• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಯಡಿಯೂರಪ್ಪ ಅವರದ್ದು ರಾಜಕೀಯ ಹೇಳಿಕೆ – ಸಿದ್ದರಾಮಯ್ಯ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಕಲ್ಬುರ್ಗಿ > ಯಡಿಯೂರಪ್ಪ ಅವರದ್ದು ರಾಜಕೀಯ ಹೇಳಿಕೆ – ಸಿದ್ದರಾಮಯ್ಯ
ಕಲ್ಬುರ್ಗಿಜಿಲ್ಲೆರಾಜಕೀಯರಾಜ್ಯ

ಯಡಿಯೂರಪ್ಪ ಅವರದ್ದು ರಾಜಕೀಯ ಹೇಳಿಕೆ – ಸಿದ್ದರಾಮಯ್ಯ

admin
Last updated: 2023/09/17 at 3:12 PM
admin
Share
3 Min Read
SHARE

ಕಾವೇರಿ ನೀರು: ಯಡಿಯೂರಪ್ಪ ನವರದ್ದು ರಾಜಕೀಯ ಹೇಳಿಕೆ-ಸಿಎಂ ಸಿದ್ದರಾಮಯ್ಯ

ಕಲಬುರಗಿ : ಕಾವೇರಿ ನೀರು ವಿಚಾರವಾಗಿ ಯಡಿಯೂರಪ್ಪ ನವರ ಹೇಳಿಕೆ ರಾಜಕೀಯವಾಗಿ ಪ್ರೇರಿತ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಅವರು ಇಂದು ಕಲಬುರಗಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತಾನಾಡಿದರು.

ನೀರು ಬಿಡಲು ನಮ್ಮ ಬಳಿ ನೀರಿಲ್ಲ, ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತಿದ್ದು, ನ್ಯಾಯಾಲಯ ಸಮಿತಿಯ ಆದೇಶ ಪಾಲನೆ ಮಾಡಿಲ್ಲ ಎಂದು ಪ್ರಶ್ನಿಸಿದೆ. ನೀರು ಬಿಡಬೇಕೆಂದಿದ್ದರೂ ನಮಗೆ 106 ಟಿ. ಎಂ. ಸಿ ನೀರಿನ ಅಗತ್ಯವಿದೆ. ನಮ್ಮ ಬಳಿ ಇರುವುದೇ 53 ಟಿಎಂಸಿ. ಕುಡಿಯುವ ನೀರಿಗೆ 30 ಟಿಎಂಸಿ, ಬೆಳೆ ಉಳಿಸಿಕೊಳ್ಳಲು 70 ಟಿಎಂಸಿ ನೀರು ಮತ್ತು ಕೈಗಾರಿಕೆಗಳಿಗೆ 3 ಟಿಎಂಸಿ ಅಗತ್ಯ. ಒಟ್ಟು 106 ಟಿಎಂಸಿ ನಮಗೆ ಅಗತ್ಯವಿದೆ. ನಮ್ಮ ಬಳಿ ಇರುವುದೇ 53 ಟಿಎಂಸಿ ನೀರು. ನೀರು ಕೊಡಲು ನಮ್ಮ ಬಳಿ ನೀರಿಲ್ಲ. ಕಾವೇರಿ ನೀರನ್ನು ತಮಿಳುನಾಡಿಗೆ ಯಡಿಯೂರಪ್ಪ ಅವರ ಕಾಲದಲ್ಲಿ ಹಾಗೂ ಎಲ್ಲರ ಕಾಲದಲ್ಲಿ ಬಿಡಲಾಗಿದೆ.

ಸಾಮಾನ್ಯ ವರ್ಷದಲ್ಲಿ 177.25 ಟಿಎಂಸಿ ನೀರು ಬಿಡಲಾಗುತ್ತದೆ. ಈವರೆಗೆ 37.7 ಟಿಎಂಸಿ ಮಾತ್ರ ಬಿಟ್ಟಿದ್ದೇವೆ. ನಾವು ಬಿಡಬೇಕಿದ್ದುದ್ದು 99 ಟಿಎಂಸಿ ನೀರು. ಎಲ್ಲಿ ನೀರು ಬಿಟ್ಟಿದ್ದೇವೆ ಎಂದು ಮರು ಪ್ರಶ್ನಿಸಿದರು.

