• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಸುತ್ತೂರು ರಾಜೇಂದ್ರ ಶ್ರೀಗಳು ಎಲ್ಲರಿಗೂ ಪ್ರೇರಣಾ ಶಕ್ತಿ – ಹೆಚ್.ಸಿ ಮಹದೇವಪ್ಪ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಸುತ್ತೂರು ರಾಜೇಂದ್ರ ಶ್ರೀಗಳು ಎಲ್ಲರಿಗೂ ಪ್ರೇರಣಾ ಶಕ್ತಿ – ಹೆಚ್.ಸಿ ಮಹದೇವಪ್ಪ
ಜಿಲ್ಲೆಮೈಸೂರು

ಸುತ್ತೂರು ರಾಜೇಂದ್ರ ಶ್ರೀಗಳು ಎಲ್ಲರಿಗೂ ಪ್ರೇರಣಾ ಶಕ್ತಿ – ಹೆಚ್.ಸಿ ಮಹದೇವಪ್ಪ

admin
Last updated: 2023/09/28 at 3:32 PM
admin
Share
3 Min Read
SHARE

ಮೈಸೂರು : ರುದ್ರಾಕ್ಷಿ ಮಾಲೆಯಲ್ಲಿ ಇದ್ದಂತಹ ಚಿನ್ನವನ್ನು ಮಾರಾಟ ಮಾಡಿ ಬಡ ವಿದ್ಯಾರ್ಥಿಗಳಿಗೆ ಅನ್ನ ಹಾಗೂ ಅಕ್ಷರ ದಾಸೋಹ ಉಣಬಡಿಸಿದ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮಿಗಳು ಪ್ರತಿಯೊಬ್ಬರಿಗೂ ಪ್ರೇರಣಾ ಶಕ್ತಿಯಾಗಿದ್ದಾರೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದರು.

ಜೆಎಸ್‌ಎಸ್ ಮಹಾವಿದ್ಯಾಪೀಠದ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ವತಿಯಿಂದ ನಗರದ ಜೆಎಸ್‌ಎಸ್ 2ನೇ ಹಂತದಲ್ಲಿ ಗುರುವಾರ ನಡೆದ ಜಗದ್ಗುರು ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 108ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು.

ನಮಗೆಲ್ಲರಿಗೂ ವಿದ್ಯೆ ನೀಡಬಾರದೆಂದು ನಿರ್ಧರಿಸಿದ್ದವರ ವಿರುದ್ಧ ನಿಂತ ಶ್ರೀಗಳು, ಸಮಾಜದ ಎಲ್ಲ ವರ್ಗದವರಿಗೂ ವಿದ್ಯಾದಾನ ಮಾಡಿದರು. ಉದಾತ್ತವಾದ ಮನಸ್ಸು ಹೊಂದಿದ್ದ ಅವರು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡಿದ್ದರು. ಅಂತಹ ಸಂತರು ತೋರಿಸಿಕೊಟ್ಟಿರುವ ಮಾರ್ಗದಲ್ಲಿ ಪ್ರತಿಯೊಬ್ಬರೂ ಸಾಗಬೇಕು ಎಂದು ಕಿವಿಮಾತು ಹೇಳಿದರು.

ಬಸವಣ್ಣ ಅವರು ಬ್ರಾಹ್ಮಣ ಸಮುದಾಯದಲ್ಲಿ ಜನಸಿದ್ದರೂ, ದಯೆ ಇಲ್ಲದ ಧರ್ಮ ಯಾವುದೆಯ್ಯ, ದಯವೇ ಧರ್ಮದ ಮೂಲವಯ್ಯ ಎಂದು ಜಗತ್ತಿಗೆ ಸಾರಿದರು‌. ಅಸ್ಪೃಶ್ಯತೆ ಮತ್ತು ಲಿಂಗ ತಾರತಮ್ಯ ದೇಶವೇ ತಲೆತಗ್ಗಿಸುವಂಥ ವಿಚಾರ. ಇಂದು ಅನೇಕರು ಬಸವ ತತ್ವ ಹಾಗೂ ಸಂವಿಧಾನ ಓದಿದ್ದರೂ ಗಂಡು, ಹೆಣ್ಣು, ಮೇಲೂ, ಕೀಳು ಎಂಬ ತಾರತಮ್ಯದ ಜಂಜಾಟದಲ್ಲಿದ್ದಾರೆ‌. ಉತ್ತಮ ಸಮಾಜ ನಿರ್ಮಾಕ್ಕಾಗಿ ಮೊದಲು ಇಂತಹ ನಡವಳಿಕೆಯನ್ನು ಬಿಡಬೇಕು ಎಂದು ತಿಳಿಸಿದರು.

