತ್ರದಲ್ಲೂ ವಿಶ್ವಕರ್ಮ ಸಮುದಾಯದವರ ಕೊಡುಗೆ ಇದೆ

ಮೈಸೂರು : ವಿಶ್ವಕರ್ಮ ಎಂದರೆ ಬ್ರಹ್ಮ. ಬ್ರಹ್ಮನಿಂದಲೇ ಸೃಷ್ಟಿ. ಪ್ರತಿಯೊಂದು ಕ್ಷೇತ್ರದಲ್ಲಿ ವಿಶ್ವಕರ್ಮ ಸಮುದಾಯದ ಕೊಡುಗೆ ಇದೆ ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ ಹರೀಶ್ ಗೌಡರವರು ತಿಳಿಸಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ ಸಮಿತಿ ಸಹಯೋಗದಲ್ಲಿ ನಗರದ ಕಲಾಮಂದಿರದಲ್ಲಿ ಹಮ್ಮಿಕೊಂಡಿದ್ದ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಮ್ಮ ಕ್ಷೇತ್ರದಲ್ಲಿ ಸುಮಾರು ಮೂವತ್ತು ಸಾವಿರ ವಿಶ್ವಕರ್ಮ ಸಮುದಾಯದ ಜನರಿದ್ದಾರೆ. ನಾಡಿಗೆ ವಿಶ್ವಕರ್ಮ ಸಮುದಾಯದವರ ಕೊಡುಗೆ ಅಪಾರವಿದೆ. ಮುಂದೆಯೂ ಸಹ ನಾಡಿಗೆ ವಿಶ್ವಕರ್ಮ ಸಮುದಾಯ ಬೇಕು. ಇಂತಹ ಕಾಯಕ ಸಮುದಾಯದ ಬೇಡಿಕೆಗಳನ್ನು ಈಡೇರಿಸುವಲ್ಲಿ ನಾವು ಶ್ರಮಿಸುತ್ತೇವೆ. ಮಾನ್ಯ ಮುಖ್ಯಮಂತ್ರಿಗಳಿಗೂ ವಿಶ್ವಕರ್ಮ ಜನಾಂಗದ ಮೇಲೆ ಅತಿ ಹೆಚ್ಚು ಪ್ರೀತಿ ಇದೆ ಎಂದು ತಿಳಿಸಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ನರಸಿಂಹರಾಜ ಕ್ಷೇತ್ರದ ವಿಧಾನಸಭಾ ಶಾಸಕರಾದ ತನ್ವೀರ್ ಸೇಠ್ ರವರು ಮಾತನಾಡಿ,
ಸಮುದಾಯದ ಬೇಡಿಕೆಗಳನ್ನು ಸರ್ಕಾರದ ಮುಂದಿಡಲು ಹಾಗೂ ಸರ್ಕಾರದ ಸವಲತ್ತುಗಳನ್ನು ಜನರಿಗೆ ತಲುಪಿಸಲು ಜಯಂತಿ ಕಾರ್ಯಕ್ರಮಗಳು ತಮ್ಮ ವೇದಿಕೆಯಾಗಿದೆ. ರಾಜ್ಯ ಸರ್ಕಾರ ಪ್ರಸ್ತುತ 52 ಮಹಾನ್ ವ್ಯಕ್ತಿಗಳ ಜಯಂತಿ ಮಹೋತ್ಸವವನ್ನು ಆಚರಣೆಗೆ ತಂದಿದ್ದು, ಸಂಘಟಿತ ಹಾಗೂ ಅಸಂಘಟಿತ ಸಮುದಾಯಗಳ ಶೈಕ್ಷಣಿಕ, ಸಾಮಾಜಿಕ, ಬೆಳವಣಿಗೆಗೆ ಪೂರಕವಾದ ಚಿಂತನೆಗಳನ್ನು ಸರ್ಕಾರದ ಮುಂದಿಡಲು ಪೂರಕ ಮಾಧ್ಯಮವಾಗಿವೆ ಎಂದರು.

ನನ್ನ ಕ್ಷೇತ್ರವಾದ ನರಸಿಂಹರಾಜ ಕ್ಷೇತ್ರವು ಪುಟ್ಟ ಭಾರತವಿದ್ದಂತೆ. ನನ್ನ ಕ್ಷೇತ್ರದಲ್ಲಿ ಎಲ್ಲಾ ಧರ್ಮ, ಜಾತಿ, ಸಮುದಾಯದ ಜನರು ಜೀವಿಸುತ್ತಿದ್ದಾರೆ. ಎಲ್ಲಾ ಸಮುದಾಯಗಳ ಬೇಡಿಕೆಗಳನ್ನು ಪೂರೈಸುವ ಜವಾಬ್ದಾರಿ ಸರ್ಕಾರದ್ದು. ಸೋಲಿಗರ ಮೊಟ್ಟ ಮೊದಲ ಸಮುದಾಯ ಭವನ ನನ್ನ ಕ್ಷೇತ್ರದಲ್ಲಿ ನಿರ್ಮಾಣವಾಗುತ್ತಿದೆ. ಬೇರೆ ಜಾತಿ ಸಮುದಾಯಗಳಿಗಿಂತ ನನ್ನ ಜಾತಿ ಸಮುದಾಯವೇ ಶ್ರೇಷ್ಠ ಎಂದು ಹೇಳಲು ಸಾಧ್ಯವಿಲ್ಲ. ಏಕೆಂದರೆ ಪ್ರತಿಯೊಂದು ಸಮುದಾಯಕ್ಕೂ ಅನೇಕ ಸೌಲಭ್ಯಗಳು ಹಾಗೂ ತನ್ನದೇ ಆದ ಶ್ರೇಷ್ಠತೆ ಇದೆ ಎಂದು ತಿಳಿಸಿದರು.

ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕು. ಉತ್ತಮ ಸಮಾಜ ನಿರ್ಮಾಣಕ್ಕಾಗಿ ಜೀವಿಗಳಿಗೆ ನ್ಯಾಯಯುತ ಅವಕಾಶಗಳು ದೊರೆಯಬೇಕು. ವಿಶ್ವಕರ್ಮ ಜನಾಂಗದ ಬೇಡಿಕೆಯಂತೆ ವಿಶ್ವಕರ್ಮ ಸಮುದಾಯ ಭವನ ನಿರ್ಮಿಸಲು ಸ್ಪಂದಿಸುತ್ತೇವೆ ಎಂದು ತಿಳಿಸಿದರು.

ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ರವರು ಮಾತನಾಡಿ, ವಿಶ್ವಕರ್ಮ ಸಮುದಾಯದವರು ತಮ್ಮ ಕಾಯಕವನ್ನು ದೇವರೆಂದು ಭಾವಿಸಿ, ನಾಡಿಗೆ ಕಾಯಕದ ಮಹತ್ವವನ್ನು ಸಾರಿದ್ದಾರೆ. ಇಂತಹ ಸಮುದಾಯದ ಬೆಳವಣಿಗೆಗೆ ರಾಜ್ಯ ಸರ್ಕಾರ ಮತ್ತಷ್ಟು ಸೌಲಭ್ಯಗಳನ್ನು ಕಲ್ಪಿಸಲಿದೆ ಎಂದರು.

ವಿಧಾನ ಪರಿಷತ್ತಿನ ಶಾಸಕರಾದ ಸಿಎನ್ ಮಂಜೇಗೌಡ ರವರು ಮಾತನಾಡಿ, ಮನುಷ್ಯ ಹೊಸ ವಿಚಾರಗಳನ್ನು ಕಲಿಯಲು ಉತ್ಸುಕನಾಗಬೇಕು. ಬುದ್ಧಿವಂತನಾಗಲು ಇಂತಹ ಕಾರ್ಯಕ್ರಮಗಳಲ್ಲಿ, ಸೆಮಿನಾರ್ ಗಳಲ್ಲಿ ಭಾಗವಹಿಸಬೇಕು. ಏನನ್ನಾದರೂ ಪ್ರಶ್ನಿಸಲು ಒಗ್ಗಟ್ಟುಬೇಕು. ಕೆಲವು ಸಮುದಾಯಗಳಲ್ಲಿ ಇಂದಿಗೂ ಒಗ್ಗಟ್ಟಿನ ಕೊರತೆ ಇದೆ. ಸರ್ಕಾರವನ್ನು ಎಚ್ಚರಿಸಲು ಸಮುದಾಯದ ಜನರಲ್ಲಿ ಒಗ್ಗಟ್ಟಿರಬೇಕು, ಪರಸ್ಪರ ಸಹಕಾರವಿರಬೇಕು ಇಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ವಿಶ್ವಕರ್ಮ ಏಕದಂಡಗಿ ಮಠ, ಶಾಡಲಗೇರಿ ಹಾಗೂ ಶ್ರೀ ಕ್ಷೇತ್ರ ಪಂಚನಂದಿ ಪಾಪಗ್ನಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಸೂರ್ಯನಾರಾಯಣ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದು, ವಿಧಾನ ಪರಿಷತ್ ನ ಶಾಸಕರಾದ ಡಾಕ್ಟರ್ ಡಿ ತಿಮ್ಮಯ್ಯ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಜೆ ಗೋವಿಂದರಾಜು, ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ.ಎನ್ ಮಲ್ಲಿಕಾರ್ಜುನ ಸ್ವಾಮಿ ಸಹಾಯಕ ನಿರ್ದೇಶಕರಾದ ಡಾ. ಎಮ್ ಡಿ ಸುದರ್ಶನ್, ನಗರ ಪಾಲಿಕೆಯ ಸದಸ್ಯರಾದ ರಮೇಶ್ ರಮಣಿ, ಮೈಸೂರು ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷರಾದ ಹುಚ್ಚಪ್ಪ, ಭಾರತೀಯ ಸೇನೆಯ ಪರಮೇಶ್ವರ್, ವಿಶ್ವಕರ್ಮ ಜಯಂತಿ ಆಚರಣೆ ಸಮಿತಿಯ ಅಧ್ಯಕ್ಷರಾದ ಸಿದ್ದಾಚಾರ್, ಉಪಾಧ್ಯಕ್ಷರಾದ ರಾಜುಕಾರ್ಯ, ಕಾರ್ಯದರ್ಶಿ ನಾರಾಯಣಚಾರ್, ಸಹ ಕಾರ್ಯದರ್ಶಿಗಳಾದ ಸೋಮಾಚಾರ್ ಸ್ವಾಮಿ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರುಗಳು ಉಪಸ್ಥಿತರಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: mysuru vishwkarmasamaja kharishgowda congress
admin September 17, 2023
Share this Article
Facebook Twitter Whatsapp Whatsapp LinkedIn Copy Link
Previous Article ಕಾವೇರಿ ವಿಚಾರದಲ್ಲಿ ಬಿಜೆಪಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ – ವಾಟಾಳ್ ನಾಗರಾಜ್ ಕಿಡಿ
Next Article ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಬಿಜೆಪಿ ಟೆಂಡರ್ ಕರಿಯಬಹುದು – ಸಚಿವ ಶಿವರಾಜ್ ತಂಗಡಗಿ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?