ಕಾವೇರಿ ನೀರು ನಿಯಂತ್ರಣ ಸಮಿತಿ 5000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದು ಸೂಚಿಸಿದೆ. ಅಷ್ಟು ನೀರು ಇಲ್ಲದಿರುವುದರಿಂದ ನಾವು ನೀರು ಬಿಟ್ಟಿಲ್ಲ ಎಂದರು.

ಇಂಡಿಯಾ ಯಾವ ಧರ್ಮದ ವಿರುದ್ಧವೂ ಇಲ್ಲ.

ಇಂಡಿಯಾ ಒಕ್ಕೂಟ ಸನಾತನ ಧರ್ಮದ ವಿರುದ್ಧವಿದೆ ಎಂದು ಬಿಜೆಪಿಯ ಹೇಳಿಕೆ ಬಗ್ಗೆ ಮಾತನಾಡಿ ನಾವು ಯಾವ ಧರ್ಮದ ವಿರುದ್ದ ಇಲ್ಲ. ಎಲ್ಲ ಧರ್ಮಗಳನ್ನು ಸಮಾನವಾಗಿ ಕಾಣುತ್ತೇವೆ. ಧರ್ಮ ಎಂದರೆ ಬದುಕಿನ ದಾರಿ. ಜನರಿಗಾಗಿ ಧರ್ಮವಿರುವುದು, ಧರ್ಮಕ್ಕಾಗಿ ಜನ ಅಲ್ಲ ಎಂದರು. ಧರ್ಮ ಮನುಷ್ಯನ ಒಳಿತಿಗಾಗಿ ಇದೆ. ದಯೆಯೇ ಧರ್ಮದ ಮೂಲ. ದಯೆ ಇಲ್ಲದ ಧರ್ಮ ಯಾವುದಯ್ಯಾ ಎಂದು ಬಸವಾದಿ ಶರಣರು ಹೇಳಿದ್ದಾರೆ. ಧರ್ಮದಲ್ಲಿ ದಯೆ, ಕರುಣೆ, ಮನುಷ್ಯತ್ವ ಇರಬೇಕು ಎಂದರು.

ಗ್ಯಾರಂಟಿ ಯೋಜನೆ ಅಭಿವೃದ್ಧಿ ಕೆಲಸ ಅಲ್ಲವೇ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸರ್ಕಾರ ಇನ್ನೂ ಗ್ಯಾರಂಟಿ ಯೋಜನೆಗಳ ಗುಂಗಿನಲ್ಲಿಯೇ ಇದೆ ಎಂದು ಪಾದಯಾತ್ರೆ ಮಾಡುವ ಬಗ್ಗೆ ಪ್ರತಿಕ್ರಿಯೆ ನೀಡಿ, 5 ಗ್ಯಾರಂಟಿ ಯೋಜನೆ ಅಭಿವೃದ್ಧಿ ಕೆಲಸ ಅಲ್ಲವೇ ಎಂದು ಪ್ರಶ್ನಿಸಿದರು. ಯಾವ ಸರ್ಕಾರ 1.13 ಕೋಟಿ ಜನರಿಗೆ 2000 ರೂ.ಗಳನ್ನು ನೀಡಿದೆ? ಯಡಿಯೂರಪ್ಪ ಅವರು 10 ಕೆಜಿಯಲ್ಲಿ ಒಂದು ಕಳು ಕಡಿಮೆಯಾದರೂ ಪ್ರತಿಭಟಿಸುವುದಾಗಿ ಹೇಳಿದ್ದರು, ಮಾಡಿದರೇ ? ಎಂದರು. ಅವರ ಕಾಲದಲ್ಲಿ 7 ಕೆಜಿ ನೀಡುತ್ತಿದ್ದ ಅಕ್ಕಿಯನ್ನು 5 ಕೆಜಿಗೆ ಇಳಿಸಿದರು. ಅಲ್ಲೇ ಗಿರಕಿ ಹೊಡೆಯುತ್ತಿದ್ದಾರೆ. ಐದು ಗ್ಯಾರಂಟಿ ಕೊಟ್ಟಿದ್ದೇವೆಂದು ಪಾದಯಾತ್ರೆ ಮಾಡುತ್ತಿದ್ದಾರೆಯೇ ಎಂದು ವ್ಯಂಗವಾಡಿದರು. 600 ಭಾರವಸೆ ನೀಡಿ ಶೇ 10 ರಷ್ಟನ್ನೂ ಜಾರಿಗೆ ತರಲಿಲ್ಲ. ಅವರಿಗೆ ಯಾವ ನೈತಿಕ ಹಕ್ಕಿದೆ ಎಂದರು.