ಮಾನವತವಾದ ಹೊರತುಪಡಿಸಿ ನಾನು ಯಾವ ಧರ್ಮ, ಜಾತಿ ಸೇರಿದವರು ಎಂಬ ಕಲ್ಪನೆಯೇ ನನಗಿಲ್ಲ. ಬುದ್ದ, ಬಸವ ತತ್ವ ಹಾಗೂ ಸಂವಿಧಾನದ ಅಡಿಯಲ್ಲಿ ನಾನು ಬದುಕುತ್ತಿದ್ದೇನೆ. ಅಂತೆಯೇ ನಮ್ಮ ಮಕ್ಕಳನ್ನು ಜಾತಿ, ಮತ, ಪಂಥದಿಂದ ದೂರವಾಗಿಸಿ ವಿಶ್ವಮಾನವರಾಗಿ ಬದುಕುವಂತೆ ಬೆಳೆಸಬೇಕು ಎಂದರು‌.

ಸಮಾಜದ ಡೊಂಕನ್ನು ವಚನ ಮೂಲಕ ತಿದ್ದದ ಬಸವಣ್ಣ ಕಲ್ಯಾಣದಲ್ಲಿ ಕ್ರಾಂತಿ ಮಾಡಿದರು. ಜಾತಿ ವಿನಾಶವಾಗಬೇಕಾದರೆ ರಕ್ತ ಸಂಬಂಧಗಳು ಬೆಳೆಯಬೇಕು. ಆಗ ಹುಟ್ಟುವಂತ ಮಗು ಜಾತಿ, ಧರ್ಮಗಳನ್ನು ಮೀರಿ ಬೆಳೆಯಬೇಕು‌ ಎಂಬುದು ಅವರ ಕನಸಾಗಿತ್ತು. ಬಸವಣ್ಣನ ಸಾಮೂಹಿಕ ವಿವಾಹದ ಪರಿಕಲ್ಪನೆಯನ್ನು ಇಂದು ಸುತ್ತೂರು ಮಠ ಪಾಲಿಸುತ್ತಿದೆ ಎಂದು ಹೇಳಿದರು.

ಬಸವಧರ್ಮದಲ್ಲಿ ತಾರತಮ್ಯಕ್ಕೆ ಅವಕಾಶವೇ ಇಲ್ಲ. ಇಂದಿಗೂ ವೀರಶೈವ ಧರ್ಮದಲ್ಲಿ ಮಹಿಳೆಯರಿಗೆ ಮುಕ್ತವಾದ ಸ್ವಾತಂತ್ರ್ಯವಿದೆ. ವಿಶೇಷವಾದ ಸ್ಥಾನಮಾನಗಳಿಗೆ. ಅವರು ಬಹಳ ಮಾನವೀಯತೆಯಿಂದ ವರ್ತಿಸುತ್ತಾರೆ. ಇದು ಬಸವಣ್ಣ ಸಾಹಿತ್ಯ ಚಳುವಳಿ ಹಾಗೂ ಸಾವಿತ್ರಿಬಾಯಿ ಫುಲೆ ಅವರು ಹಾಕಿಕೊಟ್ಟ ಮಾರ್ಗದಿಂದ ಸಾಧ್ಯವಾಗಿದೆ ಎಂದು ತಿಳಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ಮಹಿಳೆಯರ ಸ್ಥಾನಮಾನಕ್ಕಾಗಿ ತಮ್ಮ ಸಚಿವಸ್ಥಾನಕ್ಕೆ ರಾಜೀನಾಮೆ ನೀಡಿದರು. ಮಹಿಳೆಯರು ಗಂಡಸರ ನಡುವೆ ಸಮಾನದಿಂದ ಬದುಕಬೇಕು ಎಂಬ ಉದ್ದೇಶಕ್ಕಾಗಿ ಅಹರ್ನಿಶಿ ದುಡಿದರು. ಅವರು ಹಾಕಿದ ಮಹಿಳಾ ಸಮಾನತೆಯ ಬುನಾದಿಯಿಂದಲೇ ಇಂದು ಮಹಿಳೆಯರಿಗೆ ರಾಜಕೀಯವಾಗಿಯೂ ಮೀಸಲಾತಿ ಬರುವಂತಾಗಿದೆ ಎಂದು ಹೇಳಿದರು‌.