ಸಾಲಮನ್ನಾ ಮಾಡ್ತೀವಿ ಅಂದರು ಮಾಡಲಿಲ್ಲ. ನೀರಾವರಿಗೆ 1 ಲಕ್ಷ ಕೋಟಿ ನೀಡುವುದಾಗಿ ಹೇಳಿದರು. ನೀಡಲಿಲ್ಲ, ಯಾವುದನ್ನೂ ನೀಡಿಲ್ಲ ಎಂದರು.

ಮೂರು ಡಿಸಿಎಂ: ಪಕ್ಷದ ವರಿಷ್ಠರ ತೀರ್ಮಾನ ಅಂತಿಮ

ಮೂವರು ಡಿಸಿಎಂ ಮಾಡುವ ಬಗ್ಗೆ ಸಚಿವ ಕೆ.ಎನ್.ರಾಜಣ್ಣ ಹೇಳಿಕೆ ನೀಡಿರುವ ಬಗೆ ಪ್ರತಿಕ್ರಿಯೆ ನೀಡಿ, ಅಂತಿಮವಾಗಿ ಪಕ್ಷದ ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದರು. ಈಗ ಒಬ್ಬರನ್ನು ಮಾಡಿದ್ದಾರೆ. ವರಿಷ್ಠರೊಂದಿಗೆ ಮಾತನಾಡುವುದಾಗಿ ಹೇಳಿದ್ದಾರೆ, ಮಾತನಾಡಲಿ. ಹೈ ಕಮಾಂಡ್ ನಿರ್ಧಾರವನ್ನು ಪಾಲಿಸುವುದಾಗಿ ಹೇಳಿದರು.

ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಲು ಸರ್ವ ಪಕ್ಷ ನಿಯೋಗ

ಕೃಷ್ಣ ಮೇಲ್ದಂಡೆ ಯೋಜನೆ ವಿಚಾರ ನ್ಯಾಯಾಲಯದಲ್ಲಿದ್ದು, ಆಂಧ್ರ , ತೆಲಂಗಾಣ ಅರ್ಜಿ ಹಾಕಿದ್ದಾರೆ. ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆಯೇ ಹೊರಡಿಸಿಲ್ಲ. ಮಹದಾಯಿ ಯೋಜನೆಯಲ್ಲಿ ಗೆಜೆಟ್ ಅಧಿಸೂಚನೆ ಆಗಿದೆ. ಆದರೆ ಅರಣ್ಯ ಹಾಗೂ ಪರಿಸರ ತೀರುವಳಿ ನೀಡಿಲ್ಲ. ನಾಳೆ ಕೊಟ್ಟರೆ, ನಾಡಿದ್ದೇ ಕೆಲಸ ಶುರು ಮಾಡುತ್ತೇವೆ ಎಂದರು. ಅದಕ್ಕಾಗಿಯೇ ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ, ಯೋಜನೆಗಳ ಬಗ್ಗೆ ಸರ್ವಪಕ್ಷ ನಿಯೋಗ ತೆರಳಲು ದಿನಾಂಕ ನಿಗದಿಯಾಗುತ್ತಿಲ್ಲ. ಬಿಜೆಪಿ
ಯವರೇ 25 ಸಂಸದರಿದ್ದಾರೆ ಎಂದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Siddaramiah dkshivakumar congress jds bjp Yadiyurappa
admin September 17, 2023
Share this Article
Facebook Twitter Whatsapp Whatsapp LinkedIn Copy Link
Previous Article ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಬಿಜೆಪಿ ಟೆಂಡರ್ ಕರಿಯಬಹುದು – ಸಚಿವ ಶಿವರಾಜ್ ತಂಗಡಗಿ
Next Article ಕಾವೇರಿ ವಿಚಾರದಲ್ಲಿ ಸರ್ಕಾರದ ದುರಂತ ನಿರ್ಧಾರ – ಹೆಚ್.ಡಿ ದೇವೇಗೌಡ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?