ಕಳೆದ ಭಾರಿ ನಮ್ಮ ಸರ್ಕಾರ ಜಾರಿಗೆ ಬಂದ ಕೂಡಲೇ ಅನ್ನಭಾಗ್ಯದ ಕಡತಕ್ಕೆ ಸಿದ್ದರಾಮಯ್ಯ ಅವರು ಮೊದಲು ಸಹಿ ಹಾಕಿದರು. ಈ ಯೋಜ‌ನೆ ಬಗ್ಗೆ ಕೆಲವರು ಅಪಹಾಸ್ಯ ಮಾಡಿದರು. ಆದರೆ ಯೋಜನೆಯ ಮಹತ್ವ ತಿಳಿದಿದ್ದು ಕೋವಿಡ್ ಸಂದರ್ಭದಲ್ಲಿ. ಆ ವೇಳೆ ಎಲ್ಲಾ ವಿವಿಧ ಸಮುದಾಯಕ್ಕೆ ಸೇರಿದ ಮಹಿಳೆಯರು ಸಿದ್ದರಾಮಯ್ಯ ನೇತೃತ್ವರ ಸರ್ಕಾರವನ್ನು ಕೊಂಡಾಡಿದರು ಎಂದು ಮೆಲಕು ಹಾಕಿದರು.

ಬಡ, ಮಧ್ಯಮ ವರ್ಗದ ಬಡ ಸ್ತ್ರೀ ಸ್ವಾವಲಂಬಿಯಾದರೆ ದೇಶ ಅಭಿವೃದ್ಧಿಯಾಗುತ್ತದೆ. ಈ ಪರಿಕಲ್ಪನೆ ಅಡಿಯಲ್ಲಿ ಈಗಿನ ನಮ್ಮ ಸರ್ಕಾರವು ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಹೆಚ್ಚು ಒತ್ತು ನೀಡಿದೆ. ನಮ್ಮ ಸರ್ಕಾರದ ಗೃಹಲಕ್ಷ್ಮಿ, ಶಕ್ತಿ ಯೋಜನೆಗಳು ಮಹಿಳೆಯರ ಪರವಾಗಿದೆ ಎಂದು ತಿಳಿಸಿದರು.

ವರುಣ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷರಾದ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಮಾತನಾಡಿ, ಶಿವರಾತ್ರಿ ರಾಜೇಂದ್ರ ಸ್ವಾಮಿಗಳು ಸಮಾಜದ ಎಲ್ಲಾ ಜನರ ಬಗ್ಗೆ ಕಳಕಳಿ ಇಟ್ಟುಕೊಂಡಿದ್ದರು. ಆಧ್ಯಾತ್ಮಿಕವಾಗಿ ಮಾತ್ರವಲ್ಲದೆ, ಎಲ್ಲಾ ಕ್ಷೇತ್ರದಲ್ಲೂ ತಮ್ಮನ್ನು ತೊಡಗಿಸಿಕೊಂಡು ಸಮಾಜ ಮುಖಿಯಾಗಿ ಕೆಲಸ ಮಾಡಿದ್ದಾರೆ. ಈ ಭಾಗವೂ ಕೂಡ ವರುಣ ಕ್ಷೇತ್ರಕ್ಕೆ ಸೇರಲಿದ್ದು, ಇಲ್ಲಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವ ಮೂಲಕ ಅಭಿವೃದ್ಧಿ ಕೆಲಸವನ್ನು ಮಾಡಲಾಗುವುದು ಎಂದು ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ರಾಮಕೃಷ್ಣ ವಿದ್ಯಾಶಾಲೆಯ ಸಂಚಾಲಕರಾದ ಸ್ವಾಮಿ ಯುಕ್ತಾಕೇಶನಂದಾಜಿ, ಮಹಾರಾಣಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ವಿ.ವಸಂತಕುಮಾರ್, ಸಂಘದ ಅಧ್ಯಕ್ಷ ಎಂ.ಎಸ್.ಸರ್ಪಭೂಷಣ್, ಉಪಾಧ್ಯಕ್ಷ ಡಿ.ಎಸ್.ಮಹೇಶ್, ನಿರ್ದೇಶಕರಾದ ಗಂಗಾಧರಪ್ಪ, ಡಾ.ಪ್ರಭು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Mysore Hcmahadevappa Suttur suttrushree
admin September 28, 2023
Share this Article
Facebook Twitter Whatsapp Whatsapp LinkedIn Copy Link
Previous Article ಕಬಿನಿ ಜಲಾಶಯದ ಸುತ್ತ ಮುತ್ತ ನಿಷೇದಾಜ್ಞೆ ಜಾರಿ – ಡಿಸಿ ಕೆವಿ ರಾಜೇಂದ್ರ ಆದೇಶ
Next Article ರೈತ ಸಂಘಟನೆಗಳ ಪ್ರತಿಭಟನೆ ನಂಜನಗೂಡು ಬಂದ್ ಯಶಸ್ವಿ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?